ರಾಜ್ಯ

ರಾಜ್ಯಕ್ಕೆ ಬಾರದ ಪ್ರಜ್ವಲ್:‌ ಟಿಕೆಟ್‌ ಬುಕ್‌ ಮಾಡಿದರೂ ವಿಮಾನ ಹತ್ತದ ಸಂಸದ

ಬೆಂಗಳೂರು: ಲೈಂಗಿಕ ಪ್ರಕರಣದ ಆರೋಪಿ ಪ್ರಜ್ವಲ್‌ ರೇವಣ್ಣ ಅವರು ಜರ್ಮನಿಯಿಂದ ಇಂದು(ಮೇ.15) ರಾಜ್ಯ ರಾಜಾಧಾನಿಗೆ ಆಗಮಿಸುತ್ತಾರೆ ಎನ್ನುವ ಸುದ್ದಿ ಇತ್ತು. ಆದರೆ ಪ್ರಜ್ವಲ್‌ ಇಂದೂ ಸಹ ರಾಜ್ಯಕ್ಕೆ ಮರಳಿ ಬಾರದೆ ವಿದೇಶದಲ್ಲೆ ಉಳಿದುಕೊಂಡಿದ್ದು, ಬೆಂಗಳೂರಿಗೆ ವಾಪಸ್‌ ಆಗುವುದನ್ನು ಮತ್ತೆ ಮುಂದೂಡಿದ್ದಾರೆ.

ಪ್ರಜ್ವಲ್‌ ಇಂದು (ಮೇ.15) ಬೆಂಗಳೂರಿಗೆ ಆಗಮಿಸುವುದಕ್ಕೆ ಸಿದ್ಧತೆ ಮಾಡಿಕೊಂಡು, ವಿಮಾನ ಟಿಕೆಟ್‌ ಸಹ ಬುಕ್‌ ಮಾಡಿದ್ದರು. ಈ ಮಾಹಿತಿ ತಿಳಿಯುತ್ತಿದಂತೆ ಎಸ್‌ಐಟಿ ಅಧಿಕಾರಿಗಳು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಕಾದು ಕುಳಿತ್ತಿದ್ದರು. ಆದರೆ ಜರ್ಮನಿಯಿಂದ ಬುಧುವಾರ (ಮೇ.15) ಹೊರಟ ವಿಮಾನದಲ್ಲಿ ಪ್ರಜ್ವಲ್‌ ಇಲ್ಲ ಎಂಬ ಮಾಹಿತಿ ಸಂಜೆ ವೇಳೆಗೆ ಎಸ್‌ಐಟಿ ಅಧಿಕಾರಿಗಳಿಗೆ ಲಭಿಸಿತು. ಪ್ರಜ್ವಲ್‌ ಈಗಾಗಲೇ ಎರಡು ಸಲ ವಿಮಾನ ಟಿಕೆಟ್‌ ಬುಕ್‌ ಮಾಡಿ ವಿಮಾನ ಹತ್ತದೆ ಅಲ್ಲೇ ಉಳಿದುಕೊಂಡಿದ್ದರು. ಇದೀಗ ಮತ್ತೊಮ್ಮೆ ಬುಕ್‌ ಮಾಡಿದ ಟಿಕೆಟ್‌ನ್ನು ಕೊನೆಕ್ಷಣದಲ್ಲಿ ರದ್ದುಪಡಿಸಿದ್ದಾರೆ.

ಪ್ರಜ್ವಲ್‌ ತಮ್ಮ ವಕೀಲರ ಜೊತೆ ನಿರಂತರ ಸಂಪರ್ಕದಲ್ಲಿದ್ದು, ವಕೀಲರು ನೀಡುತ್ತಿರುವ ಸೂಚನೆಗಳನ್ನು ಪ್ರಜ್ವಲ್‌ ಪಾಲಿಸುತ್ತಿದ್ದಾರೆ ಎನ್ನಲಾಗಿದೆ. ವಕೀಲರು ಯಾವಾಗ ಬರಲು ಹೇಳುತ್ತಾರೋ ಅಂದು ಪ್ರಜ್ವಲ್‌ ರಾಜ್ಯಕೆ ಬರುವ ನಿರೀಕ್ಷೆಯಿದೆ ಎನ್ನಲಾಗಿದೆ.

ಮಹಿಳೆ ಅಪಹರಣ ಪ್ರಕರಣದಲಿ ಬಂಧನದಲ್ಲಿದ್ದ ಶಾಸಕ ರೇವಣ್ಣಗೆ ಷರತ್ತುಬದ್ಧ ಜಾಮೀನು ಸಿಕ್ಕಿದ್ದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಬಿಡುಗಡೆಯಾದಂದಿನಿಂದ ರೇವಣ್ಣ ಟೆಂಪಲ್‌ ರನ್‌ ಮುಂದುವರೆಸಿದ್ದು, ಇಷ್ಟಾರ್ಥ ದೇವಾಲಯಕ್ಕೆ ಭೇಟಿ ನೀಡಿ ದೇವರ ಮೊರೆ ಹೋಗಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

4 hours ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

5 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

5 hours ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

6 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

6 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

8 hours ago