ಹುಬ್ಬಳ್ಳಿ : ಏನು ಮಾಡಿಲ್ಲ ಎನ್ನುವುದಾದರೆ ಮೈಸೂರು ಡಿಸಿ ವರ್ಗಾವಣೆ ಮಾಡಿದ್ದು ಯಾಕೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಈ ಕುರಿತು ಮಾತನಾಡಿದ ಅವರು, ಮುಡಾ ಹಗರಣ ಬಹಳ ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರವಾಗಿದೆ. ಮೇಲ್ನೋಟಕ್ಕೆ ಇದು ಸ್ಪಷ್ಟವಾಗಿದೆ. ೨೦೧೭ ರಲ್ಲಿ ಈ ನಿರ್ಣಯಗಳಾಗಿವೆ. ಸಿಎಂ ಸಿದ್ದರಾಮಯ್ಯ ಅವರ ಗಮನದಲ್ಲೆ ಆಗಿರುವ ಬಹುದೊಡ್ಡ ಹಗರಣ ಇದು ಎಂದು ಆರೋಪಿಸಿದರು.
ಅಲ್ಲದೆ ಈ ಹಗರಣದಲ್ಲಿ ೪ ಸಾವಿರ ಕೋಟಿ ಅಕ್ರಮ ಎಸಗಿರುವ ಬಗ್ಗೆ ಆರೋಪಗಳಿಗೆ. ಬಿಜೆಪಿ ಕಾಲದಲ್ಲಿ ಕೊಟ್ಟಿದ್ದು ಎನ್ನುತ್ತಾರೆ. ಈ ಅವ್ಯವಹಾರ ಆಗಿದ್ದು೨೦೧೩ ರಿಂದ ೨೦೧೮ ರವರೆಗೆ. ನೀವು ಏನು ಮಾಡಿಲ್ಲ ಅಂದ್ರೆ ಡಿಸಿ ಯಾಕೆ ವರ್ಗಾವಣೆ ಮಾಡಿದ್ದೀರಿ..? ಡಿಸಿ ಕಳೆದ ಒಂದು ವರ್ಷದಲ್ಲಿ ೧೫ ಪತ್ರ ಬರೆದಿದ್ದಾರೆ. ಅದರಲ್ಲಿ ಸಿದ್ದರಾಮಯ್ಯ ಹಾಗೂ ಮಗನ ಜಮೀನು ವಶಪಡಿಸಿಕೊಂಡಿದ್ದಾರೆ ಎಂದರು.
ಜೊತೆಗೆ ಇದು ತಮ್ಮ ಸ್ವಂತ ಲಾಭಕ್ಕೆ ಮಾಡಿಕೊಳ್ಳಲು ಮಾಡಿರುವ ದೊಡ್ಡ ಹಗರಣ. ಸಿದ್ದರಾಮಯ್ಯ ಏನು ಮಾಡಿಲ್ಲ ಎನ್ನುವುದಾದರೆ ಪ್ರಕರಣದ ತನಿಖೆಯನ್ನ ಸಿಬಿಐಗೆ ಕೊಡಬೇಕು ಎಂದು ಆಗ್ರಹಿಸಿದರು.
ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ…
ಬೆಂಗಳೂರು : ಕರ್ನಾಟಕದಿಂದ ಚುನಾಯಿತರಾಗಿ ಕೇಂದ್ರದಲ್ಲಿ ಸಂಸದರಾಗಿ, ಮಂತ್ರಿಯಾಗಿರುವವರಿಗೆ ಕಿಂಚಿತ್ ರಾಜ್ಯದ ಜನರ ಬಗ್ಗೆ ಗೌರವ, ಕಾಳಜಿ ಇದ್ದರೆ ಮಹಾತ್ಮಗಾಂಧಿ…
ಬೆಂಗಳೂರು : ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಗೀಳು ಕಡಿಮೆ ಮಾಡಿ, ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಧಾರಣೆ…
ಬೆಂಗಳೂರು : ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿದೆ…
ಹೊಸದಿಲ್ಲಿ : ಬಜೆಟ್ ನಂತರ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ರೈಲ್ವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ,…
ಹನೂರು : ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಕೊಳ್ಳೇಗಾಲ ವಾಸವಿ ಪ್ರಥಮ ದರ್ಜೆ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು…