ಬೆಂಗಳೂರು: ಸಿಎಂ ಸಿದ್ದರಾಮಯ್ಯ ಆಪ್ತ ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಬಹಿರಂಗವಾಗಿಯೇ ಹೇಳಿಕೆ ನೀಡಿದ ಬೆನ್ನಲ್ಲೇ ಈಗ ಗೃಹ ಸಚಿವ ಪರಮೇಶ್ವರ್ ಕೂಡ ಒಂದು ಹುದ್ದೆಯ ಪರ ಧ್ವನಿ ಎತ್ತಿದ್ದಾರೆ.
ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕಾಂಗ್ರೆಸ್ನ ಒಳಜಗಳ ಶಮನ ಮಾಡಲು ರಾಜ್ಯದ ನಾಯಕರಿಗೆ ವಾರ್ನ್ ಮಾಡಿದ್ದರು. ಆದರೆ ಸುರ್ಜೇವಾಲಾ ಅವರ ವಾರ್ನ್ಗೆ ಯಾವುದೇ ಸಚಿವರು ತಲೆಕೆಡಿಸಿಕೊಂಡಿಲ್ಲ. ಹೀಗಾಗಿ ಕಾಂಗ್ರೆಸ್ನಲ್ಲಿ ಅಧಿಕಾರ ದಾಹ ದಿನದಿಂದ ದಿನಕ್ಕೆ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ.
ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಬಳಿ ಎರಡು ದೊಡ್ಡ ಖಾತೆಯಿದೆ. ರಾಜ್ಯದಲ್ಲಿ ಪಕ್ಷ ಕಟ್ಟುವ ಹೊಣೆಯೂ ಅವರ ಮೇಲಿದೆ. ಹಾಗಾಗಿ ಒಂದು ಹುದ್ದೆ ಬಿಟ್ಟರೆ ಒಳ್ಳೆಯದು ಎಂದು ಹೇಳುವ ಮೂಲಕ ಒಂದು ಹುದ್ದೆಯ ಪರ ಬ್ಯಾಟ್ ಬೀಸಿದ್ದಾರೆ.
ಅಂದು ನನಗೂ ಮಂತ್ರಿ ಅಥವಾ ಅಧ್ಯಕ್ಷ ಸ್ಥಾನದ ಪೈಕಿ ಒಂದು ಹುದ್ದೆಗೆ ಅವಕಾಶ ನೀಡಿದ್ದರು. ನಾನು ಅಧ್ಯಕ್ಷ ಸ್ಥಾನ ಆಯ್ಕೆ ಮಾಡಿದ್ದೆ. ಡಿಕೆ ಶಿವಕುಮಾರ್ ಈಗ ಡಿಸಿಎಂ ಹಾಗೂ ಅಧ್ಯಕ್ಷರಾಗಿದ್ದಾರೆ. ಪಕ್ಷ ಸಂಘಟಿಸುವ ದೊಡ್ಡ ಜವಬ್ದಾರಿಯೂ ಸಹ ಇದೆ. ಹೈಕಮಾಂಡ್ನವರು ಏನು ತೀರ್ಮಾನ ಮಾಡುತ್ತಾರೋ ನೋಡೋಣ ಎಂದರು.
ಎರಡು ಹುದ್ದೆಯಲ್ಲಿರುವ ಕಾರಣ ಸಹಜವಾಗಿ ಅಧ್ಯಕ್ಷ ಸ್ಥಾನ ಬದಲಾಯಿಸಿ ಎಂದು ಬೇರೆಯವರು ಎಂದು ಹೇಳುತ್ತಾರೆ. ನನಗೂ ಈಗೆ ಹೇಳಿದ್ದರು. ನಾವು ಒಂದು ಸಮುದಾಯ ಸೇರಿ ಸಭೆ ಮಾಡುತ್ತೇವೆ ಎನ್ನುವುದನ್ನು ಹೈಕಮಾಂಡ್ ಗಮನಿಸಿದೆ. ಹಾಗೆಯೇ ಪಕ್ಷ ಸಂಘಟನೆ ಆಗುತ್ತಿದೆಯೋ ಅಥವಾ ಇಲ್ಲವೋ ಎಂಬುದನ್ನು ಹೈಕಮಾಂಡ್ ನಾಯಕರು ಗಮನಿಸುತ್ತಾರೆ ಎಂದು ಹೇಳಿದರು.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…