ರಾಜ್ಯ

ಜಿಎಸ್‌ಟಿ ನೋಟಿಸ್‌ : ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದೇನು ?

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೆರಿಗೆ ಬಾಕಿ ನೋಟಿಸ್ ಕೊಟ್ಟು, ಇದೀಗ ರಾಜ್ಯ ಸರ್ಕಾರಕ್ಕೂ ಹಾಗೂ ಜಿಎಸ್‌ಟಿ ನೋಟಿಸ್‌ಗೂ ಯಾವುದೇ ಸಂಬಂಧವಿಲ್ಲ ಅಂತ ಹೇಳುತ್ತಿರೋದು ನಿಜಕ್ಕೂ ಹಾಸ್ಯಾಸ್ಪದವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾಸ್‌ ಜೋಶಿ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, GST ನಲ್ಲಿ ಕೇಂದ್ರ ಸರ್ಕಾರದ ಅಡಿಯಲ್ಲಿ #CGST ಮತ್ತು ರಾಜ್ಯ ಸರ್ಕಾರಗಳ‌ ಅಡಿಯಲ್ಲಿ #SGST ಎರಡು ಭಾಗಗಳಿದೆ. ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದು ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ. ಇದರಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಹೇಳಿದ್ದಾರೆ.

ಜಿ ಎಸ್ ಟಿ‌ ಕೌನ್ಸಿಲ್ ನಲ್ಲಿ ಯಾವುದೇ ತೀರ್ಮಾನ‌ ತಗೆದುಕೊಳ್ಳಲು ಮಹತ್ವದ ಪಾತ್ರ ವಹಿಸಿರುವುದು ರಾಜ್ಯ ಸರ್ಕಾರಗಳು. ಕೇಂದ್ರ ಸರ್ಕಾರಕ್ಕೆ ಕೇವಲ 3 ನೇ ಒಂದು ಭಾಗ ಮಾತ್ರ ಅಧಿಕಾರವಿದೆ. ಉಳಿದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿದೆ. 3ನೇ ಎರಡು ಭಾಗದಷ್ಟು ಅಧಿಕಾರ ಹೊಂದಿರುವ ರಾಜ್ಯ ‌ಸರ್ಕಾರಗಳ ನಿರ್ಣಯವೇ ಅಂತಿಮವಾಗಿರಲಿದೆ. ಇದೀಗ ಹಣ್ಣು, ಹಾಲು, ತರಕಾರಿ ಸೇರಿದಂತೆ ದಿನನಿತ್ಯದ ಅಗತ್ಯ ಸರಕು ಸೇವಾ ವ್ಯಾಪಾರಿಗಳಿಗೆ ನೋಟಿಸ್ ನೀಡಿ‌, ಅವರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಬೇರೆ ಯಾವುದೇ ರಾಜ್ಯಗಳಲ್ಲಿ ನೀಡದ ನೋಟಿಸ್, ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿದೆ. ಯುಪಿಐ ಟ್ರಾನ್ಸಾಕ್ಷನ್ ಇದೀಗ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಈ ಮಧ್ಯೆ ರಾಜ್ಯದಲ್ಲಿ ಡಿಜಿಟಲ್ ಟ್ರಾನ್ಸಾಕ್ಷನ್ ಹದಗೆಡಿಸುವ ದುಸ್ಸಾಹಸಕ್ಕೆ ಕಾಂಗ್ರೆಸ್ ಸರ್ಕಾರ ಕೈಹಾಕಿರುವುದು ನಿಜಕ್ಕೂ ದುರಂತ ಎಂದು ವಿಶ್ಲೇಷಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

1 hour ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

1 hour ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

1 hour ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

1 hour ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

1 hour ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

1 hour ago