ಬೆಂಗಳೂರು: 144 ವರ್ಷಗಳಿಗೊಮ್ಮೆ ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕಾಗಿ ಚಹಾ ಕೆಫೆ ಸರಣಿ ಚಾಯ್ ಪಾಯಿಂಟ್ ಸಂಸ್ಥೆಯೊಂದಿಗೆ ಪಾಲುದಾರಿಕೆ ಹೊಂದಲಾಗಿದೆ ಎಂದು ನಂದಿನಿ ಬ್ರಾಂಡ್ಗೆ ಪ್ರಸಿದ್ಧಿ ಪಡೆದಿರುವ ಕೆಎಂಎಫ್ ಘೋಷಿಸಿದೆ.
ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ಜರುಗುತ್ತಿರುವ 2025ರ ಮಹಾ ಕುಂಭಮೇಳವೂ ಇಂದಿನಿಂದ(ಜನವರಿ.13) ಪ್ರಾರಂಭವಾಗಿ ಫೆಬ್ರವರಿ.26ರವರೆಗೆ ನಡೆಯಲಿದೆ. ಹೀಗಾಗಿ ಕರ್ನಾಟಕ ಹಾಲು ಮಹಾಮಂಡಳಿ(ಕೆಎಂಎಫ್) ನಂದಿನಿ ಬ್ರಾಂಡ್ನ ಹಾಲು ಹಾಗೂ ಯುಎಚ್ಟಿ ಗುಡ್ಲೈಫ್ ಸೇರಿದಂತೆ ಇನ್ನಿತರ ಉತ್ಪನ್ನಗಳನ್ನು ಮಾರಾಟ ಮಾಡುವ ಸಲುವಾಗಿ ಚಾಯ್ ಪಾಯಿಂಟ್ ಸಂಸ್ಥೆಯೊಂದಿಗೆ ಪಾಲುದಾರಿಕೆಯನ್ನು ಹೊಂದಿರುವುದಾಗಿ ಘೋಷಿಸಿದೆ.
ಚಾಯ್ ಪಾಯಿಂಟ್ ಭಾರತ ದೇಶದ ಅತಿದೊಡ್ಡ ಟೀ ಕೆಫೆ ಸಂಸ್ಥೆಯಾಗಿದ್ದು, ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ 2025ರಲ್ಲಿ ಪಾನೀಯ ಮಾರಾಟ ವ್ಯವಹಾರದಲ್ಲಿ ಅಗ್ರಸ್ಥಾನದಲ್ಲಿದೆ. ಈ ಸಂಸ್ಥೆಯೂ ಮಹಾ ಕುಂಭಮೇಳದಲ್ಲಿ ಆಯೋಜಿಸಲಾಗಿರುವ ಸಂಕೀರ್ಣದಲ್ಲಿ ಸುಮಾರು 10 ಸಂಖ್ಯೆ ಮಳಿಗೆಗಳನ್ನು ತೆರೆದಿದೆ. ಅಲ್ಲದೇ ಸದರಿ ಮಳಿಗೆಗಳ ಮೂಲಕ ಮಹಾ ಕುಂಭಮೇಳದಲ್ಲಿ ಭಾಗವಹಿಸುವ ಪ್ರವಾಸಿಗರಿಗೆ ಒಂದು ಕೋಟಿ ಕಪ್ಗಳಿಗಿಂತಲೂ ಅಧಿಕ ಚಹಾವನ್ನು ತಯಾರಿಸಿ, ಒದಗಿಸಲು ಸಿದ್ಧತೆ ಮಾಡಿಕೊಂಡಿದೆ.
ಈ ಸಮಾರಂಭದಲ್ಲಿ ಅತೀ ಹೆಚ್ಚು ಕಪ್ ಚಹಾವನ್ನು ಮಾರಾಟ ಮಾಡಿ ಗಿನ್ನೀಸ್ ವಿಶ್ವ ದಾಖಲೆಯನ್ನು ಸ್ಥಾಪಿಸುವ ಗುರಿಯನ್ನು ಸಹ ಹೊಂದಿದೆ. ಮಹಾ ಕುಂಭ ಮೇಳದಲ್ಲಿ ಸಿದ್ಧಪಡಿಸಲಾಗುವ ಪ್ರತಿಯೊಂದು ಕಪ್ ಚಹಾವು ನಂದಿನಿಯ ಪರಿಶುದ್ಧ ಹಾಗೂ ಉತ್ಕೃಷ್ಟ ಗುಣಮಟ್ಟದ ಹಾಲನ್ನು ಬಳಸಿ ತಯಾರಿಸಲಾಗುತ್ತದೆ. ಚಹಾದ ಜೊತೆಗೆ ಮೆಚಾಯ್ ಪಾಯಿಂಟ್ ಮಳಿಗೆಗಳು ಸಿಹಿ ಉತ್ಪನ್ನ ಮತ್ತು ಮಿಲ್ಕ್ ಶೇಕ್ ಗಳು ಸೇರಿದಂತೆ ನಂದಿನಿ ಉತ್ಪನ್ನಗಳನ್ನು ಸಹ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…
ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…
ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…
ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…
ಹನೂರು : ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.14 ರಿಂದ 18 ರವರೆಗೆ ಐದು ದಿನಗಳ…