ಬೆಂಗಳೂರು: 144 ವರ್ಷಗಳಿಗೊಮ್ಮೆ ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕಾಗಿ ಚಹಾ ಕೆಫೆ ಸರಣಿ ಚಾಯ್ ಪಾಯಿಂಟ್ ಸಂಸ್ಥೆಯೊಂದಿಗೆ ಪಾಲುದಾರಿಕೆ ಹೊಂದಲಾಗಿದೆ ಎಂದು ನಂದಿನಿ ಬ್ರಾಂಡ್ಗೆ ಪ್ರಸಿದ್ಧಿ ಪಡೆದಿರುವ ಕೆಎಂಎಫ್ ಘೋಷಿಸಿದೆ.
ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ಜರುಗುತ್ತಿರುವ 2025ರ ಮಹಾ ಕುಂಭಮೇಳವೂ ಇಂದಿನಿಂದ(ಜನವರಿ.13) ಪ್ರಾರಂಭವಾಗಿ ಫೆಬ್ರವರಿ.26ರವರೆಗೆ ನಡೆಯಲಿದೆ. ಹೀಗಾಗಿ ಕರ್ನಾಟಕ ಹಾಲು ಮಹಾಮಂಡಳಿ(ಕೆಎಂಎಫ್) ನಂದಿನಿ ಬ್ರಾಂಡ್ನ ಹಾಲು ಹಾಗೂ ಯುಎಚ್ಟಿ ಗುಡ್ಲೈಫ್ ಸೇರಿದಂತೆ ಇನ್ನಿತರ ಉತ್ಪನ್ನಗಳನ್ನು ಮಾರಾಟ ಮಾಡುವ ಸಲುವಾಗಿ ಚಾಯ್ ಪಾಯಿಂಟ್ ಸಂಸ್ಥೆಯೊಂದಿಗೆ ಪಾಲುದಾರಿಕೆಯನ್ನು ಹೊಂದಿರುವುದಾಗಿ ಘೋಷಿಸಿದೆ.
ಚಾಯ್ ಪಾಯಿಂಟ್ ಭಾರತ ದೇಶದ ಅತಿದೊಡ್ಡ ಟೀ ಕೆಫೆ ಸಂಸ್ಥೆಯಾಗಿದ್ದು, ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ 2025ರಲ್ಲಿ ಪಾನೀಯ ಮಾರಾಟ ವ್ಯವಹಾರದಲ್ಲಿ ಅಗ್ರಸ್ಥಾನದಲ್ಲಿದೆ. ಈ ಸಂಸ್ಥೆಯೂ ಮಹಾ ಕುಂಭಮೇಳದಲ್ಲಿ ಆಯೋಜಿಸಲಾಗಿರುವ ಸಂಕೀರ್ಣದಲ್ಲಿ ಸುಮಾರು 10 ಸಂಖ್ಯೆ ಮಳಿಗೆಗಳನ್ನು ತೆರೆದಿದೆ. ಅಲ್ಲದೇ ಸದರಿ ಮಳಿಗೆಗಳ ಮೂಲಕ ಮಹಾ ಕುಂಭಮೇಳದಲ್ಲಿ ಭಾಗವಹಿಸುವ ಪ್ರವಾಸಿಗರಿಗೆ ಒಂದು ಕೋಟಿ ಕಪ್ಗಳಿಗಿಂತಲೂ ಅಧಿಕ ಚಹಾವನ್ನು ತಯಾರಿಸಿ, ಒದಗಿಸಲು ಸಿದ್ಧತೆ ಮಾಡಿಕೊಂಡಿದೆ.
ಈ ಸಮಾರಂಭದಲ್ಲಿ ಅತೀ ಹೆಚ್ಚು ಕಪ್ ಚಹಾವನ್ನು ಮಾರಾಟ ಮಾಡಿ ಗಿನ್ನೀಸ್ ವಿಶ್ವ ದಾಖಲೆಯನ್ನು ಸ್ಥಾಪಿಸುವ ಗುರಿಯನ್ನು ಸಹ ಹೊಂದಿದೆ. ಮಹಾ ಕುಂಭ ಮೇಳದಲ್ಲಿ ಸಿದ್ಧಪಡಿಸಲಾಗುವ ಪ್ರತಿಯೊಂದು ಕಪ್ ಚಹಾವು ನಂದಿನಿಯ ಪರಿಶುದ್ಧ ಹಾಗೂ ಉತ್ಕೃಷ್ಟ ಗುಣಮಟ್ಟದ ಹಾಲನ್ನು ಬಳಸಿ ತಯಾರಿಸಲಾಗುತ್ತದೆ. ಚಹಾದ ಜೊತೆಗೆ ಮೆಚಾಯ್ ಪಾಯಿಂಟ್ ಮಳಿಗೆಗಳು ಸಿಹಿ ಉತ್ಪನ್ನ ಮತ್ತು ಮಿಲ್ಕ್ ಶೇಕ್ ಗಳು ಸೇರಿದಂತೆ ನಂದಿನಿ ಉತ್ಪನ್ನಗಳನ್ನು ಸಹ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…
ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…
ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…