ರಾಜ್ಯ

ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆ: ಇಳಿಕೆಯಾಗುತ್ತಿರುವ ಜಲಾಶಯಗಳ ನೀರಿನ ಮಟ್ಟ

ಬೆಂಗಳೂರು: ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆಯಾದ ಪರಿಣಾಮ ಬೇಸಿಗೆಯ ಸುಡುಬಿಸಿಲು ರಾಜ್ಯದಲ್ಲಿ ಒಂದೆಡೆ ಹೆಚ್ಚಾಗುತ್ತಿದ್ದರೆ ಮತ್ತೊಂದೆಡೆ ಜಲಾಶಯಗಳ ನೀರು ಗಣನೀಯವಾಗಿ ಕಡಿಮೆಯಾಗುತ್ತಿದೆ.

ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಪ್ರಮುಖ ನಗರ, ಪಟ್ಟಣಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಮಟ್ಟ ಶೇ.44ಕ್ಕೆ ಇಳಿದಿದೆ. ಜಲಾಶಯಗಳ ನೀರು ಕಡಿಮೆಯಾಗುತ್ತಿರುವುದರಿಂದ ಬೇಸಿಗೆ ಬೆಳೆಗಳಿಗೆ ನೀರಿನ ಅಭಾವ ತಲೆದೋರತೊಡಗಿದೆ. ಅಲ್ಲದೆ ಕುಡಿಯುವ ನೀರಿಗೂ ತೊಂದರೆಯಾಗುವ ಸಾಧ್ಯತೆಗಳಿವೆ.

ಕಳೆದ ವರ್ಷ ಮುಂಗಾರು ಮಳೆ ಚೆನ್ನಾಗಿ ಬಿದ್ದ ಪರಿಣಾಮ ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದವು. ಆದರೆ ಬಯಲುಸೀಮೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾದ ಪರಿಣಾಮ ಅಂತರ್ಜಲ ಕುಸಿತ ತೀವ್ರಗೊಂಡಿದ್ದು, ಈಗಾಗಲೇ ಹಲವು ಕಡೆಗಳಲ್ಲಿ ಕೊಳವೆ ಬಾವಿಗಳು ಬತ್ತತೊಡಗಿದ್ದು, ಕೃಷಿ ಹಾಗೂ ಕುಡಿಯುವ ನೀರಿಗೆ ತೊಂದರೆ ಉಂಟಾಗಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ನಿನ್ನೆಯವರೆಗೆ, ಕೆಆರ್‍ಎಸ್ ಜಲಾಶಯದಲ್ಲಿ ಪ್ರಸ್ತುತ ಶೇ.44 ರಷ್ಟು ಮಾತ್ರ ನೀರಿನ ಸಂಗ್ರಹವಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಒಂದು ಟಿಎಂಸಿಗಿಂತಲೂ ಹೆಚ್ಚು ನೀರು ಈ ಬಾರಿ ಕಡಿಮೆಯಿದೆ. 21.64 ಟಿಎಂಸಿ ಅಡಿ ನೀರು ಮಾತ್ರ ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 22.19 ಟಿಎಂಸಿಯಷ್ಟು ನೀರಿನ ಸಂಗ್ರಹವಿತ್ತು. ಬೇಸಿಗೆ ಬಿಸಿಲು ಹೆಚ್ಚಾಗಿರುವುದರಿಂದ ನೀರಿನ ಬಳಕೆಯೂ ಗಣನೀಯವಾಗಿ ಹೆಚ್ಚಾಗುತ್ತಿದೆ. 124.80 ಟಿಎಂಸಿ ಅಡಿ ಗರಿಷ್ಠ ಸಾಮರ್ಥ್ಯದ ಕೆಆರ್‍ಎಸ್‌ನಲ್ಲಿ 98 ಟಿಎಂಸಿ ಅಡಿಯಷ್ಟು ಮಾತ್ರ ನೀರಿದೆ.

ಸದ್ಯಕ್ಕೆ ಕುಡಿಯುವ ನೀರಿಗೆ ತೊಂದರೆಯಾಗದಿದ್ದರೂ ಬೇಸಿಗೆ ಮಳೆ ಸಾಕಷ್ಟು ಪ್ರಮಾಣದಲ್ಲಿ ಬಾರದೆ ಬಿಸಿಲಿನ ತೀವ್ರತೆ ಇದೇ ರೀತಿ ಮುಂದುವರೆದರೆ ನೀರಿನ ಸಂಕಷ್ಟ ಎದುರಾಗುವುದರಲ್ಲಿ ಆಶ್ಚರ್ಯವಿಲ್ಲ.

ಕಬಿನಿ ಜಲಾಶಯದಲ್ಲಿ 7.16 ಟಿಎಂಸಿ ನೀರಿದ್ದು, ಕಳೆದ ವರ್ಷ 9.81 ಟಿಎಂಸಿ ಅಡಿಯಷ್ಟು ನೀರಿದೆ. ಒಟ್ಟು 4 ಜಲಾಶಯಗಳಿಂದ 49.93 ಟಿಎಂಸಿಯಷ್ಟು ನೀರು ಮಾತ್ರ ಸಂಗ್ರಹವಿದೆ.

ಬೇಸಿಗೆಯಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗುತ್ತಿದ್ದರೂ ವ್ಯಾಪಕವಾಗಿ ಮಳೆಯಾಗದ ಪರಿಣಾಮ ಏರಿರುವ ತಾಪಮಾನ ತಗ್ಗಿಸಲು ಸಾಧ್ಯವಾಗುತ್ತಿಲ್ಲ. ಅಲ್ಲದೆ ಜಲಾಶಯದ ಒಳಹರಿವು ಹೆಚ್ಚಳವಾಗುವುದಿಲ್ಲ. ಮುಂಗಾರು ಪ್ರಾರಂಭವಾಗುವ ಜೂನ್‍ವರೆಗೂ ಜಲಾಶಯಗಳಿಗೆ ನೀರು ಹರಿದುಬರುವ ಸಾಧ್ಯತೆ ವಿರಳವಾಗಿದೆ.

 

ಆಂದೋಲನ ಡೆಸ್ಕ್

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

36 mins ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

5 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

5 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

6 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

10 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

10 hours ago