ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವ ನೂತನ 5 ಪಾಲಿಕೆಗಳ ಚುನಾವಣೆಗಳ ವ್ಯಾಪ್ತಿಯಲ್ಲಿ ಪಕ್ಷದ ಬಲವರ್ಧನೆ ಹಾಗೂ ಸಂಘಟನೆ ದೃಷ್ಟಿಯಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಉಸ್ತುವಾರಿ ಸಮಿತಿ ರಚನೆ ಮಾಡಿದ್ದಾರೆ.
ಇತ್ತೀಚೆಗೆ ನಡೆದ ಪಕ್ಷದ ಶಾಸಕರ ಮತ್ತು ಕೋರ್ ಕಮಿಟಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಉಸ್ತುವಾರಿ ಸಮಿತಿಯನ್ನು ರಚಿಸಲಾಗಿದೆ
ಸಮಿತಿಯಲ್ಲಿ ಯಾರು ಯಾರು?:
ಬೆಂಗಳೂರು ಕೇಂದ್ರ, ಪಶ್ಚಿಮ, ದಕ್ಷಿಣ, ಪೂರ್ವ ಮತ್ತು ಉತ್ತರ ನಗರ ಪಾಲಿಕೆಗಳ ಉಸ್ತುವಾರಿಗಳನ್ನಾಗಿ ಅರಕಲಗೂಡು ಶಾಸಕ ಎ. ಮಂಜು, ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಟಿ.ಎನ್. ಜವರಾಯಿಗೌಡ, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಉಪ ಸ್ಪೀಕರ್ ಎಂ. ಕೃಷ್ಣಾರೆಡ್ಡಿ, ಕ್ಷೇತ್ರದ ಮಾಜಿ ಶಾಸಕರಾದ ಸುರೇಶ್ ಗೌಡ, ಎ. ಮಂಜುನಾಥ್, ಬೆಂಗಳೂರು ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಎ. ತಿಪ್ಪೇಸ್ವಾಮಿ ಅವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷರು ಆದೇಶ ಹೊರಡಿಸಿದ್ದಾರೆ.
ಇದನ್ನು ಓದಿ: ಬಹಿರಂಗ ಚರ್ಚೆಗೆ ಬನ್ನಿ : ಎಚ್ಡಿಕೆಗೆ ಡಿಕೆಶಿ ಬಹಿರಂಗ ಸವಾಲು
ಉಸ್ತುವಾರಿ ಸಮಿತಿಯ ಜವಾಬ್ದಾರಿಗಳು:
ಹೊಸದಾಗಿ ರಚಿತವಾಗಿರುವ ನಗರ ಪಾಲಿಕೆಗಳಲ್ಲಿ ವಾರ್ಡ್ ವಾರು ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಮುಖಂಡರು, ಮಾಜಿ ನಗರ ಪಾಲಿಕೆ ಸದಸ್ಯರುಗಳು ಮತ್ತು ಹಿಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳನ್ನು ಒಳಗೊಂಡ ಉಸ್ತುವಾರಿ ಸಮಿತಿಗಳನ್ನು ರಚಿಸಿ, ಈ ಸಮಿತಿಗಳ ಕಾರ್ಯಗಳನ್ನು ಕಾಲಾನುಕಾಲಕ್ಕೆ ವಿಮರ್ಶಿಸುವುದು.
ಪಾಲಿಕೆವಾರು ಪಕ್ಷದ ಸದಸ್ಯತ್ವ ನೊಂದಣಿ ಅಭಿಯಾನ ಕಾರ್ಯಕ್ರಮ ರೂಪಿಸಿ, ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಸಭೆಗಳನ್ನು ವಾರ್ಡ್ಾರು ಮತ್ತು ವಿಧಾನಸಭಾ ಕ್ಷೇತ್ರವಾರು ಅಯೋಚಿಸುವುದು.
ಪಾಲಿಕೆಗಳಲ್ಲಿ ವಾರ್ಡ್ ವಾರು ಕಾರ್ಯಕರ್ತರ ಹಾಗೂ ಪ್ರಮುಖರ ಮುಖಂಡತ್ವವನ್ನು ಹಾಗೂ ಮುಂಬರುವ ನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಲಿಚ್ಛಿಸುವ ಆಕಾಂಕ್ಷಿಗಳ ಸಾಮರ್ಥ್ಯವನ್ನು ಆಧರಿಸಿ, ವಾರ್ಡ್ಾರು ಪಕ್ಷದ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿ ಪಕ್ಷದ ರಾಜ್ಯ ಕಚೇರಿಗೆ ಸಲ್ಲಿಸುವುದು.
ಮುಂಬರುವ ನಗರ ಪಾಲಿಕೆ ಚುನಾವಣೆಯಲ್ಲಿ ಎನ್.ಡಿ.ಎ. ಮೈತ್ರಿಕೂಟದ ಪಕ್ಷಗಳೊಂದಿಗೆ ಸಮನ್ವಯ ಮತ್ತು ಚುನಾವಣಾ ಹೊಂದಾಣಿಕೆ ಬಗ್ಗೆ ಸಮಿತಿಯು ರೂಪುರೇಷೆಗಳನ್ನು ರೂಪಿಸಿ ಕಾರ್ಯತಂತ್ರ ರೂಪಿಸಬೇಕು ಎಂದು ರಾಜ್ಯಾಧ್ಯಕ್ಷರು ಉಸ್ತುವಾರಿ ಸಮಿತಿ ಸದಸ್ಯರಿಗೆ ಸೂಚಿಸಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…