ರಾಜ್ಯ

ಗ್ರೇಟರ್ ಬೆಂಗಳೂರು ಚುನಾವಣೆಗೆ ತಯಾರಿ ; ಉಸ್ತುವಾರಿ ಸಮಿತಿ ರಚಿಸಿದ ಎಚ್‌ಡಿಕೆ

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವ ನೂತನ 5 ಪಾಲಿಕೆಗಳ ಚುನಾವಣೆಗಳ ವ್ಯಾಪ್ತಿಯಲ್ಲಿ ಪಕ್ಷದ ಬಲವರ್ಧನೆ ಹಾಗೂ ಸಂಘಟನೆ ದೃಷ್ಟಿಯಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಉಸ್ತುವಾರಿ ಸಮಿತಿ ರಚನೆ ಮಾಡಿದ್ದಾರೆ.

ಇತ್ತೀಚೆಗೆ ನಡೆದ ಪಕ್ಷದ ಶಾಸಕರ ಮತ್ತು ಕೋರ್ ಕಮಿಟಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಉಸ್ತುವಾರಿ ಸಮಿತಿಯನ್ನು ರಚಿಸಲಾಗಿದೆ

ಸಮಿತಿಯಲ್ಲಿ ಯಾರು ಯಾರು?:
ಬೆಂಗಳೂರು ಕೇಂದ್ರ, ಪಶ್ಚಿಮ, ದಕ್ಷಿಣ, ಪೂರ್ವ ಮತ್ತು ಉತ್ತರ ನಗರ ಪಾಲಿಕೆಗಳ ಉಸ್ತುವಾರಿಗಳನ್ನಾಗಿ ಅರಕಲಗೂಡು ಶಾಸಕ ಎ. ಮಂಜು, ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಟಿ.ಎನ್. ಜವರಾಯಿಗೌಡ, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಉಪ ಸ್ಪೀಕರ್ ಎಂ. ಕೃಷ್ಣಾರೆಡ್ಡಿ, ಕ್ಷೇತ್ರದ ಮಾಜಿ ಶಾಸಕರಾದ ಸುರೇಶ್‌ ಗೌಡ, ಎ. ಮಂಜುನಾಥ್, ಬೆಂಗಳೂರು ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್‌ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಎ. ತಿಪ್ಪೇಸ್ವಾಮಿ ಅವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷರು ಆದೇಶ ಹೊರಡಿಸಿದ್ದಾರೆ.

ಇದನ್ನು ಓದಿ: ಬಹಿರಂಗ ಚರ್ಚೆಗೆ ಬನ್ನಿ : ಎಚ್‌ಡಿಕೆಗೆ ಡಿಕೆಶಿ ಬಹಿರಂಗ ಸವಾಲು

ಉಸ್ತುವಾರಿ ಸಮಿತಿಯ ಜವಾಬ್ದಾರಿಗಳು:
ಹೊಸದಾಗಿ ರಚಿತವಾಗಿರುವ ನಗರ ಪಾಲಿಕೆಗಳಲ್ಲಿ ವಾರ್ಡ್ ವಾರು ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಮುಖಂಡರು, ಮಾಜಿ ನಗರ ಪಾಲಿಕೆ ಸದಸ್ಯರುಗಳು ಮತ್ತು ಹಿಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳನ್ನು ಒಳಗೊಂಡ ಉಸ್ತುವಾರಿ ಸಮಿತಿಗಳನ್ನು ರಚಿಸಿ, ಈ ಸಮಿತಿಗಳ ಕಾರ್ಯಗಳನ್ನು ಕಾಲಾನುಕಾಲಕ್ಕೆ ವಿಮರ್ಶಿಸುವುದು.

ಪಾಲಿಕೆವಾರು ಪಕ್ಷದ ಸದಸ್ಯತ್ವ ನೊಂದಣಿ ಅಭಿಯಾನ ಕಾರ್ಯಕ್ರಮ ರೂಪಿಸಿ, ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಸಭೆಗಳನ್ನು ವಾರ್ಡ್‌ಾರು ಮತ್ತು ವಿಧಾನಸಭಾ ಕ್ಷೇತ್ರವಾರು ಅಯೋಚಿಸುವುದು.

ಪಾಲಿಕೆಗಳಲ್ಲಿ ವಾರ್ಡ್ ವಾರು ಕಾರ್ಯಕರ್ತರ ಹಾಗೂ ಪ್ರಮುಖರ ಮುಖಂಡತ್ವವನ್ನು ಹಾಗೂ ಮುಂಬರುವ ನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಲಿಚ್ಛಿಸುವ ಆಕಾಂಕ್ಷಿಗಳ ಸಾಮರ್ಥ್ಯವನ್ನು ಆಧರಿಸಿ, ವಾರ್ಡ್‌ಾರು ಪಕ್ಷದ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿ ಪಕ್ಷದ ರಾಜ್ಯ ಕಚೇರಿಗೆ ಸಲ್ಲಿಸುವುದು.

ಮುಂಬರುವ ನಗರ ಪಾಲಿಕೆ ಚುನಾವಣೆಯಲ್ಲಿ ಎನ್.ಡಿ.ಎ. ಮೈತ್ರಿಕೂಟದ ಪಕ್ಷಗಳೊಂದಿಗೆ ಸಮನ್ವಯ ಮತ್ತು ಚುನಾವಣಾ ಹೊಂದಾಣಿಕೆ ಬಗ್ಗೆ ಸಮಿತಿಯು ರೂಪುರೇಷೆಗಳನ್ನು ರೂಪಿಸಿ ಕಾರ್ಯತಂತ್ರ ರೂಪಿಸಬೇಕು ಎಂದು ರಾಜ್ಯಾಧ್ಯಕ್ಷರು ಉಸ್ತುವಾರಿ ಸಮಿತಿ ಸದಸ್ಯರಿಗೆ ಸೂಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

18 seconds ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

19 mins ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

26 mins ago

ನಾಳೆ ಎಲ್ಲಾ ರಾಜ್ಯಗಳ ಸಿಎಂ ಜೊತೆಗೆ ಪ್ರಧಾನಿ ಮೋದಿ ಸಭೆ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ನಾಳೆ ಸಂಜೆ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ವಿಡಿಯೋ…

59 mins ago

ಶೌರ್ಯ ಪ್ರಶಸ್ತಿ ಪಡೆದವರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ: ಏನದು ಗೊತ್ತಾ.?

ನವದೆಹಲಿ: ಕೇಂದ್ರ ಸರ್ಕಾರವು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣವನ್ನು ಉಚಿತವಾಗಿ ನೀಡಲು…

1 hour ago

ರಷ್ಯಾದ 10 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಹೊತ್ತೊಯ್ಯುತ್ತಿದ್ದ ಟರ್ಕಿ ಚಾಲಿತ ಟ್ಯಾಂಕರ್‌ ಮೇಲೆ ದಾಳಿ

ಅಂಕಾರ: ಇಸ್ತಾನ್‌ಬುಲ್‌ ಬಳಿಯ ಕಪ್ಪು ಸಮುದ್ರದಲ್ಲಿ ಟರ್ಕಿ ನಿರ್ವಹಿಸುತ್ತಿದ್ದ ಕಚ್ಚಾ ತೈಲ ಟ್ಯಾಂಕರ್‌ ಹಡಗಿನ ಮೇಲೆ ದಾಳಿ ನಡೆದಿದೆ. ಕಪ್ಪು…

2 hours ago