ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ಕಾರ್ತಿಕ ಅಜ್ಞಾತ ಸ್ಥಳದಲ್ಲಿ ವಿಡಿಯೋ ಮಾಡಿ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.
ಮಾಜಿ ಕಾರು ಚಾಲಕ ಕಾರ್ತಿಕ್ ವಿಡಿಯೋ ಮಾಡಿರುವ ತುಣುಕು ಮಾಧ್ಯಮಕ್ಕೆ ಲಭ್ಯವಾಗಿದ್ದು, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಮತ್ತು ಪೋಟೋಗಳನ್ನು ನಾನು ಬಿಜೆಪಿಯ ದೇವರಾಜೇಗೌಡ ಅವರಿಗೆ ಮಾತ್ರ ನೀಡಿದ್ದೇನೆ ಹೊರತು ಕಾಂಗ್ರೆಸ್ನವರಿಗೆ ನಾನು ಕೊಟ್ಟಿಲ್ಲ, ನಾನು ಕಾಂಗ್ರೆಸ್ನವರಿಗೆ ಕೊಡುವುದಾಗಿದ್ದರೆ ಬಿಜೆಪಿಯ ದೇವರಾಜೇಗೌಡ ಬಳಿ ಏಕೆ ಹೋಗುತ್ತಿದ್ದೆ. ದೇವರಾಜೇಗೌಡರಿಗೆ ಬಿಟ್ಟು ಬೇರೆ ಯಾರಿಗೂ ಒಂದು ತುಣುಕನ್ನು ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾನು 15 ವರ್ಷದಿಂದ ಪ್ರಜ್ವಲ್ ಹಾಗೂ ಕುಟುಂಬದ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದೆ. ಆ ಸಂಬರ್ಧದಲ್ಲಿ ನನ್ನ ಜಮೀನನ್ನು ಬರೆಸಿಕೊಂಡು ನನ್ನ ಹಾಗೂ ನನ್ನ ಪತ್ನಿ ಮೇಲೆ ಹಲ್ಲೆ ಮಾಡಿ ಹಿಂಸೆ ನೀಡಿದ್ರು. ಹಾಗಾಗಿ ನಾನು ಒಂದು ವರ್ಷದ ಈಚೆಗೆ ಕೆಸಲ ಬಿಟ್ಟು ಅವರ ಮನೆಯಿಂದ ಹೊರ ಬಂದೆ. ಆ ಸಂದರ್ಭದಲ್ಲಿ ನನಗೆ ಯಾರು ನ್ಯಾಯ ಕೊಡಿಸಲಿಲ್ಲ. ಹಾಗಾಗಿ ಬಿಜೆಪಿ ಮುಖಂಡ ದೇವರಾಜೇಗೌಡ ಬಳಿ ಹೋಗಿ ತನಗಾದ ಅನ್ಯಾಯವನ್ನು ಹೇಳಿಕೊಂಡೆ.
ಅದೇ ಸಮಯದಲ್ಲಿ ದೇವೆರಾಜೇಗೌಡ ಅವರು ಪ್ರಜ್ವಲ್ ಕುಟುಂಬದ ವಿರುದ್ಧ ಹೋರಾಟ ಮಾಡುತ್ತಿದ್ದರು. ನಿನ್ನ ಬಳಿ ಇರುವ ಪೋಟೋ ಮತ್ತು ವಿಡಿಯೋಗಳನ್ನು ನನಗೆ ಕೊಡು. ನಾನು ಯಾರಿಗೂ ತೋರಿಸುವುದಿಲ್ಲ ಎಂದು ಭರವಸೆ ನೀಡಿದ್ದರಿಂದ ಅವರ ಮಾತನ್ನು ನಂಬಿ ನನ್ನ ಬಳಿ ಇದ್ದ ವಿಡಿಯೋದ ಒಂದು ಕಾಪಿಯನ್ನು ಅವರಿಗೆ ಕೊಟ್ಟೆ.
ಆದರೆ ಅವರು ಅದನ್ನು ಸ್ವಾರ್ಥಕ್ಕಾಗಿ ಬಳಸಿಕೊಂಡಿದ್ದಾರೋ ಅಥವಾ ಪೆನ್ಡ್ರೈವ್ ಹಂಚಿದ್ದಾರೋ ಎಂಬುದು ನನಗೆ ಗೊತ್ತಿಲ್ಲ. ವಿನಾಕಾರಣ ನನ್ನ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ನಾನು ಈ ಬಗ್ಗೆ ಎಲ್ಲಾ ವಿಚಾರವನ್ನು ಎಸ್ಐಟಿ ಮುಂದೆ ಹೇಳುತ್ತೇನೆ ಎಂದು ಅವರು ವಿಡಿಯೋ ತುಣುಕಿನಲ್ಲಿ ಹೇಳಿದ್ದಾರೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…