Praveen Nettaru murder case Accused arrested
ಮಡಿಕೇರಿ : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದ ಕೊಡಗಿನ ಸೋಮವಾರಪೇಟೆ ತಾಲ್ಲೂಕಿನ ಅಬ್ದುಲ್ ರೆಹಮಾನ್ ಕಲ್ಕಂದೂರು ಎಂಬಾತನನ್ನು ಎನ್ಐಎ ಅಧಿಕಾರಿಗಳು ಕೇರಳದ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ವಿದೇಶಕ್ಕೆ ತೆರಳಿ ಕತಾರ್ನ ದೋಹಾದಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ತಲೆಮರೆಸಿಕೊಂಡಿದ್ದ ಎಲ್ಲಾ ಆರೋಪಿಗಳಿಗಾಗಿ ಲುಕ್ ಔಟ್ ನೋಟಿಸ್ ಕೂಡ ಜಾರಿ ಮಾಡಲಾಗಿತ್ತು. ಅಬ್ದುಲ್ ರೆಹಮಾನ್ ಕಲ್ಕಂದೂರ್ ಹಾಗೂ ತಲೆ ಮರೆಸಿಕೊಂಡಿರುವ ಇತರರ ಬಗ್ಗೆ ಮಾಹಿತಿ ನೀಡಿದವರಿಗೆ ನಗದು ಬಹುಮಾನವನ್ನು ಕೂಡ ರಾಜ್ಯ ಗೃಹ ಇಲಾಖೆ ಘೋಷಿಸಿತ್ತು.
ಅಬ್ದುಲ್ ರೆಹಮಾನ್ ಪಿಎಫ್ಐ ಸಂಘಟನೆಯ ಕಾರ್ಯದರ್ಶಿಯಾಗಿದ್ದ. ರೆಹಮಾನನ್ನು ವಶಕ್ಕೆ ಪಡೆದಿರುವ ಎನ್ಐಎ ಅಽಕಾರಿಗಳು ಬೆಂಗಳೂರಿನ ಎನ್ಐಎನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಮತ್ತೆ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…