ರಾಜ್ಯ

ಲಕ್ಕುಂಡಿ ಬೆನ್ನಲ್ಲೇ ಯಾದಗಿರಿಯಲ್ಲೂ ಉತ್ಖನನ ನಡೆಸಲು ಸಿದ್ಧತೆ

ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ.

ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ ವಾಣಿಜ್ಯ ಕೇಂದ್ರವಾಗಿತ್ತು. ಈಗ ಪುಣ್ಯಕ್ಷೇತ್ರವಾಗಿದೆ. ಇಲ್ಲಿ ಭೂಗರ್ಭದಲ್ಲಿ ಅಪಾರ ಪ್ರಮಾಣದ ಸಂಪತ್ತು ಅಡಗಿದೆ ಎಂಬ ನಂಬಿಕೆಯಿದೆ. ಇಲ್ಲಿನ ಭೂಮಿಯಲ್ಲಿ ಕೆಲ ಐತಿಹಾಸಿಕ ಕುರುಹುಗಳು ಪತ್ತೆಯಾಗಿವೆ.

ಈ ಹಿನ್ನೆಲೆಯಲ್ಲಿ ಲಕ್ಕುಂಡಿಯಲ್ಲಿ ನಿಧಿ ಸಿಕ್ಕಿರುವ ಬೆನ್ನಲ್ಲೇ ಮುದನೂರು ಗ್ರಾಮದಲ್ಲಿಯೂ ಅಪಾರ ಪ್ರಮಾಣದ ಸಂಪತ್ತು ಸಿಗುವ ನಿರೀಕ್ಷೆ ಮೂಡಿದ್ದು, ಇಲ್ಲಿಯೂ ಉತ್ಖನನ ಮಾಡುವಂತೆ ಒತ್ತಾಯ ಕೇಳಿಬಂದಿದೆ.

ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮುದನೂರು ಗ್ರಾಮದಲ್ಲಿ ಅಪಾರ ಪ್ರಮಾಣದ ವಜ್ರ, ಚಿನ್ನಾಭರಣ ಸಂಪತ್ತು ಅಡಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಹಿನ್ನೆಲೆಯಲ್ಲಿ ಗ್ರಾಮದಲ್ಲಿ 160 ಮನೆಗಳನ್ನು ಸ್ಥಳಾಂತರಿಸಿ ಉತ್ಖನನ ಮಾಡಿದರೆ ಭೂಗರ್ಭದಲ್ಲಿ ಅಡಗಿರುವ ಸಂಪತ್ತು ಬೆಳಕಿಗೆ ಬರಲಿದೆ. ಈಗಾಗಲೇ ಜಿಲ್ಲಾಡಳಿತ 160 ಮನೆಗಳ ಸ್ಥಳಾಂತರಕ್ಕೆ ಗುರುತಿಸಿದೆ. ಇಲ್ಲಿಯೂ ಕೂಡ ಜಿಲ್ಲಾಡಳಿತ ಉತ್ಖನನ ಮಾಡುವ ಸಾಧ್ಯತೆ ದಟ್ಟವಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

6 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

6 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

6 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

9 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

9 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

9 hours ago