ರಾಜ್ಯ

ಗರ್ಭಿಣ ಹತ್ಯೆ | ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು

ಹುಬ್ಬಳ್ಳಿ : ಕ್ರೂರಿ ತಂದೆಯೊಬ್ಬ ತನ್ನ 7 ತಿಂಗಳ ಗರ್ಭಿಣಿ ಮಗಳನ್ನು ಕೊಚ್ಚಿ ಕೊಂದಿರುವ ಘಟನೆಯೊಂದು ನಡೆದಿದೆ. ಹುಬ್ಬಳ್ಳಿಯಲ್ಲಿ ನಡೆದಿರುವ ಈ ಮರ್ಯಾದಾ ಹತ್ಯೆ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ಈ ಘಟನೆ ಜಾತಿ ಆಧಾರಿತ ಮದುವೆಗೆ ಸಂಬಂಧಿಸಿದೆ ಎಂದು ಹೇಳಲಾಗುತ್ತಿದೆ. ಹತ್ಯೆಯಾಗಿರುವ ಮಹಿಳೆಯನ್ನು ಮಾನ್ಯಾ ಪಾಟೀಲ್ ಎಂದು ಗುರುತಿಸಲಾಗಿದೆ.

ಇದನ್ನು ಓದಿ: ಹುಬ್ಬಳ್ಳಿ | ದಲಿತ ಯುವಕನ ಜೊತೆ ಮದುವೆ : ಗರ್ಭಿಣಿ ಮಗಳನ್ನ ಕೊಂದ ಪೋಷಕರು

ಈ ಸಂಬಂಧ ದಲಿತ ಸಂಘಟನೆಗಳ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರು ಧಿಕ್ಕಾರ, ಧಿಕ್ಕಾರ, ಬೇಕು ಬೇಕು ನ್ಯಾಯ ಬೇಕು, ಜಸ್ಟಿಸ್ ಫಾರ್ ಮಾನ್ಯಾ ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಮರ್ಯಾದಾ ಹತ್ಯೆಗೆ ಕಾರಣರಾದವರನ್ನು ಬಂಧಿಸುವಂತೆ ಮತ್ತು ದಲಿತರ ಮೇಲಿನ ದೌರ್ಜನ್ಯವನ್ನು ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ.

ದಲಿತ ವಿರೋಧಿಗಳಿಗೆ, ಜಾತಿವಾದಿಗಳಿಗೆ ಮತ್ತು ಜಾತಿ ರಾಕ್ಷಸರಿಗೆ ಧಿಕ್ಕಾರ ಎಂದು ಘೋಷಣೆಗಳನ್ನು ಕೂಗುವ ಮೂಲಕ ಘಟನೆಯ ಬಗ್ಗೆ ತಮ್ಮ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. 7 ತಿಂಗಳ ಗರ್ಭಿಣಿಯ ಹತ್ಯೆಯನ್ನು ಖಂಡಿಸಿ, ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕ್ರಿಕೆಟ್ ಕ್ರೀಡಾಂಗಣಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…

4 mins ago

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…

6 mins ago

ಓದುಗರ ಪತ್ರ: ಸಿದ್ದರಾಮಯ್ಯನವರ ಆಡಳಿತ ಮಾದರಿ

ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…

10 mins ago

ಸಿದ್ದು ರಾಜೀನಾಮೆ; ಒಂದು ಯುಗದ ಅಂತ್ಯ!

ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…

12 mins ago

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

3 hours ago

ಮಾರ್ಟಿನ್ ಲೂಥರ್ ಕಿಂಗ್ ಕಣ್ಣಲ್ಲಿ ಮಹಾತ್ಮ ಗಾಂಧಿ…

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಭಗವಂತ ಯೇಸು ನಮಗೆ ದಾರಿ ಅಂದರೆ, ಶಾಂತಿ…

3 hours ago