ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಉಚ್ಛಾಟಿತ ಜೆಡಿಎಸ್ ಮುಖಂಡ ಪ್ರಜ್ವಲ್ ರೇವಣ್ಣ ಬಂಧನ ಭೀತಿಯಿಂದ ತಲೆ ಮರೆಸಿಕೊಂಡಿದ್ದವರನ್ನು ಎಸ್ಐಟಿ ಅಧಿಕಾರಿಗಳು ಗುರುವಾರ ತಡರಾತ್ರಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇಂದು ಎಸ್ಐಟಿ ಕಚೇರಿಗೆ ಪ್ರಜ್ವಲ್ನನ್ನು ಕರೆ ತರುವ ಸಾಧ್ಯತೆಗಳು ಹೆಚ್ಚಿದ್ದು, ಪ್ರಜ್ವಲ್ ಪರ ವಕೀಲರಾದ ಅರುಣ್ ಬೆಂಗಳೂರಿನ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ.
ಈ ಕುರಿತು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಎಎನ್ಐ ಲೈಗಿಂಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ರನ್ನು ಎಸ್ಐಟಿ ಅಧಿಕಾರಿಗಳು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಗುರುವಾರ ತಡರಾತ್ರಿ ಬಂಧಿಸಿ ಕರೆದೊಯ್ದಿದ್ದಾರೆ. ಇನ್ನು ಅವರನ್ನು ನೋಡಲು ಪ್ರಜ್ವಲ್ ಪರ ವಕೀಲರಾದ ಅರುಣ್ ಅವರು ಎಸ್ಐಟಿ ಕಚೇರಿ ಬಳಿ ಬಂದಿದ್ದಾರೆ ಎಂದು ವಿಡಿಯೋ ತುಣುಕಿನ ಜತೆ ಬರೆದುಕೊಂಡಿದ್ದಾರೆ.
ಪ್ರಜ್ವಲ್ ಬಂಧನಕ್ಕೆ ನ್ಯಾಯಾಲಯದಿಂದ ವಾರೆಂಟ್ ಜಾರಿಯಲ್ಲಿರುವ ಕಾರಣ ಅವರನ್ನು ಬಂಧಿಸಲಾಗಿದೆ. ಇವರೆಗೆ ಕಲೆ ಹಾಕಲಾಗಿರುವ ದಾಖಲೆಗಳ ಸಮೇತ ಪ್ರಜ್ವಲ್ರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಆರೋಪಿಯ ವಿಚಾರಣೆ ಅಗತ್ಯವಿರುವ ಕಾರಣ ನ್ಯಾಯಾಲಯದಲ್ಲಿ ಕಸ್ಟಡಿಗೆ ಪಡೆಯುವ ಬಗ್ಗೆ ಮನವಿ ಮಾಡಲಾಗುವುದು ಎಂದು ಎಸ್ಐಟಿ ಮೂಲಗಳು ತಿಳಿಸಿವೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…