ರಾಜ್ಯ

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಎಲ್ಲೆಲ್ಲಿ ಹೊಸ ವರ್ಷಾಚರಣೆ ನಡೆಯಲಿದೆ. ಜನ ಹೆಚ್ಚು ಸೇರುವುದು ಯಾವ ಜಾಗದಲ್ಲಿ, ಸೂಕ್ಷ್ಮ ಪ್ರದೇಶಗಳು ಯಾವ್ಯಾವುವು, ಈ ಹಿಂದೆ ಎಲ್ಲೆಲ್ಲಿ ಗಲಾಟೆಗಳಾಗಿದ್ದವು. ಎಂಬೆಲ್ಲಾ ಮಾಹಿತಿಗಳನ್ನೊಳಗೊಂಡು ಪೊಲೀಸ್ ಅಧಿಕಾರಿಗಳು ಸಮೀಕ್ಷೆ ನಡೆಸಿ, ಪ್ರತ್ಯೇಕ ಮಾಹಿತಿ ಕಲೆಹಾಕಿದ್ದಾರೆ. ಆ ಕುರಿತ ವರದಿಯನ್ನು ಸಿದ್ಧಗೊಳಿಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು ಸೇರಿ ಇತರ ಪ್ರಮುಖ ನಗರಗಳಲ್ಲಿ, ಪ್ರವಾಸಿತಾಣಗಳಲ್ಲಿ ಮತ್ತು ವನ್ಯಧಾಮಗಳಲ್ಲಿ ಹೊಸ ವರ್ಷಾಚರಣೆ ಪ್ರಸ್ತುತ ದಿನಗಳಲ್ಲಿ ವಾಣಿಜ್ಯ ಚಟುವಟಿಕೆಯಾಗಿ ಪರಿವರ್ತನೆಯಾಗಿದೆ. ಹೀಗಾಗಿ ವ್ಯಾಪಾರ-ವಹಿವಾಟಿಗಳಿಗೂ ಧಕ್ಕೆಯಾಗಬಾರದು, ಬೆಂಗಳೂರಿನ ಮತ್ತು ಇತರ ಪ್ರತಿಷ್ಠಿತ ಪ್ರವಾಸಿ ತಾಣಗಳ ವರ್ಚಸ್ಸು ಕುಗ್ಗದಂತೆ ಭದ್ರತೆ ಒದಗಿಸಲು ಸರ್ಕಾರ ಸೂಚನೆ ನೀಡಿದೆ.

ಇದನ್ನು ಓದಿ: ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಪ್ರವಾಸಿಗರಿಗೆ ಮುಜುಗರವಾಗದೆ, ಸಹನೀಯ ವಾತಾವರಣ ನಿರ್ಮಿಸಲು ಸುರಕ್ಷತೆಯ ಖಾತ್ರಿ ನೀಡಬೇಕಿದೆ. ಈ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಹಿರಿಯ ಅಧಿಕಾರಿಗಳು ಈಗಾಗಲೇ ನೀಲ ನಕ್ಷೆ ತಯಾರಿಸಿದ್ದಾರೆ ಎಂದು ಹೇಳಲಾಗಿದೆ. ಈ ಮೊದಲು ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಸಣ್ಣಪುಟ್ಟ ಘಟನೆಗಳು ನಡೆದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿಗೆ ಕೆಟ್ಟ ಹೆಸರು ಬಂದಿತ್ತು. ಅಂತಾರಾಷ್ಟ್ರಿಯ ಮಾಧ್ಯಮಗಳಲ್ಲಿ ವ್ಯಾಪಕವಾದ ಚರ್ಚೆಗಳಿಗೂ ಕಾರಣವಾಗಿತ್ತು. ಐಟಿ-ಬಿಟಿ ಸಿಟಿಯಲ್ಲಿ ಭದ್ರತೆ ಇಲ್ಲ, ಅದರಲ್ಲೂ ಹೆಣ್ಣು ಮಕ್ಕಳಿಗೆ ಅಸುರಕ್ಷತೆಯ ವಾತಾವರಣ ಇದೆ ಎಂಬಂತೆ ಚಿತ್ರಿತವಾಗಿತ್ತು.

ಇತ್ತೀಚೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣ ಬೆಂಗಳೂರಿನ ಪೊಲೀಸರ ವೈಫಲ್ಯವನ್ನು ಎತ್ತಿ ತೋರಿಸಿತ್ತು. ರಾಜ್ಯ ಸರ್ಕಾರದ ಸಾಮರ್ಥ್ಯಕ್ಕೂ ಸವಾಲೆಸೆದಿತ್ತು. ಮೈಸೂರಿನಲ್ಲಿ ಸಿಂಥೆಟಿಕ್ ಡ್ರಗ್ ತಯಾರಿಕಾ ಜಾಲ ಪತ್ತೆಯಾಗಿದ್ದು, ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಛೋಟ, ಜೈಲುಗಳಲ್ಲಿ ಕೈದಿಗಳಿಗೆ ರಾಜಾತಿಥ್ಯ ಘಟನೆಗಳು, ಕೆಲವು ಭೀಕರ ಕೊಲೆಗಳು, ಬ್ಯಾಂಕ್ ದರೋಡೆಗಳು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಅನುಮಾನದ ದೃಷ್ಟಿಯಿಂದ ನೋಡುವಂತೆ ಮಾಡಿವೆ.

ನಾಳೆ ಗೃಹ ಸಚಿವರ ಸಭೆ
ಪೊಲೀಸ್ ಅಧಿಕಾರಿಗಳ ಸಮೀಕ್ಷೆ ಆಧರಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಮತ್ತು ಹಿರಿಯ ಅಧಿಕಾರಿಗಳಿಗೆ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ವಹಿಸಲು ಗೃಹ ಸಚಿವರು ೨೮ ರಂದು ಉನ್ನತಾಧಿಕಾರಿಗಳ ಸಭೆ ನಡೆಸಲಿದ್ದಾರೆ. ಹೊಸ ವರ್ಷ ಆಚರಣೆಯ ಸಂದರ್ಭದಲ್ಲಿ ಯಾವುದೇ ಅವಘಡವಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ.

ಆಂದೋಲನ ಡೆಸ್ಕ್

Recent Posts

ಸಭೆ ನಡೆಸುತ್ತಿರುವಾಗಲೇ ತೀವ್ರ ಅಸ್ವಸ್ಥ ; ಡಿಸಿಎಂ ಪವನ್‌ ಕಲ್ಯಾಣ್‌ಗೆ ದಿಢೀರ್‌ ಶಸ್ತ್ರ ಚಿಕಿತ್ಸೆ,

ಹೈದರಾಬಾದ್ : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಅವರಿಗೆ ಹೈದರಾಬಾದ್‌ನಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ…

28 mins ago

ಸರ್ವಾಧಿಕಾರಿ ಬಿಜೆಪಿಯೇ ಮಹಿಳಾ ವಿರೋಧಿ : ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ

ಬೆಂಗಳೂರು : ಮಹಿಳಾ ಮೀಸಲಾತಿ ಪರಿಕಲ್ಪನೆ ಕಾಂಗ್ರೆಸ್‌ನ ಕೂಸು. ಮಸೂದೆಗೆ ಸೋಲಾಗಲಿದೆ ಎಂದು ಗೊತ್ತಿದ್ದರೂ ಸರ್ವಾಧಿಕಾರಿಯಂತೆ ಯಾವುದೇ ಚರ್ಚೆ ಮಾಡದೆ,…

57 mins ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ ಪ್ರಕರಣ : ಎಸ್‌.ಪಿ.ಮಲ್ಲಿಕಾರ್ಜುನ ಹೇಳಿದ್ದೇನು?

ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ…

1 hour ago

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

ರೋಮ್‌ : ಇಟಲಿಯ ಬರ್ಗಾಮೊ ಪ್ರಾಂತ್ಯದ ಕೊವೊದಲ್ಲಿ ಇಬ್ಬರು ಭಾರತೀಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೊವೊ ನಿವಾಸಿ ರಾಗಿಂದರ್ ಸಿಂಗ್…

1 hour ago

ಮೈಸೂರು | ಪಬ್‌ನಲ್ಲಿ ಗಲಾಟೆ ; ಓರ್ವ ಯುವಕನ ಕೊಲೆ

ಮೈಸೂರು : ಪಬ್‌ನಲ್ಲಿ ನಡೆದ ಗಲಾಟೆ ಪರಿಣಾಮ ಓರ್ವ ಯುವಕ ಕೊಲೆಯಾಗಿರುವ ಘಟನೆ ಮೈಸೂರಿನ ವಿಜಯನಗರದ ಎರಡನೇ ಹಂತದ ರೆಸ್ಟೋರೆಂಟ್‌ನಲ್ಲಿ…

2 hours ago

ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಹಾವೇರಿ: ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು…

2 hours ago