ರಾಜ್ಯ

ನಾನು ಪೊಲೀಸರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದೇನೇ ಹೊರತು ಪ್ರಚೋದನೆ ನೀಡಿಲ್ಲ: ಪ್ರತಾಪ್‌ ಸಿಂಹ

ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್‌ ಠಾಣೆಯ ಗಲಭೆ ಸಂಬಂಧಿಸಿದಂತೆ ಅಂದು ನಾನು ಪೊಲೀಸರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದೇನೆಯೇ ಹೊರತು ಪ್ರಚೋದನೆ ನೀಡಿಲ್ಲ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನಲ್ಲಿ ಇಂದು(ಫೆಬ್ರವರಿ.24) ಈ ವಿಚಾರದ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಪುಂಡ ಮುಸ್ಲಿಮರು ಸಾವಿರಾರು ಸಂಖ್ಯೆಯಲ್ಲಿ ಸೇರಿ ಪೊಲೀಸರ ಮೇಲೆ ಆಕ್ರಮಣ ಮಾಡಿದರು. ಈ ಘಟನೆ ನಡೆದ ಬೆನ್ನಲ್ಲೇ ನಾವು ಉದಯಗಿರಿ ಪೊಲೀಸ್‌ ಠಾಣೆಗೆ ಭೇಟಿ ನೀಡಿ ಅಲ್ಲಿನ ಪೊಲೀಸರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದೆವು. ಹಾಗದರೆ ಇದು ಪ್ರಚೋದನಕಾರಿನಾ? ಎಂದು ಪ್ರಶ್ನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನನ್ನ ವಿರುದ್ಧ ಅನೇಕ ಎಫ್‌ಐಆರ್‌ಗಳು ದಾಖಲಾಗಿವೆ. ಅಂತೆಯೇ ಇದೀಗ ಉದಯಗಿರಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ. ಇದೇ ರೀತಿ ನನ್ನ ವಿರುದ್ಧ ಸಾಲು ಸಾಲು ಎಫ್‌ಐಆರ್‌ ಹಾಕಿ ಆತ್ಮಸ್ಥೈರ್ಯ ಕುಗ್ಗಿಸಬೇಕು, ಮನೆಯಿಂದ ಹೊರಬರಬಾರದು ಎಂಬ ಉದ್ದೇಶದಿಂದಲೇ ಹೀಗೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನಾನು ಅಂದಿನ ದಿನ ಮುಸ್ಲಿಮರು ಪುರುಸೊತ್ತಿಲ್ಲದೇ ಮಕ್ಕಳು ಹುಟ್ಟಿಸುತ್ತಾರೆ ಅಂದಿದ್ದೇನೆ ಇದು ಪ್ರಚೋದನಕಾರಿನಾ? ಅವರ ಜನಸಂಖ್ಯೆ ನೋಡಿದರೆ ತಿಳಿಯುತ್ತದೆ. ನಿಮ್ಮ ಮನೆಯಲ್ಲಿ 1 ರಿಂದ 2 ಮಕ್ಕಳಿರೋ ಎಷ್ಟು ಜನ ಇದ್ದಾರೆ ಹೇಳಿ. ಶಾರುಖ್‌ ಖಾನ್‌ಗೆ ಮೂರು ಮಕ್ಕಳಿದ್ದರೆ, ಸೈಫ್ ಅಲಿ ಖಾನ್‌ಗೆ 4 ಮಕ್ಕಳಿದ್ದಾರೆ, ನಿಮ್ಮ ಸೆಲೆಬ್ರಿಟಿಗಳೇ ಕಂಟ್ರೋಲ್ ಇಲ್ಲದೆ ಮಕ್ಕಳು ಹುಟ್ಟಿಸುತ್ತಿದ್ದಾರೆ. ನಾನು ಸತ್ಯ ಹೇಳಿದ್ದು, ಜನೋತ್ಪಾದನೆಯಲ್ಲಿ ತೊಡಗಿದ್ದೀರಿ ಎಂದು ಹೇಳಿದ್ದೇನೆ. ಮುಸಲ್ಮಾನರೇ ತಮ್ಮ ಮಕ್ಕಳನ್ನು ದೇವರು ಕೊಟ್ಟನೆಂದು ಹೇಳುತ್ತಾರೆ. ಹಾಗಾದರೆ ನಿಮ್ಮ ಮಕ್ಕಳನ್ನು ದೇವರೇ ನೋಡಿಕೊಳ್ಳಲಿ, ಸರ್ಕಾರ ಯಾಕೆ ಪುಕ್ಕಟ್ಟೆಯಾಗಿ ನೋಡಿಕೊಳ್ಳಬೇಕು. ಅಲ್ಲದೇ ರಾಜ್ಯ ಸರ್ಕಾರಕ್ಕೆ ಅತಿ ಹೆಚ್ಚು ತೆರಿಗೆ ಪಾವತಿಸುವವರು ಹಿಂದೂಗಳು. ಹೀಗಿದ್ದರೂ ಸೌಲಭ್ಯಗಳು ಮಾತ್ರ ಮುಸಲ್ಮಾನರಿಗೆ ಸಿಗುತ್ತಿವೆ. ರಾಜ್ಯದಲ್ಲಿ ಸಂಖ್ಯೆ ಬಲ ಅಧಿಕ ಮಾಡಿ ತೊಂದರೆ ನೀಡುತ್ತಿದ್ದಾರೆ. ಭಯದ ವಾತಾವರಣ ಸೃಷ್ಟಿ ಮಾಡಿಸುತ್ತಿದ್ದಾರೆ ಎಂದು ಹೇಳಿದ್ದೇನೆ.

ಇನ್ನು ಸ್ವಾತಂತ್ರ್ಯ ಬಂದಾಗ ಜನಸಂಖ್ಯೆ ಎಷ್ಟಿತ್ತು, ಈಗ ಎಷ್ಟಿದ್ದೀರಿ? ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಹಿಂದೂಗಳ ಜನಸಂಖ್ಯೆ ಕಡಿಮೆಯಾಗಿದೆ. ಸತ್ಯ ಹೇಳಿರೋದು ಪ್ರಚೋದನೆ ಹೇಗಾಗುತ್ತೆ? ನಿಯಂತ್ರಣದಿಂದ ಮಕ್ಕಳು ಹುಟ್ಟಿಸಿ, ಅವರಿಗೆ ವಿದ್ಯಾಭ್ಯಾಸ ನೀಡಿ ಎಂದು ಕಿವಿ ಮಾತು ಹೇಳಿದ್ದೇನೆ. ನಿಮ್ಮ ಶಕ್ತಿಗನುಸಾರವಾಗಿ ಮಕ್ಕಳು ಹುಟ್ಟಿಸಿ ಎಂದು ಹೇಳಿದ್ದೇನೆ. ಇದು ಪ್ರಚೋದನಕಾರಿ ಹೇಳಿಕೆಯಾಗುವುದಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

1 hour ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

2 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

3 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

3 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

3 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

4 hours ago