ರಾಜ್ಯ

ಪ್ರಯಾಗ್‌ ರಾಜ್‌ ಮಹಾ ಕುಂಭಮೇಳ| ಚಾಯ್‌ ಪಾಯಿಂಟ್‌ ಸಂಸ್ಥೆಯೊಂದಿಗೆ ಪಾಲುದಾರಿಕೆ: ಕೆಎಂಎಫ್‌ ಘೋಷಣೆ

ಬೆಂಗಳೂರು: 144 ವರ್ಷಗಳಿಗೊಮ್ಮೆ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕಾಗಿ ಚಹಾ ಕೆಫೆ ಸರಣಿ ಚಾಯ್‌ ಪಾಯಿಂಟ್‌ ಸಂಸ್ಥೆಯೊಂದಿಗೆ ಪಾಲುದಾರಿಕೆ ಹೊಂದಲಾಗಿದೆ ಎಂದು ನಂದಿನಿ ಬ್ರಾಂಡ್‌ಗೆ ಪ್ರಸಿದ್ಧಿ ಪಡೆದಿರುವ ಕೆಎಂಎಫ್‌ ಘೋಷಿಸಿದೆ.

ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ಜರುಗುತ್ತಿರುವ 2025ರ ಮಹಾ ಕುಂಭಮೇಳವೂ ಇಂದಿನಿಂದ(ಜನವರಿ.13) ಪ್ರಾರಂಭವಾಗಿ ಫೆಬ್ರವರಿ.26ರವರೆಗೆ ನಡೆಯಲಿದೆ. ಹೀಗಾಗಿ ಕರ್ನಾಟಕ ಹಾಲು ಮಹಾಮಂಡಳಿ(ಕೆಎಂಎಫ್‌) ನಂದಿನಿ ಬ್ರಾಂಡ್‌ನ ಹಾಲು ಹಾಗೂ ಯುಎಚ್‌ಟಿ ಗುಡ್‌ಲೈಫ್‌ ಸೇರಿದಂತೆ ಇನ್ನಿತರ ಉತ್ಪನ್ನಗಳನ್ನು ಮಾರಾಟ ಮಾಡುವ ಸಲುವಾಗಿ ಚಾಯ್‌ ಪಾಯಿಂಟ್‌ ಸಂಸ್ಥೆಯೊಂದಿಗೆ ಪಾಲುದಾರಿಕೆಯನ್ನು ಹೊಂದಿರುವುದಾಗಿ ಘೋಷಿಸಿದೆ.

ಚಾಯ್‌ ಪಾಯಿಂಟ್‌ ಭಾರತ ದೇಶದ ಅತಿದೊಡ್ಡ ಟೀ ಕೆಫೆ ಸಂಸ್ಥೆಯಾಗಿದ್ದು, ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ 2025ರಲ್ಲಿ ಪಾನೀಯ ಮಾರಾಟ ವ್ಯವಹಾರದಲ್ಲಿ ಅಗ್ರಸ್ಥಾನದಲ್ಲಿದೆ. ಈ ಸಂಸ್ಥೆಯೂ ಮಹಾ ಕುಂಭಮೇಳದಲ್ಲಿ ಆಯೋಜಿಸಲಾಗಿರುವ ಸಂಕೀರ್ಣದಲ್ಲಿ ಸುಮಾರು 10 ಸಂಖ್ಯೆ ಮಳಿಗೆಗಳನ್ನು ತೆರೆದಿದೆ. ಅಲ್ಲದೇ ಸದರಿ ಮಳಿಗೆಗಳ ಮೂಲಕ ಮಹಾ ಕುಂಭಮೇಳದಲ್ಲಿ ಭಾಗವಹಿಸುವ ಪ್ರವಾಸಿಗರಿಗೆ ಒಂದು ಕೋಟಿ ಕಪ್‌ಗಳಿಗಿಂತಲೂ ಅಧಿಕ ಚಹಾವನ್ನು ತಯಾರಿಸಿ, ಒದಗಿಸಲು ಸಿದ್ಧತೆ ಮಾಡಿಕೊಂಡಿದೆ.

ಈ ಸಮಾರಂಭದಲ್ಲಿ ಅತೀ ಹೆಚ್ಚು ಕಪ್ ಚಹಾವನ್ನು ಮಾರಾಟ ಮಾಡಿ ಗಿನ್ನೀಸ್ ವಿಶ್ವ ದಾಖಲೆಯನ್ನು ಸ್ಥಾಪಿಸುವ ಗುರಿಯನ್ನು ಸಹ ಹೊಂದಿದೆ. ಮಹಾ ಕುಂಭ ಮೇಳದಲ್ಲಿ ಸಿದ್ಧಪಡಿಸಲಾಗುವ ಪ್ರತಿಯೊಂದು ಕಪ್ ಚಹಾವು ನಂದಿನಿಯ ಪರಿಶುದ್ಧ ಹಾಗೂ ಉತ್ಕೃಷ್ಟ ಗುಣಮಟ್ಟದ ಹಾಲನ್ನು ಬಳಸಿ ತಯಾರಿಸಲಾಗುತ್ತದೆ. ಚಹಾದ ಜೊತೆಗೆ ಮೆಚಾಯ್ ಪಾಯಿಂಟ್ ಮಳಿಗೆಗಳು ಸಿಹಿ ಉತ್ಪನ್ನ ಮತ್ತು ಮಿಲ್ಕ್ ಶೇಕ್‌ ಗಳು ಸೇರಿದಂತೆ ನಂದಿನಿ ಉತ್ಪನ್ನಗಳನ್ನು ಸಹ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅರ್ಚನ ಎಸ್‌ ಎಸ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

9 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

9 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

9 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

11 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

12 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

12 hours ago