ರಾಜ್ಯ

ಜಲಾಂತರಗಾಮಿ ನೌಕೆಯಲ್ಲಿ ಪ್ರಯಾಣಿಸಿ ಹೊಸ ದಾಖಲೆ ಬರೆದ ರಾಷ್ಟ್ರಪತಿ ದ್ರೌಪದಿ ಮುರ್ಮು

ಕಾರವಾರ: ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದ ಮುರ್ಮು ಅವರು ಇಂದು ಜಲಾಂತರಗಾಮಿ ನೌಕೆಯಲ್ಲಿ ಪ್ರಯಾಣಿಸುವ ಮೂಲಕ ಹೊಸ ದಾಖಲೆ ಬರೆದರು.

ಈ ಹಿಂದೆ ದಿ. ಎಪಿಜೆ ಅಬ್ದುಲ್ ಕಲಾಂ ಅವರು ಜಲಂತರ್ಗಾಮಿ ನೌಕೆಯಲ್ಲಿ ಪ್ರಯಾಣಿಸಿದ ಮೊಟ್ಟ ಮೊದಲ ರಾಷ್ಟ್ರಪತಿಯಾಗಿದ್ದರು. ನಂತರ ದ್ರೌಪದಿ ಮುರ್ಮು ಅವರು ಕಾರವಾರದ ನೌಕಾ ನೆಲೆಯಲ್ಲಿ ಕೆಲ ಹೊತ್ತು ಪಯಣಿಸುವ ಮೂಲಕ ಜಲಾಂತರಗಾಮಿ ನೌಕೆಯಲ್ಲಿ ಪ್ರಯಾಣಿಸಿದ 2ನೇ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಸುಮಾರು ಹೊತ್ತು ಜಲಂತರಗಾಮಿ ನೌಕೆಯಲ್ಲಿ ಪ್ರಯಾಣಿಸಿದ ಅವರಿಗೆ ಕದಂಬ ನೌಕಾ ನೆಲೆಯ ಹಿರಿಯ ಅಧಿಕಾರಿಗಳು ಸಾಥ್ ನೀಡಿದರು.

ಈ ವೇಳೆ ಅವರು ನೌಕಾಪಡೆಯ ಕಾರ್ಯಕ್ಷಮತೆಯನ್ನು ವೀಕ್ಷಿಸಿದರು. ಅಲ್ಲದೆ ಅಧಿಕಾರಿಗಳಿಂದ ಅದರ ಬಗ್ಗೆ ಮಾಹಿತಿಗಳನ್ನು ಪಡೆದುಕೊಂಡರು. ಜಲಾಂತರಗಾಮಿ, ಭದ್ರತೆ, ಕಾರ್ಯಾಚರಣೆ ವ್ಯವಸ್ಥೆ ಬಗ್ಗೆಯೂ ಮರ್ಮು ಅವರು ನೌಕಾಪಡೆಯ ಮುಖ್ಯಸ್ಥರಿಂದ ವಿಷಯ ವಿನಿಮಯ ಮಾಡಿಕೊಂಡರು.

ಜಲಾಂತರಗಾಮಿ ನೌಕೆಯಲ್ಲಿ ಪ್ರಯಾಣಿಸುವ ಮೊದಲು ರಾಷ್ಟ್ರಪತಿ ಮುರ್ಮು ಅವರು ಕದಂಬ ನೌಕಾ ನೆಲೆಯಲ್ಲಿ ದೇಶದ ಮೊದಲ ಸ್ವದೇಶಿ ವಿಮಾನ ಯುದ್ಧ ನೌಕೆ ಐಎನ್‍ಎಸ್ ವಿಕ್ರಾಂತ್‍ಗೆ ಭೇಟಿ ನೀಡಿ ವೀಕ್ಷಣೆ ಮಾಡಿದರು.

ಯುದ್ಧ ನೌಕೆಯ ತಂತ್ರಜ್ಞಾನ, ಕಾರ್ಯಶೈಲಿ, ವಾಯುಪಡೆ, ನೌಕಾಪಡೆ, ಸಂಯುಕ್ತ ಕಾರ್ಯಾಚರಣೆ, ತುರ್ತು ಸಂದರ್ಭಗಳಲ್ಲಿ ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ ಎದುರಾಳಿಗಳನ್ನು ಎದುರಿಸುವುದು ಸೇರಿದಂತೆ ಸಿಬ್ಬಂದಿಯ ಜೊತೆಗೆ ಮಾಹಿತಿ ವಿನಿಮಯ ಮಾಡಿಕೊಂಡರು.

ರಾಷ್ಟ್ರಪತಿಗಳ ಭೇಟಿ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಆಂಕೋಲಾದವರೆಗೆ ಮೀನುಗಾರಿಕೆ ಚಟುವಟಿಕೆಗೆ ಜಿಲ್ಲಾಡಳಿತ ನಿಷೇಧ ಹೇರಿತ್ತು. ಬೆಳಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸುತ್ತಮುತ್ತಲ ಪ್ರದೇಶಗಳಲ್ಲಿ ಒಂದು ದಿನದ ಮಟ್ಟಿಗೆ ಮೀನುಗಾರಿಕೆಯನ್ನು ನಡೆಸದಂತೆ ಸೂಚನೆ ನೀಡಲಾಗಿತ್ತು. ಮಾಜಾಳಿಯಿಂದ ಕಾರವಾರದವರೆಗೆ ಶನಿವಾರ ರಾತ್ರಿಯಿಂದಲೇ ಒಂದೇ ಒಂದು ದೋಣಿಯೂ ಸಮುದ್ರಕ್ಕೆ ಇಳಿಯದಂತೆ ನಿರ್ಬಂಧ ಹಾಕಲಾಗಿತ್ತು.

ರಾಷ್ಟ್ರಪತಿಗಳ ಆಗಮನದ ಹಿನ್ನೆಲೆಯಲ್ಲಿ ಕದಂಬ ನೌಕಾ ನೆಲೆಯ ಸುತ್ತಮುತ್ತ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಹೈ ಅಲರ್ಟ್ ಘೋಷಿಸಲಾಗಿತ್ತು. ವಿಮಾನ ಮತ್ತು ಹೆಲಿಕಾಪ್ಟರ್ ಹಾರಾಟವನ್ನೂ ಸಹ ನಿಷೇಧಿಸಲಾಗಿತ್ತು. ಸಾರ್ವಜನಿಕರಿಗೂ ನಿರ್ಬಂಧ ವಿಧಿಸಲಾಗಿತ್ತು.

ಇದಕ್ಕೂ ಮುನ್ನ ಗೋವಾ ರಾಜಧಾನಿ ಪಣಜಿಯಿಂದ ಭಾರತೀಯ ವಾಯುಪಡೆಗೆ ಸೇರಿದ ವಿಶೇಷ ಹೆಲಿಕಾಪ್ಟರ್‌ನಲ್ಲಿ ಕದಂಬ ನೌಕೆ ನೆಲೆಗೆ ಆಗಮಿಸಿದ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಕಾರವಾರ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ, ನೌಕಾಪಡೆಯ ಸಿಬ್ಬಂದಿಗಳು ಹಾಗೂ ಜಿಲ್ಲಾಡಳಿತ ಆತ್ಮೀಯವಾಗಿ ಬರಮಾಡಿಕೊಂಡರು.

ಆಂದೋಲನ ಡೆಸ್ಕ್

Recent Posts

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

2 mins ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

10 mins ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

35 mins ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

51 mins ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

53 mins ago

ಭದ್ರತಾ ಪಡೆ-ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ: ಇಬ್ಬರು ನಕ್ಸಲರು ಹತ್ಯೆ

ಛತ್ತೀಸ್‌ಗಢ: ಇಲ್ಲಿನ ಬಿಜಾಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಇಬ್ಬರು ನಕ್ಸಲರು ಹತರಾಗಿದ್ದಾರೆ.…

1 hour ago