ಬೆಂಗಳೂರು: ಲೈಂಗಿಕ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಿಂದ ಇಂದು(ಮೇ.15) ರಾಜ್ಯ ರಾಜಾಧಾನಿಗೆ ಆಗಮಿಸುತ್ತಾರೆ ಎನ್ನುವ ಸುದ್ದಿ ಇತ್ತು. ಆದರೆ ಪ್ರಜ್ವಲ್ ಇಂದೂ ಸಹ ರಾಜ್ಯಕ್ಕೆ ಮರಳಿ ಬಾರದೆ ವಿದೇಶದಲ್ಲೆ ಉಳಿದುಕೊಂಡಿದ್ದು, ಬೆಂಗಳೂರಿಗೆ ವಾಪಸ್ ಆಗುವುದನ್ನು ಮತ್ತೆ ಮುಂದೂಡಿದ್ದಾರೆ.
ಪ್ರಜ್ವಲ್ ಇಂದು (ಮೇ.15) ಬೆಂಗಳೂರಿಗೆ ಆಗಮಿಸುವುದಕ್ಕೆ ಸಿದ್ಧತೆ ಮಾಡಿಕೊಂಡು, ವಿಮಾನ ಟಿಕೆಟ್ ಸಹ ಬುಕ್ ಮಾಡಿದ್ದರು. ಈ ಮಾಹಿತಿ ತಿಳಿಯುತ್ತಿದಂತೆ ಎಸ್ಐಟಿ ಅಧಿಕಾರಿಗಳು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಕಾದು ಕುಳಿತ್ತಿದ್ದರು. ಆದರೆ ಜರ್ಮನಿಯಿಂದ ಬುಧುವಾರ (ಮೇ.15) ಹೊರಟ ವಿಮಾನದಲ್ಲಿ ಪ್ರಜ್ವಲ್ ಇಲ್ಲ ಎಂಬ ಮಾಹಿತಿ ಸಂಜೆ ವೇಳೆಗೆ ಎಸ್ಐಟಿ ಅಧಿಕಾರಿಗಳಿಗೆ ಲಭಿಸಿತು. ಪ್ರಜ್ವಲ್ ಈಗಾಗಲೇ ಎರಡು ಸಲ ವಿಮಾನ ಟಿಕೆಟ್ ಬುಕ್ ಮಾಡಿ ವಿಮಾನ ಹತ್ತದೆ ಅಲ್ಲೇ ಉಳಿದುಕೊಂಡಿದ್ದರು. ಇದೀಗ ಮತ್ತೊಮ್ಮೆ ಬುಕ್ ಮಾಡಿದ ಟಿಕೆಟ್ನ್ನು ಕೊನೆಕ್ಷಣದಲ್ಲಿ ರದ್ದುಪಡಿಸಿದ್ದಾರೆ.
ಪ್ರಜ್ವಲ್ ತಮ್ಮ ವಕೀಲರ ಜೊತೆ ನಿರಂತರ ಸಂಪರ್ಕದಲ್ಲಿದ್ದು, ವಕೀಲರು ನೀಡುತ್ತಿರುವ ಸೂಚನೆಗಳನ್ನು ಪ್ರಜ್ವಲ್ ಪಾಲಿಸುತ್ತಿದ್ದಾರೆ ಎನ್ನಲಾಗಿದೆ. ವಕೀಲರು ಯಾವಾಗ ಬರಲು ಹೇಳುತ್ತಾರೋ ಅಂದು ಪ್ರಜ್ವಲ್ ರಾಜ್ಯಕೆ ಬರುವ ನಿರೀಕ್ಷೆಯಿದೆ ಎನ್ನಲಾಗಿದೆ.
ಮಹಿಳೆ ಅಪಹರಣ ಪ್ರಕರಣದಲಿ ಬಂಧನದಲ್ಲಿದ್ದ ಶಾಸಕ ರೇವಣ್ಣಗೆ ಷರತ್ತುಬದ್ಧ ಜಾಮೀನು ಸಿಕ್ಕಿದ್ದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಬಿಡುಗಡೆಯಾದಂದಿನಿಂದ ರೇವಣ್ಣ ಟೆಂಪಲ್ ರನ್ ಮುಂದುವರೆಸಿದ್ದು, ಇಷ್ಟಾರ್ಥ ದೇವಾಲಯಕ್ಕೆ ಭೇಟಿ ನೀಡಿ ದೇವರ ಮೊರೆ ಹೋಗಿದ್ದಾರೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…