ಹುಬ್ಬಳ್ಳಿ : ಕ್ರೂರಿ ತಂದೆಯೊಬ್ಬ ತನ್ನ 7 ತಿಂಗಳ ಗರ್ಭಿಣಿ ಮಗಳನ್ನು ಕೊಚ್ಚಿ ಕೊಂದಿರುವ ಘಟನೆಯೊಂದು ನಡೆದಿದೆ. ಹುಬ್ಬಳ್ಳಿಯಲ್ಲಿ ನಡೆದಿರುವ ಈ ಮರ್ಯಾದಾ ಹತ್ಯೆ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.
ಈ ಘಟನೆ ಜಾತಿ ಆಧಾರಿತ ಮದುವೆಗೆ ಸಂಬಂಧಿಸಿದೆ ಎಂದು ಹೇಳಲಾಗುತ್ತಿದೆ. ಹತ್ಯೆಯಾಗಿರುವ ಮಹಿಳೆಯನ್ನು ಮಾನ್ಯಾ ಪಾಟೀಲ್ ಎಂದು ಗುರುತಿಸಲಾಗಿದೆ.
ಇದನ್ನು ಓದಿ: ಹುಬ್ಬಳ್ಳಿ | ದಲಿತ ಯುವಕನ ಜೊತೆ ಮದುವೆ : ಗರ್ಭಿಣಿ ಮಗಳನ್ನ ಕೊಂದ ಪೋಷಕರು
ಈ ಸಂಬಂಧ ದಲಿತ ಸಂಘಟನೆಗಳ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರು ಧಿಕ್ಕಾರ, ಧಿಕ್ಕಾರ, ಬೇಕು ಬೇಕು ನ್ಯಾಯ ಬೇಕು, ಜಸ್ಟಿಸ್ ಫಾರ್ ಮಾನ್ಯಾ ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಮರ್ಯಾದಾ ಹತ್ಯೆಗೆ ಕಾರಣರಾದವರನ್ನು ಬಂಧಿಸುವಂತೆ ಮತ್ತು ದಲಿತರ ಮೇಲಿನ ದೌರ್ಜನ್ಯವನ್ನು ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ.
ದಲಿತ ವಿರೋಧಿಗಳಿಗೆ, ಜಾತಿವಾದಿಗಳಿಗೆ ಮತ್ತು ಜಾತಿ ರಾಕ್ಷಸರಿಗೆ ಧಿಕ್ಕಾರ ಎಂದು ಘೋಷಣೆಗಳನ್ನು ಕೂಗುವ ಮೂಲಕ ಘಟನೆಯ ಬಗ್ಗೆ ತಮ್ಮ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. 7 ತಿಂಗಳ ಗರ್ಭಿಣಿಯ ಹತ್ಯೆಯನ್ನು ಖಂಡಿಸಿ, ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…