ಬೆಂಗಳೂರು : ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉನ್ನತ ಮಟ್ಟದ ತನಿಖೆ ನಡೆಸಲು ಈಗಾಗಲೇ ಪ್ರಾಥಮಿಕ ಸಿದ್ಧತೆಗಳು ನಡೆದಿವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎನ್.ರಾಜಣ್ಣ ಈವರೆಗೂ ದೂರು ನೀಡಿಲ್ಲ. ಆದರೆ ವಿಧಾನಸಭೆಯಲ್ಲಿ ಇದು ಪ್ರಸ್ತಾಪವಾಗಿದೆ. ಭಾರಿ ಪ್ರಮಾಣದ ಚರ್ಚೆಯಾಗಿದೆ. ಇಷ್ಟೆಲ್ಲಾ ಆದ ಮೇಲೆ ನಾವು ಸುಮ್ಮನೇ ಇರಲು ಸಾಧ್ಯವಿಲ್ಲ. ಸರ್ಕಾರದ ವತಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆಯಾಗಿದೆ. ಮುಖ್ಯಮಂತ್ರಿಯವರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.
ವಿಧಾನಸಭೆಯಲ್ಲಿ ಈವರೆಗೂ ನಡೆಯದೇ ಇರುವಂತಹ ಎಲ್ಲಾ ವಿಚಾರಗಳೂ ಈ ಪ್ರಕರಣದಲ್ಲಿ ನಡೆದಿವೆ. ಹೀಗಾಗಿ ಇನ್ನೂ ತಡ ಮಾಡುವುದು ಸೂಕ್ತವಲ್ಲ ಎಂಬುದು ಸರ್ಕಾರದ ಅಭಿಪ್ರಾಯ. ಮುಖ್ಯಮಂತ್ರಿಯವರ ಜೊತೆ ಚರ್ಚಿಸುವ ಮುನ್ನ ಪೂರ್ವಭಾವಿಯಾಗಿ ಗೃಹ ಇಲಾಖೆಯಿಂದ ಸಾಕಷ್ಟು ತಯಾರಿಗಳನ್ನು ಮಾಡಿಕೊಳ್ಳಲಾಗಿದೆ ಎಂದರು.
ರಾಜಣ್ಣ ಅವರು ದೂರು ನೀಡಿದ ತಕ್ಷಣವೇ ಮುಂದೆ ಏನು ಮಾಡಬೇಕು ಎಂಬ ಬಗ್ಗೆ ಚರ್ಚೆ ಮಾಡಿ ಕ್ರಮ ಕೈಗೊಳ್ಳುತ್ತೇವೆ. ಬಿಜೆಪಿಯವರು ಪ್ರಕರಣವನ್ನು ಸಿಬಿಐ ತನಿಖೆಗೆ ಆಗ್ರಹಿಸಿದ್ದಾರೆ. ಆದರೆ ರಾಜ್ಯಸರ್ಕಾರ ತನ್ನದೇ ಆದ ವಿಚಾರಣೆಯನ್ನು ನಡೆಸಲಿದೆ. ಬಿಜೆಪಿಯವರು ಹೇಳಿದಂತೆ ತನಿಖೆ ಮಾಡಲಾಗುವುದಿಲ್ಲ ಎಂದು ತಿರುಗೇಟು ನೀಡಿದರು.
ಹನಿಟ್ರ್ಯಾಪ್ ಪ್ರಕರಣವನ್ನು ರಾಜ್ಯಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಸಚಿವ ಕೆ.ಎನ್.ರಾಜಣ್ಣ ಅವರ ಜೊತೆಗೆ 48 ಮಂದಿ ಹನಿಟ್ರ್ಯಾಪ್ಗೆ ಒಳಗಾಗಿದ್ದಾರೆ. ಅವರ ವಿಡಿಯೋ ಮತ್ತು ಸಿಡಿಗಳಿವೆ ಎಂಬ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ. ಸದನದಲ್ಲಿ ಏಕಾಏಕಿ ಈ ವಿಚಾರ ಪ್ರಸ್ತಾಪವಾಗಿರುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ ಅಸಮಾಧಾನಗೊಂಡಿದೆ ಎಂಬ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಹೇಳಿದರು.
ಈ ಪ್ರಕರಣದಲ್ಲಿ ತಮ್ಮ ಮೇಲೆ ಯಾರೂ ಪ್ರಭಾವ ಬೀರುವ ಯತ್ನ ಮಾಡಿಲ್ಲ. ನಮ್ಮ ಪಾಡಿಗೆ ನಾವು ತನಿಖೆಗೆ ತಯಾರಿ ಮಾಡಿಕೊಂಡಿದ್ದೇವೆ. ದೂರು ದಾಖಲಿಸುವಂತೆ ಒತ್ತಡ ಹಾಕಲಾಗುತ್ತಿದೆ ಎಂಬುದು ಸತ್ಯಕ್ಕೆ ದೂರವಾದ ವಿಚಾರ ಎಂದು ತಿಳಿಸಿದರು.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…