ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ.
ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ ವಾಣಿಜ್ಯ ಕೇಂದ್ರವಾಗಿತ್ತು. ಈಗ ಪುಣ್ಯಕ್ಷೇತ್ರವಾಗಿದೆ. ಇಲ್ಲಿ ಭೂಗರ್ಭದಲ್ಲಿ ಅಪಾರ ಪ್ರಮಾಣದ ಸಂಪತ್ತು ಅಡಗಿದೆ ಎಂಬ ನಂಬಿಕೆಯಿದೆ. ಇಲ್ಲಿನ ಭೂಮಿಯಲ್ಲಿ ಕೆಲ ಐತಿಹಾಸಿಕ ಕುರುಹುಗಳು ಪತ್ತೆಯಾಗಿವೆ.
ಈ ಹಿನ್ನೆಲೆಯಲ್ಲಿ ಲಕ್ಕುಂಡಿಯಲ್ಲಿ ನಿಧಿ ಸಿಕ್ಕಿರುವ ಬೆನ್ನಲ್ಲೇ ಮುದನೂರು ಗ್ರಾಮದಲ್ಲಿಯೂ ಅಪಾರ ಪ್ರಮಾಣದ ಸಂಪತ್ತು ಸಿಗುವ ನಿರೀಕ್ಷೆ ಮೂಡಿದ್ದು, ಇಲ್ಲಿಯೂ ಉತ್ಖನನ ಮಾಡುವಂತೆ ಒತ್ತಾಯ ಕೇಳಿಬಂದಿದೆ.
ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮುದನೂರು ಗ್ರಾಮದಲ್ಲಿ ಅಪಾರ ಪ್ರಮಾಣದ ವಜ್ರ, ಚಿನ್ನಾಭರಣ ಸಂಪತ್ತು ಅಡಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಈ ಹಿನ್ನೆಲೆಯಲ್ಲಿ ಗ್ರಾಮದಲ್ಲಿ 160 ಮನೆಗಳನ್ನು ಸ್ಥಳಾಂತರಿಸಿ ಉತ್ಖನನ ಮಾಡಿದರೆ ಭೂಗರ್ಭದಲ್ಲಿ ಅಡಗಿರುವ ಸಂಪತ್ತು ಬೆಳಕಿಗೆ ಬರಲಿದೆ. ಈಗಾಗಲೇ ಜಿಲ್ಲಾಡಳಿತ 160 ಮನೆಗಳ ಸ್ಥಳಾಂತರಕ್ಕೆ ಗುರುತಿಸಿದೆ. ಇಲ್ಲಿಯೂ ಕೂಡ ಜಿಲ್ಲಾಡಳಿತ ಉತ್ಖನನ ಮಾಡುವ ಸಾಧ್ಯತೆ ದಟ್ಟವಾಗಿದೆ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…