Mysore
24
moderate rain

Social Media

ಗುರುವಾರ, 09 ಏಪ್ರಿಲ 2026
Light
Dark

ಪೆನ್‌ಡ್ರೈವ್‌ ಪ್ರಕರಣ: ಎಸ್‌ಐಟಿ ಕಚೇರಿಗೆ ಬಂದ ಪ್ರಜ್ವಲ್‌ ಪರ ವಕೀಲರು

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಉಚ್ಛಾಟಿತ ಜೆಡಿಎಸ್‌ ಮುಖಂಡ ಪ್ರಜ್ವಲ್‌ ರೇವಣ್ಣ ಬಂಧನ ಭೀತಿಯಿಂದ ತಲೆ ಮರೆಸಿಕೊಂಡಿದ್ದವರನ್ನು ಎಸ್‌ಐಟಿ ಅಧಿಕಾರಿಗಳು ಗುರುವಾರ ತಡರಾತ್ರಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇಂದು ಎಸ್‌ಐಟಿ ಕಚೇರಿಗೆ ಪ್ರಜ್ವಲ್‌ನನ್ನು ಕರೆ ತರುವ ಸಾಧ್ಯತೆಗಳು ಹೆಚ್ಚಿದ್ದು, ಪ್ರಜ್ವಲ್‌ ಪರ ವಕೀಲರಾದ ಅರುಣ್‌ ಬೆಂಗಳೂರಿನ ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.

ಈ ಕುರಿತು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಈ ಸಂಬಂಧ ಟ್ವೀಟ್‌ ಮಾಡಿರುವ ಎಎನ್‌ಐ ಲೈಗಿಂಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್‌ ರೇವಣ್ಣ ರನ್ನು ಎಸ್‌ಐಟಿ ಅಧಿಕಾರಿಗಳು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಗುರುವಾರ ತಡರಾತ್ರಿ ಬಂಧಿಸಿ ಕರೆದೊಯ್ದಿದ್ದಾರೆ. ಇನ್ನು ಅವರನ್ನು ನೋಡಲು ಪ್ರಜ್ವಲ್‌ ಪರ ವಕೀಲರಾದ ಅರುಣ್‌ ಅವರು ಎಸ್‌ಐಟಿ ಕಚೇರಿ ಬಳಿ ಬಂದಿದ್ದಾರೆ ಎಂದು ವಿಡಿಯೋ ತುಣುಕಿನ ಜತೆ ಬರೆದುಕೊಂಡಿದ್ದಾರೆ.

ಪ್ರಜ್ವಲ್‌ ಬಂಧನಕ್ಕೆ ನ್ಯಾಯಾಲಯದಿಂದ ವಾರೆಂಟ್‌ ಜಾರಿಯಲ್ಲಿರುವ ಕಾರಣ ಅವರನ್ನು ಬಂಧಿಸಲಾಗಿದೆ. ಇವರೆಗೆ ಕಲೆ ಹಾಕಲಾಗಿರುವ ದಾಖಲೆಗಳ ಸಮೇತ ಪ್ರಜ್ವಲ್‌ರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಆರೋಪಿಯ ವಿಚಾರಣೆ ಅಗತ್ಯವಿರುವ ಕಾರಣ ನ್ಯಾಯಾಲಯದಲ್ಲಿ ಕಸ್ಟಡಿಗೆ ಪಡೆಯುವ ಬಗ್ಗೆ ಮನವಿ ಮಾಡಲಾಗುವುದು ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

https://x.com/ANI/status/1796389396884934892

Tags:
error: Content is protected !!