ರಾಜ್ಯ

ಗೃಹಲಕ್ಷ್ಮೀ ಯೋಜನೆ ಹಣ ಪಡೆದ ಪ್ರಣತಿ ಪ್ರಕಾಶ್‌: ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿ ಸಂತಸ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆದ ಮೊದಲ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿ ಪ್ರಣತಿ ಪ್ರಕಾಶ್ ಅವರ ಸಂತಸದ ನುಡಿಗಳಿಗೆ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ರಣತಿ ಪ್ರಕಾಶ್‌ ಅವರಂತಹ ಅಲ್ಪಸಂಖ್ಯಾತರು ಅವಕಾಶ ಹಾಗೂ ಸೌಲಭ್ಯಗಳಿಂದ ವಂಚಿತರಾಗಿರುವ ಲಿಂಗತ್ವ ಅಲ್ಪಸಂಖ್ಯಾತರು ಆರ್ಥಿಕವಾಗಿ ಸಶಕ್ತರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಆ ಮೂಲಕ ಅವರು ಎಲ್ಲರಂತೆ ಘನತೆಯ ಬದುಕು ಕಟ್ಟಿಕೊಳ್ಳಬೇಕು ಎಂಬ ಉದ್ದೇಶದಿಂದ ಕೇವಲ ಮಹಿಳೆಯರಿಗೆ ಮೀಸಲಾಗಿದ್ದ ಗೃಹಲಕ್ಷ್ಮಿ ಯೋಜನೆಯನ್ನು ಲಿಂಗತ್ವ ಅಲ್ಪಸಂಖ್ಯಾತರಿಗೂ ವಿಸ್ತರಿಸುವ ನಿರ್ಧಾರ ಕೈಗೊಂಡಿದ್ದೆವು. ನಮ್ಮ ನಿರ್ಧಾರ ಯಾಕೆ ಸೂಕ್ತವಾದುದ್ದು ಎಂಬುದನ್ನು ಇವರ ಮಾತುಗಳು ಪ್ರತಿಬಿಂಬಿಸುತ್ತಿವೆ ಎಂದಿದ್ದಾರೆ.

ಈ ಹಿಂದೆ ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ದುರ್ಬಲರಾಗಿರುವ ಲಿಂಗತ್ವ ಅಲ್ಪಸಂಖ್ಯಾತರಿಗೆ ಮಾಸಿಕ ಸಹಾಯಧನ ಒದಗಿಸುವ “ಮೈತ್ರಿ” ಕಾರ್ಯಕ್ರಮವನ್ನು ರೂಪಿಸಿ, ಜಾರಿಗೆ ಕೊಟ್ಟಿದ್ದೆ ಎಂದು ಹೇಳಿದ್ದಾರೆ.

ಆ ಸಂದರ್ಭದಲ್ಲಿ ಯಾವುದೇ ಜಾತಿ, ಧರ್ಮ, ಲಿಂಗ ತಾರತಮ್ಯವಿಲ್ಲದೆ ಸಮಾಜದ ದುರ್ಬಲ ವರ್ಗಗಳನ್ನು ಗುರುತಿಸಿ, ಅವರ ಜೀವನ ಸುಧಾರಿಸಲು ಚಿಕಿತ್ಸಕ ಕ್ರಮಗಳನ್ನು ಕೈಗೊಳ್ಳುವುದು ಒಂದು ಸರ್ಕಾರವಾಗಿ ನಮ್ಮ ಕರ್ತವ್ಯ. ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿದ ತೃಪ್ತಿ ನನಗಿದೆ ಎಂದು ತಿಳಿಸಿದ್ದಾರೆ.

ಪ್ರಣತಿ ಪ್ರಕಾಶ್‌ ಹೇಳಿದ್ದೇನು?

ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆದ ಪ್ರಣತಿ ಪ್ರಕಾಶ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮೊದಲ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಯಾಗಿರುವ ನಾನು ಗೃಹಲಕ್ಷ್ಮೀ ಯೋಜನೆಯನ್ನು ಪಡೆದಿರುವುದು ಸಂತಸದ ವಿಷಯವಾಗಿದೆ ಎಂದು ತಿಳಿಸಿದ್ದರು.

ಅರ್ಚನ ಎಸ್‌ ಎಸ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

6 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

7 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

7 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

9 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

9 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

13 hours ago