ಮೈಸೂರು :ಸಂಸದ ಪ್ರತಾಪ್ ಸಿಂಹಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ. ಎರಡು ದಿನಗಳ ಹಿಂದೆಯಷ್ಟೇ ಸಿದ್ದರಾಮಯ್ಯ ವಿರುದ್ದ ಏಕವಚನ ಬಳಸಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಾಪ್ ಸಿಂಹ ವಿರುದ್ದ ದೂರು ನೀಡಿ ಅವರ ಮೇಲೆ FIR ದಾಖಲಾಗಿತ್ತು.
ಈಗ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್, ಮೈಸೂರು ಕ್ಷೇತ್ರವನ್ನು ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯನ್ನು ನಿಲ್ಲಿಸಲು ಪಟ್ಟು ಹಿಡಿದಿದ್ದಾರೆ ಎಂದು ಹೇಳಲಾಗುತ್ತಿದೆ. ಮೈಸೂರು ಕ್ಷೇತ್ರದಲ್ಲಿ ಸಂಸದ ಪ್ರತಾಪ್ ಸಿಂಹ ಎರಡು ಬಾರಿ ಗೆದ್ದಿದ್ದರು .2014 ಮತ್ತು 2019 ರಲ್ಲಿ ಮೈಸೂರು ಕ್ಷೇತ್ರದಲ್ಲಿ ಗೆದ್ದಿದ್ದರು.
ಆದರೆ ಈ ಬಾರಿಜೆಡಿಎಸ್ ಹಾಸನ, ತುಮಕೂರು, ಕುಮಾರಸ್ವಾಮಿ ಪುತ್ರ ನಿಖಿಲ್ ಅವರು ಸ್ಪರ್ಧಿಸಿದ್ದ ಮಂಡ್ಯ ಹಾಗೂ ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಕ್ಷೇತ್ರ ಜೆಡಿಎಸ್ಗೆ ಬೇಕು ಮುಖಂಡರು ಹಠ ಮಾಡಿದ್ದಾರೆ ಎನ್ನಲಾಗಿದೆ.