ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಸಜಾಬಂಧಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕೈದಿ ಸಂಖ್ಯೆ 15528 ನೀಡಲಾಗಿದ್ದು, ಇಂದಿನಿಂದ ಜೈಲಿನಲ್ಲಿ ಕೈದಿ ಸಮವಸ್ತ್ರ ಧರಿಸಬೇಕಿದೆ.
ಜೈಲಿನ ಸಜಾಬಂಧಿ ಕೈದಿಗಳ ನಿಯಮಗಳನ್ನು ಪ್ರಜ್ವಲ್ ರೇವಣ್ಣ ಪಾಲಿಸಬೇಕಿದ್ದು, ನಿಯಮದ ಪ್ರಕಾರ ಜೈಲು ಅಧೀಕ್ಷಕರು ನೀಡುವ ಕೆಲಸ ಮಾಡಬೇಕು. ಇಂದು ಪ್ರಜ್ವಲ್ ರೇವಣ್ಣ ಅವರಿಗೆ ಜೈಲಿನ ಸಿಬ್ಬಂದಿ ಬಿಳಿ ಸಮವಸ್ತ್ರ ಕೊಡಲಿದ್ದಾರೆ. ಅಪರಾಧಿ ಪ್ರಜ್ವಲ್ ರೇವಣ್ಣರನ್ನು ಸಜಾಬಂಧಿ ಸೆಲ್ಗೆ ಶಿಫ್ಟ್ ಮಾಡಲಾಗಿದೆ.
ಜೈಲಿನೊಳಗೆ ಪ್ರಜ್ವಲ್ ರೇವಣ್ ಎಂಟು ಗಂಟೆ ಕೆಲಸ ಮಾಡಬೇಕು. ಕರಕುಶಲ ವಸ್ತು, ಮರ ಕೆಲಸ ಸೇರಿದಂತೆ ಯಾವುದಾದರೂ ಒಂದು ಕೆಲಸ ಆಯ್ಕೆ ಮಾಡಿಕೊಳ್ಳಬೇಕಿದೆ.
ಪ್ರಜ್ವಲ್ ಆಯ್ಕೆ ಮಾಡಿಕೊಂಡ ಕೆಲಸಕ್ಕೆ ತಕ್ಕಂತೆ ಸಂಬಳ ಪಾವತಿಸಲಾಗುತ್ತದೆ. ಮೊದಲು ಒಂದು ವರ್ಷ ಕೌಶಲ್ಯ ರಹಿತ ಎಂದು 524 ರೂ ಸಂಬಳ ನೀಡಲಾಗುತ್ತದೆ.
ಬಳಿಕ ಕೌಶಲ್ಯ ಮಟ್ಟಕ್ಕೆ ಏರಿಕೆ ಮಾಡಲಾಗುತ್ತದೆ. ಬಳಿಕ ಅನುಭವದ ನಂತರ ನುರಿತ ವರ್ಗಕ್ಕೆ ಅಧಿಕಾರಿಗಳು ಭರ್ತಿ ನೀಡಲಿದ್ದಾರೆ. ಇಷ್ಟು ದಿನ ವಿಚಾರಣಾ ಕೈದಿಯಾಗಿದ್ದ ಪ್ರಜ್ವಲ್ ರೇವಣ್ಣ ನಿನ್ನೆಯಿಂದ ಸಜಾಬಂಧಿಯಾಗಿದ್ದಾರೆ. ಇಂದಿನಿಂದ ಪ್ರಜ್ವಲ್ ರೇವಣ್ಣ ಜೀವನಶೈಲಿ ಸಂಪೂರ್ಣ ಬದಲಾಗಲಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…