ಬೆಂಗಳೂರು : ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉನ್ನತ ಮಟ್ಟದ ತನಿಖೆ ನಡೆಸಲು ಈಗಾಗಲೇ ಪ್ರಾಥಮಿಕ ಸಿದ್ಧತೆಗಳು ನಡೆದಿವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎನ್.ರಾಜಣ್ಣ ಈವರೆಗೂ ದೂರು ನೀಡಿಲ್ಲ. ಆದರೆ ವಿಧಾನಸಭೆಯಲ್ಲಿ ಇದು ಪ್ರಸ್ತಾಪವಾಗಿದೆ. ಭಾರಿ ಪ್ರಮಾಣದ ಚರ್ಚೆಯಾಗಿದೆ. ಇಷ್ಟೆಲ್ಲಾ ಆದ ಮೇಲೆ ನಾವು ಸುಮ್ಮನೇ ಇರಲು ಸಾಧ್ಯವಿಲ್ಲ. ಸರ್ಕಾರದ ವತಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆಯಾಗಿದೆ. ಮುಖ್ಯಮಂತ್ರಿಯವರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.
ವಿಧಾನಸಭೆಯಲ್ಲಿ ಈವರೆಗೂ ನಡೆಯದೇ ಇರುವಂತಹ ಎಲ್ಲಾ ವಿಚಾರಗಳೂ ಈ ಪ್ರಕರಣದಲ್ಲಿ ನಡೆದಿವೆ. ಹೀಗಾಗಿ ಇನ್ನೂ ತಡ ಮಾಡುವುದು ಸೂಕ್ತವಲ್ಲ ಎಂಬುದು ಸರ್ಕಾರದ ಅಭಿಪ್ರಾಯ. ಮುಖ್ಯಮಂತ್ರಿಯವರ ಜೊತೆ ಚರ್ಚಿಸುವ ಮುನ್ನ ಪೂರ್ವಭಾವಿಯಾಗಿ ಗೃಹ ಇಲಾಖೆಯಿಂದ ಸಾಕಷ್ಟು ತಯಾರಿಗಳನ್ನು ಮಾಡಿಕೊಳ್ಳಲಾಗಿದೆ ಎಂದರು.
ರಾಜಣ್ಣ ಅವರು ದೂರು ನೀಡಿದ ತಕ್ಷಣವೇ ಮುಂದೆ ಏನು ಮಾಡಬೇಕು ಎಂಬ ಬಗ್ಗೆ ಚರ್ಚೆ ಮಾಡಿ ಕ್ರಮ ಕೈಗೊಳ್ಳುತ್ತೇವೆ. ಬಿಜೆಪಿಯವರು ಪ್ರಕರಣವನ್ನು ಸಿಬಿಐ ತನಿಖೆಗೆ ಆಗ್ರಹಿಸಿದ್ದಾರೆ. ಆದರೆ ರಾಜ್ಯಸರ್ಕಾರ ತನ್ನದೇ ಆದ ವಿಚಾರಣೆಯನ್ನು ನಡೆಸಲಿದೆ. ಬಿಜೆಪಿಯವರು ಹೇಳಿದಂತೆ ತನಿಖೆ ಮಾಡಲಾಗುವುದಿಲ್ಲ ಎಂದು ತಿರುಗೇಟು ನೀಡಿದರು.
ಹನಿಟ್ರ್ಯಾಪ್ ಪ್ರಕರಣವನ್ನು ರಾಜ್ಯಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಸಚಿವ ಕೆ.ಎನ್.ರಾಜಣ್ಣ ಅವರ ಜೊತೆಗೆ 48 ಮಂದಿ ಹನಿಟ್ರ್ಯಾಪ್ಗೆ ಒಳಗಾಗಿದ್ದಾರೆ. ಅವರ ವಿಡಿಯೋ ಮತ್ತು ಸಿಡಿಗಳಿವೆ ಎಂಬ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ. ಸದನದಲ್ಲಿ ಏಕಾಏಕಿ ಈ ವಿಚಾರ ಪ್ರಸ್ತಾಪವಾಗಿರುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ ಅಸಮಾಧಾನಗೊಂಡಿದೆ ಎಂಬ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಹೇಳಿದರು.
ಈ ಪ್ರಕರಣದಲ್ಲಿ ತಮ್ಮ ಮೇಲೆ ಯಾರೂ ಪ್ರಭಾವ ಬೀರುವ ಯತ್ನ ಮಾಡಿಲ್ಲ. ನಮ್ಮ ಪಾಡಿಗೆ ನಾವು ತನಿಖೆಗೆ ತಯಾರಿ ಮಾಡಿಕೊಂಡಿದ್ದೇವೆ. ದೂರು ದಾಖಲಿಸುವಂತೆ ಒತ್ತಡ ಹಾಕಲಾಗುತ್ತಿದೆ ಎಂಬುದು ಸತ್ಯಕ್ಕೆ ದೂರವಾದ ವಿಚಾರ ಎಂದು ತಿಳಿಸಿದರು.
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…