ಬೆಂಗಳೂರು: ಸಮುದ್ರ ಭಾಗದಲ್ಲಿ ವೈಪರೀತ್ಯಗಳು ಮುಂದುವರಿದಿದ್ದು, ಮುಂಗಾರು ಮಳೆ ಆಗಮನಕ್ಕೆ ದಿನಗಣನೇ ಶುರುವಾಗಿದೆ. ಮತ್ತೊಂದೆಡೆ ರಾಜ್ಯದ ವಿವಿಧ ಕಡೆಗಳಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರಿಸಿದ್ದು, ಮುಂದಿನ 7 ದಿನ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದುವರಿಯಲಿದೆ, ಇದರ ಬೆನ್ನಲ್ಲೆ ಮುಂಗಾರು ಮಳೆ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಭೀಕರ ಬಿರುಗಾಳಿ ಬೀಸಲಿದೆ. ಇದರೊಂದಿಗೆ ಪ್ರಾಣಾಂತಿಕ ಗುಡುಗು ಮತ್ತು ಮಿಂಚು ಸಹಿತ ಆರ್ಭಟ ಇರಲಿದ್ದು, ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಸೂಚಿಸಲಾಗಿದೆ.
ಹವಾಮಾನ ಇಲಾಖೆ ಪ್ರಕಾರ, ಮೇ.26ರ ಹೊತ್ತಿಗೆ ಮುಂಗಾರು ಮಳೆಯ ಮಾರುತಗಳು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ. ಅವಧಿಗೂ ಮುನ್ನವೇ ಅಂದರೆ ಇನ್ನು ಹತ್ತೇ ದಿನಗಳಲ್ಲಿ (ಮೇ ಕೊನೆ ವಾರ) ಮುಂಗಾರಿನ ಅಧಿಕೃತ ಪ್ರವೇಶವಾಗಲಿದೆ ಎನ್ನಲಾಗಿದೆ. ಹೇಗೆಂದರೆ 3-4 ದಿನಗಳಲ್ಲಿ ಆಗ್ನೆಯ ಅರೇಬಿಯನ್ ಸಮುದ್ರ, ನೈಋತ್ಯ ಮತ್ತು ಆಗ್ನೆಯ ಬಂಗಾಳಕೊಲ್ಲಿಯ ಕೆಲವು ಭಾಗಗಳು ಮಾತ್ರವಲ್ಲದೇ ಅಂಡಮಾನ್ ದ್ವಿ?ಪಗಳು ಮತ್ತು ಅಂಡಮಾನ್ ಸಮುದ್ರದ ಭಾಗಗಳಲ್ಲಿ ಮುಂಗಾರು ಆಗಮಿಸಲು ಪೂರಕ ವಾತಾವರಣ ನಿರ್ಮಾಣವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ವಿವಿಧ ಭಾಗಗಳಲ್ಲಿ ಅನುಕೂಲಕರ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿದೆ. ಮೇ.16ರಂದು ಕಂಡು ಬಂದಿದ್ದ ಚಂಡಮಾರುತದ ಪರಿಚಲನೆಯು ಸರಾಸರಿ ಸಮುದ್ರ ಮಟ್ಟದಿಂದ 4.5 ಕಿ.ಮೀವರೆಗೆ ವಿಸ್ತರಿಸಿದೆ. ಇದು ಇನ್ನಷ್ಟು ತೀವ್ರಗೊಳ್ಳಲೂಬಹುದು. ಇದು ಉತ್ತರ ಕರಾವಳಿ ತಮಿಳುನಾಡು ಮತ್ತಿತರ ಪ್ರದೇಶಗಳಲ್ಲಿ ಮೇಲೆ ಪ್ರಭಾವ ಬೀರುತ್ತದೆ. ವಿದರ್ಭ ಪ್ರದೇಶದಲ್ಲೂ ವಾಯು ಚಂಡಮಾರುತದ ಪರಿಚಲನೆಯು (1.5 ಕಿಮೀ) ಮುಂದುವರೆದಿದೆ.
ರಾಜ್ಯದಲ್ಲಿ ಕಳೆದ 24ಗಂಟೆಯಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿದೆ. ಬಾಳೆಹೊನ್ನೂರು, ಮಂಗಳೂರು, ಆಗುಂಬೆ, ಮೂಡಿಗೆರೆ, ಕೊಪ್ಪಳದಲ್ಲಿ ಸಾಧಾರಣ ಮಳೆ ಆಗಿದೆ. ಉತ್ತರ ಕರ್ನಾಟಕದ ಒಂದಷ್ಟು ಕಡೆಗಳಲ್ಲಿ ಹಗುರ ಮಳೆ ಆಗಿದ್ದರೆ, ಬೆಂಗಳೂರಿನಲ್ಲಿ ನೆನ್ನೆ ಇಡೀ ದಿನ ಮಬ್ಬು ಕವಿದಿತ್ತು. ಮುಂದಿನ 7 ದಿನ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆ ನಿರೀಕ್ಷೆ ಇದೆ.
ಇಂದಿನಿಂದ 3-5 ದಿನ ಕೊಡಗು, ಹಾಸನ, ಚಾಮರಾಜನಗರ, ಮೈಸೂರು, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದು ದಿನ ಭಾರೀ ಮಳೆ ಆಗಲಿದ್ದು, ಪ್ರತ್ಯೇಕ ದಿನಗಳಲ್ಲಿ ಆಯಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ನಿರೀಕ್ಷೆ ಇದೆ. ಈ ಭಾಗದಲ್ಲಿ ಶನಿವಾರದವರೆಗೂ ಅಧಿಕ ಬಿಸಿಲು, ಒಣಹವೆ ಕಂಡು ಬಂದಿದ್ದು, ಇದೀಗ ಮಳೆಯ ವಾತಾವರಣ ಕಂಡು ಬರುತ್ತದೆ.
ಭಾರತದಲ್ಲಿ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…
ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…
ರಾಹುಲ್ ಗಾಂಧಿಯವರ ನಿರ್ಣಯವೇ ಅಂತಿಮ: ಸಿದ್ದರಾಮಯ್ಯ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕರ್ನಾಟಕದಲ್ಲಿ ಭುಗಿಲೇಳಬೇಕಿದ್ದ ಅಽಕಾರ ಹಂಚಿಕೆಯ ಮಾತು…
ಪಾರಂಪರಿಕ ಕಟ್ಟಡಗಳ ಸ್ಥಿತಿ-ಗತಿ ಕುರಿತ ‘ಆಂದೋಲನ’ ಲೇಖನ ಸರಣಿಗೆ ಸಾರ್ವಜನಿಕರ ಮೆಚ್ಚುಗೆ ಮೈಸೂರು: ಅರಮನೆ ನಗರಿಯ ಇತಿಹಾಸ, ಪರಂಪರೆ, ಸಂಸ್ಕೃತಿಯನ್ನು…
ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…
ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…