ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ.
ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ ವಾಣಿಜ್ಯ ಕೇಂದ್ರವಾಗಿತ್ತು. ಈಗ ಪುಣ್ಯಕ್ಷೇತ್ರವಾಗಿದೆ. ಇಲ್ಲಿ ಭೂಗರ್ಭದಲ್ಲಿ ಅಪಾರ ಪ್ರಮಾಣದ ಸಂಪತ್ತು ಅಡಗಿದೆ ಎಂಬ ನಂಬಿಕೆಯಿದೆ. ಇಲ್ಲಿನ ಭೂಮಿಯಲ್ಲಿ ಕೆಲ ಐತಿಹಾಸಿಕ ಕುರುಹುಗಳು ಪತ್ತೆಯಾಗಿವೆ.
ಈ ಹಿನ್ನೆಲೆಯಲ್ಲಿ ಲಕ್ಕುಂಡಿಯಲ್ಲಿ ನಿಧಿ ಸಿಕ್ಕಿರುವ ಬೆನ್ನಲ್ಲೇ ಮುದನೂರು ಗ್ರಾಮದಲ್ಲಿಯೂ ಅಪಾರ ಪ್ರಮಾಣದ ಸಂಪತ್ತು ಸಿಗುವ ನಿರೀಕ್ಷೆ ಮೂಡಿದ್ದು, ಇಲ್ಲಿಯೂ ಉತ್ಖನನ ಮಾಡುವಂತೆ ಒತ್ತಾಯ ಕೇಳಿಬಂದಿದೆ.
ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮುದನೂರು ಗ್ರಾಮದಲ್ಲಿ ಅಪಾರ ಪ್ರಮಾಣದ ವಜ್ರ, ಚಿನ್ನಾಭರಣ ಸಂಪತ್ತು ಅಡಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಈ ಹಿನ್ನೆಲೆಯಲ್ಲಿ ಗ್ರಾಮದಲ್ಲಿ 160 ಮನೆಗಳನ್ನು ಸ್ಥಳಾಂತರಿಸಿ ಉತ್ಖನನ ಮಾಡಿದರೆ ಭೂಗರ್ಭದಲ್ಲಿ ಅಡಗಿರುವ ಸಂಪತ್ತು ಬೆಳಕಿಗೆ ಬರಲಿದೆ. ಈಗಾಗಲೇ ಜಿಲ್ಲಾಡಳಿತ 160 ಮನೆಗಳ ಸ್ಥಳಾಂತರಕ್ಕೆ ಗುರುತಿಸಿದೆ. ಇಲ್ಲಿಯೂ ಕೂಡ ಜಿಲ್ಲಾಡಳಿತ ಉತ್ಖನನ ಮಾಡುವ ಸಾಧ್ಯತೆ ದಟ್ಟವಾಗಿದೆ.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…