ರಾಜ್ಯ

ಬಿಜೆಪಿ ಪಕ್ಷದಲ್ಲಿ ಯತ್ನಾಳ್‌ರು ಒಬ್ಬ ಜನಪ್ರಿಯ ನಾಯಕ: ಪ್ರತಾಪ್‌ ಸಿಂಹ

ಬೆಳಗಾವಿ: ಬಿಜೆಪಿ ಪಕ್ಷದಲ್ಲಿ ಯತ್ನಾಳ್‌ ಅವರು ಕೂಡ ಒಬ್ಬ ಜನಪ್ರಿಯ ನಾಯಕರಾಗಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ತಿಳಿಸಿದ್ದಾರೆ.

ಈ ಕುರಿತು ಬೆಳಗಾವಿಯಲ್ಲಿ ಇಂದು(ಡಿ.1) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಯತ್ನಾಳ್‌ ಅವರು ವಕ್ಫ್‌ ಮಂಡಳಿ ವಿರುದ್ಧ ಜನರಿಗೆ ಜಾಗೃತಿ ಮೂಡಿಸಲು ಹೋರಾಟ ನಡೆಸುತ್ತಿದ್ದಾರೆ. ನಮ್ಮ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ನ.20 ರಂದು ಸುದ್ದಿಗೋಷ್ಠಿ ನಡೆಸಿ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಕರೆ ನೀಡಿದ್ದರು. ಅದರಂತೆಯೇ ಯತ್ನಾಳ್‌ ಅವರು ಬಿಜಾಪುರದಲ್ಲಿ ಹೋರಾಟವನ್ನು ಪ್ರಾರಂಭಿಸಿದ್ದಾರೆ. ಆ ಪ್ರತಿಭಟನೆಯಲ್ಲಿ ಕೇಂದ್ರ ಸಚಿವರು ಭಾಗವಹಿಸಿದ್ದರು. ಹೀಗಾಗಿ ರಾಜ್ಯ ಬಿಜೆಪಿ ಪಕ್ಷದಲ್ಲಿ ಅಪಸ್ವರ ಬಣ ಹೋರಾಟ ಎಂದು ಅಪ್ರಸ್ತುತ ಆಗುತ್ತಿದೆ ಎಂದು ಹೇಳಿದ್ದಾರೆ.

ರಾಜ್ಯಾದ್ಯಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಯತ್ನಾಳ್‌ ಅವರ ನೇತೃತ್ವದಲ್ಲಿ ವಕ್ಫ್‌ ಮಂಡಳಿ ವಿರುದ್ಧ ಹೋರಾಟ ನಡೆಸುತ್ತಿದೆ. ಆದರೆ ಯತ್ನಾಳ್‌ ಅವರ ಈ ಪ್ರತಿಭಟನೆಗೆ  ಪಕ್ಷದಲ್ಲಿ ಯಾಕೆ ಅಪಸ್ವರ ಬರುತ್ತಿದೆ ಎಂಬುಂದು ನನಗೆ ತಿಳಿಯುತ್ತಿಲ್ಲ. ಹೀಗಾಗಿ ಹೋರಾಟದ ದಿಕ್ಕು ತಪ್ಪಿಸುವವರ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ. ವಕ್ಫ್‌ ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

8 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

8 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

8 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

8 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

8 hours ago