ನವದೆಹಲಿ: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ದೇಶದ 16 ಸ್ಥಳಗಳಲ್ಲಿ ದಾಳಿ ನಡೆಸಿದೆ.
ಈ ಕುರಿತು ಇಂದು(ಡಿ.5) ಎನ್ಐಎ ಅಧಿಕಾರಿಗಳು ಬೆಂಗಳೂರು, ಕೊಡಗು, ಚೈನ್ನೈ, ಎರ್ನಾಕುಲಂ ಸೇರಿದಂತೆ ದೇಶದ 16 ಸ್ಥಳಗಳಲ್ಲಿ ದಾಳಿ ಮಾಡಲಾಗಿದೆ ಎಂದು ಅಧಿಕಾರಿಗಳು ಮೂಲಗಳು ತಿಳಿಸಿವೆ.
ಎನ್ಐಎ ದಾಳಿ ನಡೆಸಲು ಕಾರಣವೇನು?
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ 2022ರ ಜುಲೈನಲ್ಲಿ ಪ್ರವೀಣ್ ನೆಟ್ಟಾರು ಎಂಬುವವರನ್ನು ಪಾಪ್ಯುಲರ್ ಆಫ್ ಇಂಡಿಯಾದ ಇಬ್ಬರು ಕಾರ್ಯಕರ್ತರು ದ್ವಿಚಕ್ರ ವಾಹನದಲ್ಲಿ ಬಂದು ಹತ್ಯೆ ಮಾಡಿದ್ದರು. ಹೀಗಾಗಿ ಈ ಹತ್ಯೆ ಪ್ರಕರಣವನ್ನು ಎನ್ಐಎ ಸಂಸ್ಥೆಯೂ ತನಿಖೆಯನ್ನು 2024ರ ಆಗಸ್ಟ್ 4ರಂದು ಕೈಗೆತ್ತಿಕೊಂಡು ಇಲ್ಲಿಯವರೆಗೂ 19 ಆರೋಪಿಗಳನ್ನು ಬಂಧಿಸಿದೆ. ಬಳಿಕ 21 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ್ದು, ಇನ್ನು ಉಳಿದ ಆರೋಪಿಗಳನ್ನು ಪತ್ತೆಹಚ್ಚಲು ದೇಶದ 16 ಸ್ಥಳಗಳಲ್ಲಿ ದಾಳಿ ನಡೆಸಿದೆ ಎಂದು ಎನ್ಐಎ ಹೇಳಿದೆ.
ಎನ್ಎಎ ತನಿಖೆಯಿಂದ ಕೊಡಗು ಜಿಲ್ಲೆಯ ನಿವಾಸಿಯಾಗಿರುವ ತುಫೈಲ್ ಎಂಬುವವನು ಪಿಎಫ್ಐ ಸೇವಾ ತಂಡಗಳ ಉಸ್ತುವಾರಿ ಹಾಗೂ ನಿಷೇಧಿತ ಸಂಘಟನೆಯ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ ಸೇರಿದಂತೆ ಸುಧಾರಿತ ತರಬೇತಿಯನ್ನು ನಿಯಮಿತವಾಗಿ ನೀಡುವ ಪಿಎಫ್ಐ ಮಾಸ್ಟರ್ ಟ್ರೈನರ್ ಆಗಿದ್ದ ಎಂದು ವರದಿಯಲ್ಲಿ ತಿಳಿಸಿದೆ. ಅಲ್ಲದೇ ಕರ್ನಾಟಕದ ರಾಜ್ಯದ ಮೈಸೂರು, ಕೊಡಗು ಹಾಗೂ ತಮಿಳುನಾಡು ರಾಜ್ಯದ ಈರೋಡ್ ಜಿಲ್ಲೆಯಲ್ಲಿ ನೆಟ್ಟಾರುವಿನ ಮೂವರು ದಾಳಿಕೋರರಿಗೆ ಆಶ್ರಯ ನೀಡಿದ್ದ ಎಂದು ಅಧಿಕಾರಿ ಮೂಲಗಳಿಂದ ತಿಳಿದು ಬಂದಿದೆ.
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…
ಕೊಡಗು: ಎಲಿಫೆಂಟ್ ಬಾತಿಂಗ್ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…
ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…