ರಾಜ್ಯ

ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯಕ್ಕೆ ಸಿದ್ದತೆ : ಗ್ರಾ.ಪಂʼಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಬೆಂಗಳೂರು : ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ʼಗ್ರಾಮಾಭಿವೃದ್ಧಿಯ ಹೊಸ ಹಾದಿ-ಯುಕ್ತಧಾರ ಮಾರ್ಗಸೂಚಿಗಳನ್ನು ಅನುಸರಿಸಿ 2026-27ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ಸಂಬಂಧ ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೆ ಮಾರ್ಗದರ್ಶನ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅಕುಶಲ ಕೆಲಸಕ್ಕೆ ಬೇಡಿಕೆ ಸಲ್ಲಿಸುವ ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ವರ್ಷದಲ್ಲಿ 100 ದಿನಗಳ ಅಕುಶಲ ಕೆಲಸ ಖಾತ್ರಿ ಪಡಿಸುತ್ತದೆ.

ಕೂಲಿಕಾರರಿಗೆ ಸಕಾಲದಲ್ಲಿ ಅಕುಶಲ ಕೆಲಸ ಒದಗಿಸುವುದರೊಂದಿಗೆ ಬಹುಬಾಳಿಕೆ ಆಸ್ತಿಗಳನ್ನು ಸೃಜಿಸಲಾಗುತ್ತದೆ. ಹೀಗೆ ಸೃಜಿಸುವ ಆಸ್ತಿಗಳನ್ನು ಪ್ರತಿ ವರ್ಷ ಅಕ್ಟೋಬರ್‌ ಮಾಹೆಯಿಂದ ನವೆಂಬರ್‌ ಮಾಹೆವರೆಗೆ ಎಲ್ಲಾ ಗ್ರಾಮಪಂಚಾಯಿತಿಗಳಲ್ಲಿ ಕಾರ್ಮಿಕ ಆಯವ್ಯಯವನ್ನು ಸಿದ್ಧಪಡಿಸಲಾಗುತ್ತಿತ್ತು. ಈ ಬಾರಿ 2026-27ನೆ ಆರ್ಥಿಕ ಸಾಲಿನ ಕಾರ್ಮಿಕ ಆಯವ್ಯಯವನ್ನು ವೈಜ್ಞಾನಿಕವಾಗಿ ಸಿದ್ದಪಡಿಸಲು ʼಯುಕ್ತಧಾರʼ ತಂತ್ರಾಂಶವನ್ನು ಜಾರಿಗೊಳಿಸಲಾಗಿದೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ.

ಪರೀಕ್ಷಾರ್ಥ ತಾಲ್ಲೂಕಿಗೊಂದು ಗ್ರಾಮ ಪಂಚಾಯತಿಯಲ್ಲಿ ಈಗಾಗಲೆ ತಂತ್ರಾಂಶದಡಿ ಆಯವ್ಯಯವನ್ನು ಸಿದ್ದಪಡಿಸಲಾಗಿತ್ತು, ಕಾರ್ಮಿಕ ಆಯವ್ಯಯವನ್ನು ಸಿದ್ದಪಡಿಸಲು ಎಲ್ಲಾ ಗ್ರಾಮಪಂಚಾಯಿತಿಗಳಿಗೂ ಈ ತಂತ್ರಾಂಶ ಸೌಲಭ್ಯವನ್ನು ವಿಸ್ತರಿಸಲಾಗಿದ್ದು ಈ ತಂತ್ರಾಂಶದ ಮೂಲಕವೇ ಮುಂದಿನ ಆಯವ್ಯಯ ಸಿದ್ದಪಡಿಸಬೇಕಿದೆ ಎಂದು ತಿಳಿಸಿರುವ ಸಚಿವರು ಈಗಾಗಲೇ ಅನುಷ್ಠಾನ ಅಧಿಕಾರಿಗಳಿಗೆ ತಾಂತ್ರಿಕ ತರಬೇತಿ ನೀಡಲಾಗಿದೆ. ಮಹಾತ್ಮಗಾಂಧಿ ನರೇಗಾ ಯೋಜನೆಯ 2026-27ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ಉದ್ದೇಶದಿಂದ “ಯುಕ್ತಧಾರ” ಮೂಲಕ ಸಿದ್ದಪಡಿಸಲಾದ ಕಾರ್ಮಿಕ ಆಯವ್ಯಯವನ್ನು ಗ್ರಾಮ ಸಭೆಯಲ್ಲಿ ಸಿದ್ಧಪಡಿಸಲು ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆ ಎಂದೂ ಸಚಿವರು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಕ್ಕಳ ಜೊತೆ ಫುಟ್‌ಬಾಲ್‌ ಆಡಿ ಸಂಭ್ರಮಿಸಿದ ಪ್ರಧಾನಿ ನರೇಂದ್ರ ಮೋದಿ

ಗ್ಯಾಂಗ್ಟಕ್:‌ ಪ್ರಧಾನಿ ನರೇಂದ್ರ ಮೋದಿ ಅವರಿಂದು ಸಿಕ್ಕಿಂನ ಗ್ಯಾಂಗ್ಟಕ್‌ನಲ್ಲಿ ಮಕ್ಕಳೊಂದಿಗೆ ಫುಟ್‌ಬಾಲ್‌ ಆಡಿ ಸಂಭ್ರಮಿಸಿದರು. ಗ್ಯಾಂಗ್ಟಕ್‌ನಲ್ಲಿ ಮುಂಜಾನೆ ವೇಳೆ ಪ್ರಧಾನಿ…

7 mins ago

ಪ್ಯಾಸೆಂಜರ್‌ ಆಟೋದಲ್ಲಿ ಗಾಂಜಾ ಸೊಪ್ಪು ಸಾಗಾಟ: ಆರೋಪಿ ಬಂಧನ

ಮೈಸೂರು: ಪ್ಯಾಸೆಂಜರ್‌ ಆಟೋದಲ್ಲಿ ಗಾಂಜಾ ಸೊಪ್ಪನ್ನು ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಇಲವಾಲ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ಯಾಸೆಂಜರ್‌ ಆಟೋದಲ್ಲಿ ಮೈಸೂರಿನಿಂದ…

37 mins ago

ಪದತ್ಯಾಗಕ್ಕೂ ಸಿದ್ಧರಿದ್ದಾರೆ ಸಿದ್ದರಾಮಯ್ಯ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಅಧಿಕಾರಿ ಮುಂದುವರಿಸಲು ಹಾಗೂ ಪದತ್ಯಾಗ ಮಾಡಲು ಸಿದ್ದರಾಮಯ್ಯನವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎನ್ನವುದು…

53 mins ago

ಇಂಡೋನೇಷ್ಯಾದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ: 7 ಮಂದಿ ಸಾವು

ಜಕಾರ್ತ: ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81…

1 hour ago

ಓದುಗರ ಪತ್ರ: ರೈತರಿಗೆ ವಿಮಾ ಕಂಪೆನಿಗಳಿಂದಾಗುವ ವಂಚನೆ ತಪ್ಪಿಸಿ

ವಿಮಾ ಕಂಪೆನಿಗಳು ರೈತರ ಬೆಳೆನಷ್ಟ ಪರಿಹಾರದಲ್ಲಿ ವಂಚನೆ ಮಾಡುತ್ತಿವೆ. ಶೇ.೮೦ರಷ್ಟು ರೈತರು ವಿಮೆಯ ಕಂತು ಪಾವತಿಸಿದರೂ, ಬೆಳೆ ನಷ್ಟಕ್ಕೆ ಒಳಗಾದ…

3 hours ago

ಓದುಗರ ಪತ್ರ: ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿ

ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ.…

3 hours ago