ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ ಶಿಪ್(ಜಿಬಿಐಟಿ) ಡಿಪಿಆರ್ ಸಿದ್ಧಪಡಿಸಲು ಮುಂದಾಗಿದೆ.
ಯೋಜನೆಯ ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಸುಮಾರು 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ಜಿಬಿಐಟಿ ತೀರ್ಮಾನಿಸಿದೆ.
ಟೆಂಡರ್ ಪ್ರಕ್ರಿಯೆಯ ಭಾಗವಾಗಿ ಜೂನ್ 22ರಂದು ಟೆಂಡರ್ ತೆರೆಯಲಾಗುವುದು. ಅಲ್ಲಿ ಆಯ್ಕೆಯಾಗುವ ಸಂಸ್ಥೆಗೆ ಟೌನ್ಶಿಪ್ನ ಸಮಗ್ರ ರೂಪರೇಷೆ ಸಿದ್ಧಪಡಿಸುವ ಜವಾಬ್ದಾರಿ ವಹಿಸಲಾಗುತ್ತದೆ.
ಡಿಪಿಆರ್ನಲ್ಲಿ ಏನೆಲ್ಲ ಇರಲಿದೆ
ಟೆಂಡರ್ ಪಡೆಯುವ ಸಂಸ್ಥೆಯು ಟೌನ್ಶಿಪ್ನ ಸಂಪೂರ್ಣ ಬ್ಲೂಪ್ರಿಂಟ್, ಮಾಸ್ಟರ್ ಪ್ಲಾನ್ ಹಾಗೂ ರೋಡ್ಮ್ಯಾಪ್ ಸಿದ್ಧಪಡಿಸಬೇಕು. ಇದರ ಜೊತೆಗೆ, ಟೌನ್ಶಿಪ್ ಅನುಷ್ಠಾನದ ಕಾರ್ಯತಂತ್ರ,ರಸ್ತೆ, ನೀರು, ಒಳಚರಂಡಿ, ವಿದ್ಯುತ್ ಸೇರಿದಂತೆ ಮೂಲಭೂತ ಸೌಲಭ್ಯಗಳ ಯೋಜನೆ, ಸಾಮಾಜಿಕ ಹಾಗೂ ನಾಗರಿಕ ಸೌಲಭ್ಯಗಳ ವಿವರ, ಹೂಡಿಕೆ ಮಾದರಿ ಹಾಗೂ ಹಣಕಾಸಿನ ವ್ಯವಸ್ಥೆ, ಯೋಜನೆ ಜಾರಿಗೆ ಸಂಬಂಧಿಸಿದ ಹಂತವಾರು ಕಾರ್ಯಯೋಜನೆ ಇತ್ಯಾದಿ ಅಂಶಗಳನ್ನು ಒಳಗೊಂಡ ಸಮಗ್ರ ವರದಿ ಸಲ್ಲಿಸಬೇಕಿದೆ.
ಒಂದೆಡೆ ರೈತರ ಪ್ರತಿಭಟನೆ ಹಾಗೂ ರಾಜಕೀಯ ಜಟಾಪಟಿ ಮುಂದುವರಿದಿದ್ದರೂ, ಮತ್ತೊಂದೆಡೆ ಆಡಳಿತಾತ್ಮಕವಾಗಿ ಯೋಜನೆಗೆ ವೇಗ ನೀಡುವ ಉದ್ದೇಶದಿಂದ ಜಿಬಿಐಟಿ ಡಿಪಿಆರ್ ಪ್ರಕ್ರಿಯೆ ಆರಂಭಿಸಿರುವುದು ಮಹತ್ವದ ಬೆಳವಣಿಗೆಯಾಗಿದೆ.
ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಆಯ್ಕೆಯಾಗುವ ಸಲಹಾ ಸಂಸ್ಥೆ ಸಲ್ಲಿಸುವ ವರದಿಯ ಆಧಾರದ ಮೇಲೆ ಬಿಡದಿ ಟೌನ್ಶಿಪ್ನ ಅಂತಿಮ ವಿನ್ಯಾಸ ಹಾಗೂ ಅನುಷ್ಠಾನದ ದಿಕ್ಕು ಸ್ಪಷ್ಟವಾಗಲಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…