ರಾಜ್ಯ

ಪ್ರಯಾಗ್‌ ರಾಜ್‌ ಮಹಾ ಕುಂಭಮೇಳ| ಚಾಯ್‌ ಪಾಯಿಂಟ್‌ ಸಂಸ್ಥೆಯೊಂದಿಗೆ ಪಾಲುದಾರಿಕೆ: ಕೆಎಂಎಫ್‌ ಘೋಷಣೆ

ಬೆಂಗಳೂರು: 144 ವರ್ಷಗಳಿಗೊಮ್ಮೆ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕಾಗಿ ಚಹಾ ಕೆಫೆ ಸರಣಿ ಚಾಯ್‌ ಪಾಯಿಂಟ್‌ ಸಂಸ್ಥೆಯೊಂದಿಗೆ ಪಾಲುದಾರಿಕೆ ಹೊಂದಲಾಗಿದೆ ಎಂದು ನಂದಿನಿ ಬ್ರಾಂಡ್‌ಗೆ ಪ್ರಸಿದ್ಧಿ ಪಡೆದಿರುವ ಕೆಎಂಎಫ್‌ ಘೋಷಿಸಿದೆ.

ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ಜರುಗುತ್ತಿರುವ 2025ರ ಮಹಾ ಕುಂಭಮೇಳವೂ ಇಂದಿನಿಂದ(ಜನವರಿ.13) ಪ್ರಾರಂಭವಾಗಿ ಫೆಬ್ರವರಿ.26ರವರೆಗೆ ನಡೆಯಲಿದೆ. ಹೀಗಾಗಿ ಕರ್ನಾಟಕ ಹಾಲು ಮಹಾಮಂಡಳಿ(ಕೆಎಂಎಫ್‌) ನಂದಿನಿ ಬ್ರಾಂಡ್‌ನ ಹಾಲು ಹಾಗೂ ಯುಎಚ್‌ಟಿ ಗುಡ್‌ಲೈಫ್‌ ಸೇರಿದಂತೆ ಇನ್ನಿತರ ಉತ್ಪನ್ನಗಳನ್ನು ಮಾರಾಟ ಮಾಡುವ ಸಲುವಾಗಿ ಚಾಯ್‌ ಪಾಯಿಂಟ್‌ ಸಂಸ್ಥೆಯೊಂದಿಗೆ ಪಾಲುದಾರಿಕೆಯನ್ನು ಹೊಂದಿರುವುದಾಗಿ ಘೋಷಿಸಿದೆ.

ಚಾಯ್‌ ಪಾಯಿಂಟ್‌ ಭಾರತ ದೇಶದ ಅತಿದೊಡ್ಡ ಟೀ ಕೆಫೆ ಸಂಸ್ಥೆಯಾಗಿದ್ದು, ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ 2025ರಲ್ಲಿ ಪಾನೀಯ ಮಾರಾಟ ವ್ಯವಹಾರದಲ್ಲಿ ಅಗ್ರಸ್ಥಾನದಲ್ಲಿದೆ. ಈ ಸಂಸ್ಥೆಯೂ ಮಹಾ ಕುಂಭಮೇಳದಲ್ಲಿ ಆಯೋಜಿಸಲಾಗಿರುವ ಸಂಕೀರ್ಣದಲ್ಲಿ ಸುಮಾರು 10 ಸಂಖ್ಯೆ ಮಳಿಗೆಗಳನ್ನು ತೆರೆದಿದೆ. ಅಲ್ಲದೇ ಸದರಿ ಮಳಿಗೆಗಳ ಮೂಲಕ ಮಹಾ ಕುಂಭಮೇಳದಲ್ಲಿ ಭಾಗವಹಿಸುವ ಪ್ರವಾಸಿಗರಿಗೆ ಒಂದು ಕೋಟಿ ಕಪ್‌ಗಳಿಗಿಂತಲೂ ಅಧಿಕ ಚಹಾವನ್ನು ತಯಾರಿಸಿ, ಒದಗಿಸಲು ಸಿದ್ಧತೆ ಮಾಡಿಕೊಂಡಿದೆ.

ಈ ಸಮಾರಂಭದಲ್ಲಿ ಅತೀ ಹೆಚ್ಚು ಕಪ್ ಚಹಾವನ್ನು ಮಾರಾಟ ಮಾಡಿ ಗಿನ್ನೀಸ್ ವಿಶ್ವ ದಾಖಲೆಯನ್ನು ಸ್ಥಾಪಿಸುವ ಗುರಿಯನ್ನು ಸಹ ಹೊಂದಿದೆ. ಮಹಾ ಕುಂಭ ಮೇಳದಲ್ಲಿ ಸಿದ್ಧಪಡಿಸಲಾಗುವ ಪ್ರತಿಯೊಂದು ಕಪ್ ಚಹಾವು ನಂದಿನಿಯ ಪರಿಶುದ್ಧ ಹಾಗೂ ಉತ್ಕೃಷ್ಟ ಗುಣಮಟ್ಟದ ಹಾಲನ್ನು ಬಳಸಿ ತಯಾರಿಸಲಾಗುತ್ತದೆ. ಚಹಾದ ಜೊತೆಗೆ ಮೆಚಾಯ್ ಪಾಯಿಂಟ್ ಮಳಿಗೆಗಳು ಸಿಹಿ ಉತ್ಪನ್ನ ಮತ್ತು ಮಿಲ್ಕ್ ಶೇಕ್‌ ಗಳು ಸೇರಿದಂತೆ ನಂದಿನಿ ಉತ್ಪನ್ನಗಳನ್ನು ಸಹ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅರ್ಚನ ಎಸ್‌ ಎಸ್

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

4 hours ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

4 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

4 hours ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

5 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

5 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

6 hours ago