ಬೆಂಗಳೂರು: ಸದಾ ತಮ್ಮ ಹೇಳಿಕೆಗಳಿಂದಲೇ ಒಂದಲ್ಲೊಂದು ವಿವಾದವನ್ನು ಸೃಷ್ಟಿಸುವ ಪ್ರಕಾಶ್ ರಾಜ್ ಇದೀಗ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರುವ ಭರದಲ್ಲಿ ಆಪರೇಷನ್ ಸಿಂಧೂರ್ ಹಾಗೂ ಭಾರತೀಯ ನಾರಿಯರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ಪ್ರಕಾಶ್ ರಾಜ್ ವ್ಯಂಗ್ಯ ಮತ್ತು ಅಸಹ್ಯದ ಟ್ವೀಟ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಫೋಟೋವೊಂದನ್ನು ತಮ್ಮ ಟ್ವೀಟರ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.
26 ಭಾರತೀಯ ನಾರಿಯರ ಸಿಂಧೂರವನ್ನು ಅಳಿಸಿದ್ದಕ್ಕಾಗಿ, ಸರ್ಕಾರ ಪಾಕಿಸ್ತಾನದ ಮೇಲೆ ನಡೆಸಿದ ದಾಳಿಗೆ ಆಪರೇಷನ್ ಸಿಂಧೂರ ಎಂಬ ಹೆಸರನ್ನಿಟ್ಟಿದೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಕಾಶ್ ರಾಜ್ ಒನ್ ನೇಷನ್ ಒನ್ ಹಸ್ಬಂಡ್ ಎಂದು ಟ್ವೀಟ್ ಮಾಡಿದ್ದಾರೆ. ಮೋದಿ ಸರ್ಕಾರ ಪ್ರತಿಯೊಂದು ಮನೆಗೆ ಸಿಂಧೂರವನ್ನು ಕಳುಹಿಸಲಿದೆ. ಇದು ಒಂದು ತಿಂಗಳುಗಳ ಕಾಲ ನಡೆಯಲಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಟ್ವೀಟ್ ನೋಡಿದ ನೆಟ್ಟಿಗರು ನಟನಿಗೆ ಛೀಮಾರಿ ಹಾಕುತ್ತಿದ್ದಾರೆ.





