ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ಕಾರ್ತಿಕ ಅಜ್ಞಾತ ಸ್ಥಳದಲ್ಲಿ ವಿಡಿಯೋ ಮಾಡಿ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.
ಮಾಜಿ ಕಾರು ಚಾಲಕ ಕಾರ್ತಿಕ್ ವಿಡಿಯೋ ಮಾಡಿರುವ ತುಣುಕು ಮಾಧ್ಯಮಕ್ಕೆ ಲಭ್ಯವಾಗಿದ್ದು, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಮತ್ತು ಪೋಟೋಗಳನ್ನು ನಾನು ಬಿಜೆಪಿಯ ದೇವರಾಜೇಗೌಡ ಅವರಿಗೆ ಮಾತ್ರ ನೀಡಿದ್ದೇನೆ ಹೊರತು ಕಾಂಗ್ರೆಸ್ನವರಿಗೆ ನಾನು ಕೊಟ್ಟಿಲ್ಲ, ನಾನು ಕಾಂಗ್ರೆಸ್ನವರಿಗೆ ಕೊಡುವುದಾಗಿದ್ದರೆ ಬಿಜೆಪಿಯ ದೇವರಾಜೇಗೌಡ ಬಳಿ ಏಕೆ ಹೋಗುತ್ತಿದ್ದೆ. ದೇವರಾಜೇಗೌಡರಿಗೆ ಬಿಟ್ಟು ಬೇರೆ ಯಾರಿಗೂ ಒಂದು ತುಣುಕನ್ನು ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾನು 15 ವರ್ಷದಿಂದ ಪ್ರಜ್ವಲ್ ಹಾಗೂ ಕುಟುಂಬದ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದೆ. ಆ ಸಂಬರ್ಧದಲ್ಲಿ ನನ್ನ ಜಮೀನನ್ನು ಬರೆಸಿಕೊಂಡು ನನ್ನ ಹಾಗೂ ನನ್ನ ಪತ್ನಿ ಮೇಲೆ ಹಲ್ಲೆ ಮಾಡಿ ಹಿಂಸೆ ನೀಡಿದ್ರು. ಹಾಗಾಗಿ ನಾನು ಒಂದು ವರ್ಷದ ಈಚೆಗೆ ಕೆಸಲ ಬಿಟ್ಟು ಅವರ ಮನೆಯಿಂದ ಹೊರ ಬಂದೆ. ಆ ಸಂದರ್ಭದಲ್ಲಿ ನನಗೆ ಯಾರು ನ್ಯಾಯ ಕೊಡಿಸಲಿಲ್ಲ. ಹಾಗಾಗಿ ಬಿಜೆಪಿ ಮುಖಂಡ ದೇವರಾಜೇಗೌಡ ಬಳಿ ಹೋಗಿ ತನಗಾದ ಅನ್ಯಾಯವನ್ನು ಹೇಳಿಕೊಂಡೆ.
ಅದೇ ಸಮಯದಲ್ಲಿ ದೇವೆರಾಜೇಗೌಡ ಅವರು ಪ್ರಜ್ವಲ್ ಕುಟುಂಬದ ವಿರುದ್ಧ ಹೋರಾಟ ಮಾಡುತ್ತಿದ್ದರು. ನಿನ್ನ ಬಳಿ ಇರುವ ಪೋಟೋ ಮತ್ತು ವಿಡಿಯೋಗಳನ್ನು ನನಗೆ ಕೊಡು. ನಾನು ಯಾರಿಗೂ ತೋರಿಸುವುದಿಲ್ಲ ಎಂದು ಭರವಸೆ ನೀಡಿದ್ದರಿಂದ ಅವರ ಮಾತನ್ನು ನಂಬಿ ನನ್ನ ಬಳಿ ಇದ್ದ ವಿಡಿಯೋದ ಒಂದು ಕಾಪಿಯನ್ನು ಅವರಿಗೆ ಕೊಟ್ಟೆ.
ಆದರೆ ಅವರು ಅದನ್ನು ಸ್ವಾರ್ಥಕ್ಕಾಗಿ ಬಳಸಿಕೊಂಡಿದ್ದಾರೋ ಅಥವಾ ಪೆನ್ಡ್ರೈವ್ ಹಂಚಿದ್ದಾರೋ ಎಂಬುದು ನನಗೆ ಗೊತ್ತಿಲ್ಲ. ವಿನಾಕಾರಣ ನನ್ನ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ನಾನು ಈ ಬಗ್ಗೆ ಎಲ್ಲಾ ವಿಚಾರವನ್ನು ಎಸ್ಐಟಿ ಮುಂದೆ ಹೇಳುತ್ತೇನೆ ಎಂದು ಅವರು ವಿಡಿಯೋ ತುಣುಕಿನಲ್ಲಿ ಹೇಳಿದ್ದಾರೆ.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…