ರಾಜ್ಯ

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ. ಒಬ್ಬ ಜವಾಬ್ದಾರಿಯುತ ನಾಗರಿಕನಾಗಿ ದೇಶದ ಕಾನೂನು ಮತ್ತು ಸಂವಿಧಾನಕ್ಕೆ ತಲೆ ಬಾಗುತ್ತೇನೆ ಎಂದು ಚಿತ್ರನಟ ಪ್ರಕಾಶ್ ರಾಜ್ ತಮ್ಮ ಮೇಲಿನ ಆರೋಪಗಳನ್ನು ಸಾರಾ ಸಗಾಟಾಗಿ ತಳ್ಳಿ ಹಾಕಿದ್ದಾರೆ.

ತಮ್ಮನ್ನು ಕೆಲವರು ತಪ್ಪಾಗಿ ಉಲ್ಲೇಖಿಸುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಪೋಸ್ಟ್‌ನಲ್ಲಿ ಯಾವುದೇ ಮಾಧ್ಯಮ ಸಂಸ್ಥೆಗಳನ್ನು ನೇರವಾಗಿ ಮಾರಿಕೊಂಡ ಮಾಧ್ಯಮಗಳು ಎಂದು ಹೇಳಿಲ್ಲ. ಆದರೆ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಕೆಲವು ವಿಷಯಗಳನ್ನು ತಿರುಚಲಾಗುತ್ತಿದೆ ಎಂದು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಬುಧವಾರ ಬೆಂಗಳೂರಿನ ಪ್ರೆಸ್ ಕ್ಲಬ್‍ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಪ್ರಕಾಶ್ ರಾಜ್ ಧರ್ಮಸ್ಥಳ ಪ್ರಕರಣದಲ್ಲಿ ನನ್ನ ಹೆಸರನ್ನು ಯಾವ ಕಾರಣಕ್ಕಾಗಿ ತೆಗೆದು ಹಾಕುತ್ತಿದ್ದಾರೋ ಗೊತ್ತಿಲ್ಲ. ನಿಜ ಹೇಳಬೇಕೆಂದರೆ ನಾನು ಈವರೆಗೂ ಧರ್ಮಸ್ಥಳಕ್ಕೆ ಹೋಗಿಲ್ಲ. ಆದರೆ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರ ಬಗ್ಗೆ ಅಪಾರವಾದ ಗೌರವವಿದೆ ಎಂದು ಹೇಳಿದರು.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ನಿಲುವು ಸ್ಪಷ್ಟಪಡಿಸಿರುವ ಅವರು, ತಾವು ಯಾವ ಧರ್ಮದ ವಿರುದ್ಧವೂ ಅಲ್ಲ, ಬದಲಾಗಿ ಅನ್ಯಾಯದ ವಿರುದ್ಧ ಮಾತ್ರ ಧ್ವನಿ ಎತ್ತುತ್ತೇನೆ. ಸೌಜನ್ಯ ಕೊಲೆ ಪ್ರಕರಣ ಸೇರಿದಂತೆ ಧರ್ಮಸ್ಥಳದ ಸುತ್ತ ನಡೆದಿರುವ ಅಸಹಜ ಸಾವುಗಳ ಬಗ್ಗೆ ನ್ಯಾಯಾಂಗ ಹಾಗೂ ತನಿಖಾ ಸಂಸ್ಥೆಗಳು ಸಮಗ್ರವಾಗಿ ಪರಿಶೀಲಿಸಬೇಕು ಎಂಬುದು ನನ್ನ ಉದ್ದೇಶ ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

2 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

3 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

4 hours ago

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

8 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

8 hours ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

8 hours ago