ರಾಜ್ಯ

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಎಲ್ಲೆಲ್ಲಿ ಹೊಸ ವರ್ಷಾಚರಣೆ ನಡೆಯಲಿದೆ. ಜನ ಹೆಚ್ಚು ಸೇರುವುದು ಯಾವ ಜಾಗದಲ್ಲಿ, ಸೂಕ್ಷ್ಮ ಪ್ರದೇಶಗಳು ಯಾವ್ಯಾವುವು, ಈ ಹಿಂದೆ ಎಲ್ಲೆಲ್ಲಿ ಗಲಾಟೆಗಳಾಗಿದ್ದವು. ಎಂಬೆಲ್ಲಾ ಮಾಹಿತಿಗಳನ್ನೊಳಗೊಂಡು ಪೊಲೀಸ್ ಅಧಿಕಾರಿಗಳು ಸಮೀಕ್ಷೆ ನಡೆಸಿ, ಪ್ರತ್ಯೇಕ ಮಾಹಿತಿ ಕಲೆಹಾಕಿದ್ದಾರೆ. ಆ ಕುರಿತ ವರದಿಯನ್ನು ಸಿದ್ಧಗೊಳಿಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು ಸೇರಿ ಇತರ ಪ್ರಮುಖ ನಗರಗಳಲ್ಲಿ, ಪ್ರವಾಸಿತಾಣಗಳಲ್ಲಿ ಮತ್ತು ವನ್ಯಧಾಮಗಳಲ್ಲಿ ಹೊಸ ವರ್ಷಾಚರಣೆ ಪ್ರಸ್ತುತ ದಿನಗಳಲ್ಲಿ ವಾಣಿಜ್ಯ ಚಟುವಟಿಕೆಯಾಗಿ ಪರಿವರ್ತನೆಯಾಗಿದೆ. ಹೀಗಾಗಿ ವ್ಯಾಪಾರ-ವಹಿವಾಟಿಗಳಿಗೂ ಧಕ್ಕೆಯಾಗಬಾರದು, ಬೆಂಗಳೂರಿನ ಮತ್ತು ಇತರ ಪ್ರತಿಷ್ಠಿತ ಪ್ರವಾಸಿ ತಾಣಗಳ ವರ್ಚಸ್ಸು ಕುಗ್ಗದಂತೆ ಭದ್ರತೆ ಒದಗಿಸಲು ಸರ್ಕಾರ ಸೂಚನೆ ನೀಡಿದೆ.

ಇದನ್ನು ಓದಿ: ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಪ್ರವಾಸಿಗರಿಗೆ ಮುಜುಗರವಾಗದೆ, ಸಹನೀಯ ವಾತಾವರಣ ನಿರ್ಮಿಸಲು ಸುರಕ್ಷತೆಯ ಖಾತ್ರಿ ನೀಡಬೇಕಿದೆ. ಈ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಹಿರಿಯ ಅಧಿಕಾರಿಗಳು ಈಗಾಗಲೇ ನೀಲ ನಕ್ಷೆ ತಯಾರಿಸಿದ್ದಾರೆ ಎಂದು ಹೇಳಲಾಗಿದೆ. ಈ ಮೊದಲು ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಸಣ್ಣಪುಟ್ಟ ಘಟನೆಗಳು ನಡೆದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿಗೆ ಕೆಟ್ಟ ಹೆಸರು ಬಂದಿತ್ತು. ಅಂತಾರಾಷ್ಟ್ರಿಯ ಮಾಧ್ಯಮಗಳಲ್ಲಿ ವ್ಯಾಪಕವಾದ ಚರ್ಚೆಗಳಿಗೂ ಕಾರಣವಾಗಿತ್ತು. ಐಟಿ-ಬಿಟಿ ಸಿಟಿಯಲ್ಲಿ ಭದ್ರತೆ ಇಲ್ಲ, ಅದರಲ್ಲೂ ಹೆಣ್ಣು ಮಕ್ಕಳಿಗೆ ಅಸುರಕ್ಷತೆಯ ವಾತಾವರಣ ಇದೆ ಎಂಬಂತೆ ಚಿತ್ರಿತವಾಗಿತ್ತು.

ಇತ್ತೀಚೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣ ಬೆಂಗಳೂರಿನ ಪೊಲೀಸರ ವೈಫಲ್ಯವನ್ನು ಎತ್ತಿ ತೋರಿಸಿತ್ತು. ರಾಜ್ಯ ಸರ್ಕಾರದ ಸಾಮರ್ಥ್ಯಕ್ಕೂ ಸವಾಲೆಸೆದಿತ್ತು. ಮೈಸೂರಿನಲ್ಲಿ ಸಿಂಥೆಟಿಕ್ ಡ್ರಗ್ ತಯಾರಿಕಾ ಜಾಲ ಪತ್ತೆಯಾಗಿದ್ದು, ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಛೋಟ, ಜೈಲುಗಳಲ್ಲಿ ಕೈದಿಗಳಿಗೆ ರಾಜಾತಿಥ್ಯ ಘಟನೆಗಳು, ಕೆಲವು ಭೀಕರ ಕೊಲೆಗಳು, ಬ್ಯಾಂಕ್ ದರೋಡೆಗಳು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಅನುಮಾನದ ದೃಷ್ಟಿಯಿಂದ ನೋಡುವಂತೆ ಮಾಡಿವೆ.

ನಾಳೆ ಗೃಹ ಸಚಿವರ ಸಭೆ
ಪೊಲೀಸ್ ಅಧಿಕಾರಿಗಳ ಸಮೀಕ್ಷೆ ಆಧರಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಮತ್ತು ಹಿರಿಯ ಅಧಿಕಾರಿಗಳಿಗೆ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ವಹಿಸಲು ಗೃಹ ಸಚಿವರು ೨೮ ರಂದು ಉನ್ನತಾಧಿಕಾರಿಗಳ ಸಭೆ ನಡೆಸಲಿದ್ದಾರೆ. ಹೊಸ ವರ್ಷ ಆಚರಣೆಯ ಸಂದರ್ಭದಲ್ಲಿ ಯಾವುದೇ ಅವಘಡವಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ.

ಆಂದೋಲನ ಡೆಸ್ಕ್

Recent Posts

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಟೇಲ್ಸ್ ಬೈ ಪರಿ ಕೃತಿಯ ಪುಟ್ಟ ಲೇಖಕಿ ಪರಿಣಿತಾ

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…

1 hour ago

ಅಕ್ರಮ ನಿವಾಸಿಗಳಿಗೆ ಮನೆ: ಸರ್ಕಾರದ ವಿರುದ್ಧ ವಿ.ಸೋಮಣ್ಣ ಆಕ್ರೋಶ

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…

2 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ಕಾಡು ಬೆಕ್ಕು ಪತ್ತೆ

ಗುಂಡ್ಲುಪೇಟೆ: ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಕಾಣಿಸಿಕೊಂಡಿ ಕಾಡುಬೆಕ್ಕನ್ನು ಅರಣ್ಯಾಧಿಕಾರಿಗಳು ಸುರಕ್ಷಿತವಾಗಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ತಾಲ್ಲೂಕಿನ ಬರಗಿ ಗ್ರಾಮದಲ್ಲಿ…

2 hours ago

ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಹಾಗೂ ಕರು ಬಲಿ

ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲ್ಲೂಕಿನ ಬೆಟ್ಟದಮಾದಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಂಕರ್‌ ಎಂಬುವವರು ತಮಗೆ ಸೇರಿದ…

2 hours ago

ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

2 hours ago

ಚಿತ್ರದುರ್ಗ ಬಸ್‌ ದುರಂತ ಪ್ರಕರಣ: ಮತ್ತೋರ್ವ ಗಾಯಾಳು ಸಾವು

ಚಿತ್ರದುರ್ಗ: ಚಿತ್ರದುರ್ಗ ಬಸ್‌ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8ಕ್ಕೇ ಏರಿಕೆಯಾಗಿದೆ. ಮೃತರನ್ನು…

2 hours ago