ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್ಅನ್ನು ಮಾರ್ಚ್ ತಿಂಗಳಿನಲ್ಲಿ ಮಂಡಿಸಲಿದ್ದು, ಬಜೆಟ್ನ ಪೂರ್ವಭಾವಿ ಪ್ರಕ್ರಿಯೆಗೆ ನಾಳೆಯಿಂದ ಚಾಲನೆ ನೀಡಲಿದ್ದಾರೆ.
ಸಿದ್ದರಾಮಯ್ಯ ಅವರು ಬಜೆಟ್ ಪೂರ್ವಭಾವಿ ಸಭೆಗೆ ಅಧಿಕೃತವಾಗಿ ಜನವರಿ.7(ನಾಳೆಯಿಂದ) ಚಾಲನೆ ನೀಡಲಿದ್ದಾರೆ. ಅಲ್ಲದೇ ಈ ಸಭೆಯಲ್ಲಿ ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸಿ ಬಜೆಟ್ನಲ್ಲಿ ಅಳವಡಿಸಿಕೊಳ್ಳಬೇಕಾದ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಅಧಿಕಾರಗಳೊಂದಿಗೆ ಚರ್ಚಿಸಲಿದ್ದಾರೆ.
ಇನ್ನೂ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರತಿದಿನ ಬೆಳಿಗ್ಗೆ 11 ಗಂಟೆಗೆ ಹಾಗೂ ಸಂಜೆ 4 ಗಂಟೆಗೆ ತಲಾ ಒಂದೊಂದು ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲು ಸಿದ್ದರಾಮಯ್ಯ ಅವರು ನಿರ್ಧರಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ಸಮಾಜ ಕಲ್ಯಾಣ, ಆರೋಗ್ಯ ಇಲಾಖೆ, ಬುಧವಾರ ಆಹಾರ, ಉನ್ನತ ಶಿಕ್ಷಣ, ಗುರುವಾರ ವೈದ್ಯಕೀಯ ಶಿಕ್ಷಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಿಗಧಿಯಾಗಿದೆ.
ಈಗಾಗಲೇ ಮುಖ್ಯಮಂತ್ರಿ ಸಚಿವಾಲಯದಿಂದ ಹಿಂದಿನ ಎರಡು ವರ್ಷಗಳು ಬಜೆಟ್ ಕಂಡಿಕೆಗಳು ಕೈಗೊಂಡ ಕ್ರಮ, ಆರ್ಥಿಕ ಮತ್ತು ಭೌತಿಕ ಪ್ರಗತಿ ಹಾಗೂ ಇಲಾಖೆಯಿಂದ ಕೈಗೊಳ್ಳಬಹುದಾದ ಹೊಸ ಯೋಜನೆಗಳ ಕುರಿತು ಪ್ರಾತ್ಯಕ್ಷಿಕೆ ಸಿದ್ಧಪಡಿಸಿ ಪೂರ್ಣ ಮಾಹಿತಿಯೊಂದಿಗೆ ಸಭೆಗೆ ಹಾಜರಾಗುವಂತೆ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ. ಅಲ್ಲದೇ ಮುಂದಿನ ಆರ್ಥಿಕ ವರ್ಷದ ಬಜೆಟ್ ಸಿದ್ಧತೆಗೆ ಆದ್ಯತಾ ಪಟ್ಟಿಯನ್ನು ಸಿದ್ಧಪಡಿಸು ಪ್ರಕ್ರಿಯೆಯೂ ಪ್ರಾರಂಭಗೊಂಡಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…