ರಾಜ್ಯ

ರಾಜ್ಯಕ್ಕೆ ಬಾರದ ಪ್ರಜ್ವಲ್:‌ ಟಿಕೆಟ್‌ ಬುಕ್‌ ಮಾಡಿದರೂ ವಿಮಾನ ಹತ್ತದ ಸಂಸದ

ಬೆಂಗಳೂರು: ಲೈಂಗಿಕ ಪ್ರಕರಣದ ಆರೋಪಿ ಪ್ರಜ್ವಲ್‌ ರೇವಣ್ಣ ಅವರು ಜರ್ಮನಿಯಿಂದ ಇಂದು(ಮೇ.15) ರಾಜ್ಯ ರಾಜಾಧಾನಿಗೆ ಆಗಮಿಸುತ್ತಾರೆ ಎನ್ನುವ ಸುದ್ದಿ ಇತ್ತು. ಆದರೆ ಪ್ರಜ್ವಲ್‌ ಇಂದೂ ಸಹ ರಾಜ್ಯಕ್ಕೆ ಮರಳಿ ಬಾರದೆ ವಿದೇಶದಲ್ಲೆ ಉಳಿದುಕೊಂಡಿದ್ದು, ಬೆಂಗಳೂರಿಗೆ ವಾಪಸ್‌ ಆಗುವುದನ್ನು ಮತ್ತೆ ಮುಂದೂಡಿದ್ದಾರೆ.

ಪ್ರಜ್ವಲ್‌ ಇಂದು (ಮೇ.15) ಬೆಂಗಳೂರಿಗೆ ಆಗಮಿಸುವುದಕ್ಕೆ ಸಿದ್ಧತೆ ಮಾಡಿಕೊಂಡು, ವಿಮಾನ ಟಿಕೆಟ್‌ ಸಹ ಬುಕ್‌ ಮಾಡಿದ್ದರು. ಈ ಮಾಹಿತಿ ತಿಳಿಯುತ್ತಿದಂತೆ ಎಸ್‌ಐಟಿ ಅಧಿಕಾರಿಗಳು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಕಾದು ಕುಳಿತ್ತಿದ್ದರು. ಆದರೆ ಜರ್ಮನಿಯಿಂದ ಬುಧುವಾರ (ಮೇ.15) ಹೊರಟ ವಿಮಾನದಲ್ಲಿ ಪ್ರಜ್ವಲ್‌ ಇಲ್ಲ ಎಂಬ ಮಾಹಿತಿ ಸಂಜೆ ವೇಳೆಗೆ ಎಸ್‌ಐಟಿ ಅಧಿಕಾರಿಗಳಿಗೆ ಲಭಿಸಿತು. ಪ್ರಜ್ವಲ್‌ ಈಗಾಗಲೇ ಎರಡು ಸಲ ವಿಮಾನ ಟಿಕೆಟ್‌ ಬುಕ್‌ ಮಾಡಿ ವಿಮಾನ ಹತ್ತದೆ ಅಲ್ಲೇ ಉಳಿದುಕೊಂಡಿದ್ದರು. ಇದೀಗ ಮತ್ತೊಮ್ಮೆ ಬುಕ್‌ ಮಾಡಿದ ಟಿಕೆಟ್‌ನ್ನು ಕೊನೆಕ್ಷಣದಲ್ಲಿ ರದ್ದುಪಡಿಸಿದ್ದಾರೆ.

ಪ್ರಜ್ವಲ್‌ ತಮ್ಮ ವಕೀಲರ ಜೊತೆ ನಿರಂತರ ಸಂಪರ್ಕದಲ್ಲಿದ್ದು, ವಕೀಲರು ನೀಡುತ್ತಿರುವ ಸೂಚನೆಗಳನ್ನು ಪ್ರಜ್ವಲ್‌ ಪಾಲಿಸುತ್ತಿದ್ದಾರೆ ಎನ್ನಲಾಗಿದೆ. ವಕೀಲರು ಯಾವಾಗ ಬರಲು ಹೇಳುತ್ತಾರೋ ಅಂದು ಪ್ರಜ್ವಲ್‌ ರಾಜ್ಯಕೆ ಬರುವ ನಿರೀಕ್ಷೆಯಿದೆ ಎನ್ನಲಾಗಿದೆ.

ಮಹಿಳೆ ಅಪಹರಣ ಪ್ರಕರಣದಲಿ ಬಂಧನದಲ್ಲಿದ್ದ ಶಾಸಕ ರೇವಣ್ಣಗೆ ಷರತ್ತುಬದ್ಧ ಜಾಮೀನು ಸಿಕ್ಕಿದ್ದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಬಿಡುಗಡೆಯಾದಂದಿನಿಂದ ರೇವಣ್ಣ ಟೆಂಪಲ್‌ ರನ್‌ ಮುಂದುವರೆಸಿದ್ದು, ಇಷ್ಟಾರ್ಥ ದೇವಾಲಯಕ್ಕೆ ಭೇಟಿ ನೀಡಿ ದೇವರ ಮೊರೆ ಹೋಗಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

8 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

9 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

10 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

11 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

11 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

15 hours ago