ಹುಬ್ಬಳ್ಳಿ : ಏನು ಮಾಡಿಲ್ಲ ಎನ್ನುವುದಾದರೆ ಮೈಸೂರು ಡಿಸಿ ವರ್ಗಾವಣೆ ಮಾಡಿದ್ದು ಯಾಕೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಈ ಕುರಿತು ಮಾತನಾಡಿದ ಅವರು, ಮುಡಾ ಹಗರಣ ಬಹಳ ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರವಾಗಿದೆ. ಮೇಲ್ನೋಟಕ್ಕೆ ಇದು ಸ್ಪಷ್ಟವಾಗಿದೆ. ೨೦೧೭ ರಲ್ಲಿ ಈ ನಿರ್ಣಯಗಳಾಗಿವೆ. ಸಿಎಂ ಸಿದ್ದರಾಮಯ್ಯ ಅವರ ಗಮನದಲ್ಲೆ ಆಗಿರುವ ಬಹುದೊಡ್ಡ ಹಗರಣ ಇದು ಎಂದು ಆರೋಪಿಸಿದರು.
ಅಲ್ಲದೆ ಈ ಹಗರಣದಲ್ಲಿ ೪ ಸಾವಿರ ಕೋಟಿ ಅಕ್ರಮ ಎಸಗಿರುವ ಬಗ್ಗೆ ಆರೋಪಗಳಿಗೆ. ಬಿಜೆಪಿ ಕಾಲದಲ್ಲಿ ಕೊಟ್ಟಿದ್ದು ಎನ್ನುತ್ತಾರೆ. ಈ ಅವ್ಯವಹಾರ ಆಗಿದ್ದು೨೦೧೩ ರಿಂದ ೨೦೧೮ ರವರೆಗೆ. ನೀವು ಏನು ಮಾಡಿಲ್ಲ ಅಂದ್ರೆ ಡಿಸಿ ಯಾಕೆ ವರ್ಗಾವಣೆ ಮಾಡಿದ್ದೀರಿ..? ಡಿಸಿ ಕಳೆದ ಒಂದು ವರ್ಷದಲ್ಲಿ ೧೫ ಪತ್ರ ಬರೆದಿದ್ದಾರೆ. ಅದರಲ್ಲಿ ಸಿದ್ದರಾಮಯ್ಯ ಹಾಗೂ ಮಗನ ಜಮೀನು ವಶಪಡಿಸಿಕೊಂಡಿದ್ದಾರೆ ಎಂದರು.
ಜೊತೆಗೆ ಇದು ತಮ್ಮ ಸ್ವಂತ ಲಾಭಕ್ಕೆ ಮಾಡಿಕೊಳ್ಳಲು ಮಾಡಿರುವ ದೊಡ್ಡ ಹಗರಣ. ಸಿದ್ದರಾಮಯ್ಯ ಏನು ಮಾಡಿಲ್ಲ ಎನ್ನುವುದಾದರೆ ಪ್ರಕರಣದ ತನಿಖೆಯನ್ನ ಸಿಬಿಐಗೆ ಕೊಡಬೇಕು ಎಂದು ಆಗ್ರಹಿಸಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…