ಬೆಂಗಳೂರು : ಜಾತ್ಯತೀತ ಜನತಾದಳ ಉದಯಿಸಿ 25 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪಕ್ಷದ ವತಿಯಿಂದ ಬೆಳ್ಳಿಹಬ್ಬ ಆಚರಿಸಲು ನಿರ್ಧರಿಸಲಾಗಿದೆ.
ರಜತ ಮಹೋತ್ಸವ ಆಚರಣೆಯ ಸಿದ್ಧತೆ ಕುರಿತಂತೆ ಜೆ.ಪಿ.ಭವನದಲ್ಲಿ ಜಾ.ದಳ ರಾಜ್ಯಾಧ್ಯಕ್ಷರಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಸಭೆ ನಡೆಸಲಾಯಿತು. ಬೆಳ್ಳಿಹಬ್ಬ ಆಚರಣೆಯ ರೂಪುರೇಷೆಯ ಬಗ್ಗೆ ಸಲಹೆ, ಸೂಚನೆ ಪಡೆದ ಕುಮಾರಸ್ವಾಮಿ ಅವರು, ರಾಜ್ಯದೆಲ್ಲೆಡೆ ಆಚರಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲು ನಿರ್ದೇಶನ ನೀಡಿದ್ದಾರೆ.
ಅಲ್ಲದೆ, ನವೆಂಬರ್ 22 ರಂದು ನಗರದಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಹಾಗೂ ರಾಷ್ಟ್ರೀಯ ಸಮಾವೇಶವನ್ನು ನಡೆಸಲು ನಿರ್ಧರಿಸಲಾಯಿತು. ಈ ಸಮಾವೇಶಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ತೀರ್ಮಾನಿಸಲಾಯಿತು. ಬೆಳ್ಳಿ ಹಬ್ಬ ಹಾಗೂ ರಾಷ್ಟ್ರೀಯ ಕಾರ್ಯಕಾರಿಣಿ ಮತ್ತು ರಾಷ್ಟ್ರೀಯ ಸಮಾವೇಶಕ್ಕೆ ಸಂಬಂಧಿಸಿದಂತೆ ಪಕ್ಷದ ಮುಖಂಡರಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ.
ಇದನ್ನು ಓದಿ: ಜಿಟಿಡಿಗೆ ಶಾಕ್ : ಜೆಡಿಎಸ್ ಕೋಟ್ ಕಮಿಟಿಯಿಂದ ಜಿ.ಟಿ ದೇವೇಗೌಡ ಔಟ್
ಜೊತೆಗೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಸಮಾಲೋಚನೆ ನಡೆಸಲಾಗಿದ್ದು, ಪಕ್ಷ ಸಂಘಟನೆ ಚುರುಕುಗೊಳಿಸುವುದು, ಜನಪರ ಹೋರಾಟಗಳನ್ನು ಹಮ್ಮಿಕೊಳ್ಳುವುದು, ಮುಂಬರುವ ನಗರ ಸ್ಥಳೀಯ ಸಂಸ್ಥೆಗಳು, ಜಿಬಿಎ ವ್ಯಾಪ್ತಿಯ ನಗರ ಪಾಲಿಕೆಗಳು, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಗಳಿಗೆ ಸಿದ್ಧತೆ ಮಾಡಿಕೊಳ್ಳಲು ಪಕ್ಷದ ಮುಖಂಡರಿಗೆ ಸೂಚಿಸಲಾಯಿತು ಎಂದು ಜಾ.ದಳ ಮೂಲಗಳು ತಿಳಿಸಿವೆ.
ಸಂಸದ ಮಲ್ಲೇಶ್ ಬಾಬು, ಶಾಸಕರಾದ ಸಿ.ಬಿ.ಸುರೇಶ್ ಬಾಬು, ಎ.ಮಂಜು, ಸಿ.ಎನ್.ಬಾಲಕೃಷ್ಣ, ಸ್ವರೂಪ್ ಪ್ರಕಾಶ್, ಜಿ.ಡಿ. ಹರೀಶ್ಗೌಡ, ಮಾಜಿ ಶಾಸಕರಾದ ವೆಂಕಟರಾವ್ ನಾಡಗೌಡ, ಎಚ್.ಕೆ. ಕುಮಾರಸ್ವಾಮಿ, ಸುರೇಶಗೌಡ, ವಿಧಾನಪರಿಷತ್ ಸದಸ್ಯರಾದ ಟಿ.ಎ.ಶರವಣ, ಸಿ.ಎನ್.ಮಂಜೇಗೌಡ, ಗೋವಿಂದರಾಜು, ವಿಧಾನ ಪರಿಷತ್ ಮಾಜಿ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಹೆಚ್.ಎಂ.ರಮೇಶಗೌಡ, ಕೆ.ಟಿ. ಶ್ರೀಕಂಠೇಗೌಡ, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ರಶ್ಮೀ ರಾಮೇಗೌಡ ಸೇರಿದಂತೆ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, ರಾಜ್ಯ ಪದಾಽಕಾರಿಗಳು, ವಕ್ತಾರರು, ಜಿಲ್ಲಾಧ್ಯಕ್ಷರು ಹಾಗೂ 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಽಸಿದ್ದ ಪಕ್ಷದ ಅಭ್ಯರ್ಥಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…