ರಾಜ್ಯ

ಕಾಂಗ್ರೆಸ್‌ನಲ್ಲಿ ನಿಲ್ಲದ ಅಧ್ಯಕ್ಷ ಪಟ್ಟ ಫೈಟ್:‌ ಒಂದು ಹುದ್ದೆ ಪರ ಧ್ವನಿ ಎತ್ತಿದ ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಆಪ್ತ ಸಚಿವ ಸತೀಶ್‌ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಬಹಿರಂಗವಾಗಿಯೇ ಹೇಳಿಕೆ ನೀಡಿದ ಬೆನ್ನಲ್ಲೇ ಈಗ ಗೃಹ ಸಚಿವ ಪರಮೇಶ್ವರ್‌ ಕೂಡ ಒಂದು ಹುದ್ದೆಯ ಪರ ಧ್ವನಿ ಎತ್ತಿದ್ದಾರೆ.

ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಕಾಂಗ್ರೆಸ್‌ನ ಒಳಜಗಳ ಶಮನ ಮಾಡಲು ರಾಜ್ಯದ ನಾಯಕರಿಗೆ ವಾರ್ನ್‌ ಮಾಡಿದ್ದರು. ಆದರೆ ಸುರ್ಜೇವಾಲಾ ಅವರ ವಾರ್ನ್‌ಗೆ ಯಾವುದೇ ಸಚಿವರು ತಲೆಕೆಡಿಸಿಕೊಂಡಿಲ್ಲ. ಹೀಗಾಗಿ ಕಾಂಗ್ರೆಸ್‌ನಲ್ಲಿ ಅಧಿಕಾರ ದಾಹ ದಿನದಿಂದ ದಿನಕ್ಕೆ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ.

ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್‌ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಬಳಿ ಎರಡು ದೊಡ್ಡ ಖಾತೆಯಿದೆ. ರಾಜ್ಯದಲ್ಲಿ ಪಕ್ಷ ಕಟ್ಟುವ ಹೊಣೆಯೂ ಅವರ ಮೇಲಿದೆ. ಹಾಗಾಗಿ ಒಂದು ಹುದ್ದೆ ಬಿಟ್ಟರೆ ಒಳ್ಳೆಯದು ಎಂದು ಹೇಳುವ ಮೂಲಕ ಒಂದು ಹುದ್ದೆಯ ಪರ ಬ್ಯಾಟ್‌ ಬೀಸಿದ್ದಾರೆ.

ಅಂದು ನನಗೂ ಮಂತ್ರಿ ಅಥವಾ ಅಧ್ಯಕ್ಷ ಸ್ಥಾನದ ಪೈಕಿ ಒಂದು ಹುದ್ದೆಗೆ ಅವಕಾಶ ನೀಡಿದ್ದರು. ನಾನು ಅಧ್ಯಕ್ಷ ಸ್ಥಾನ ಆಯ್ಕೆ ಮಾಡಿದ್ದೆ. ಡಿಕೆ ಶಿವಕುಮಾರ್‌ ಈಗ ಡಿಸಿಎಂ ಹಾಗೂ ಅಧ್ಯಕ್ಷರಾಗಿದ್ದಾರೆ. ಪಕ್ಷ ಸಂಘಟಿಸುವ ದೊಡ್ಡ ಜವಬ್ದಾರಿಯೂ ಸಹ ಇದೆ. ಹೈಕಮಾಂಡ್‌ನವರು ಏನು ತೀರ್ಮಾನ ಮಾಡುತ್ತಾರೋ ನೋಡೋಣ ಎಂದರು.

ಎರಡು ಹುದ್ದೆಯಲ್ಲಿರುವ ಕಾರಣ ಸಹಜವಾಗಿ ಅಧ್ಯಕ್ಷ ಸ್ಥಾನ ಬದಲಾಯಿಸಿ ಎಂದು ಬೇರೆಯವರು ಎಂದು ಹೇಳುತ್ತಾರೆ. ನನಗೂ ಈಗೆ ಹೇಳಿದ್ದರು. ನಾವು ಒಂದು ಸಮುದಾಯ ಸೇರಿ ಸಭೆ ಮಾಡುತ್ತೇವೆ ಎನ್ನುವುದನ್ನು ಹೈಕಮಾಂಡ್‌ ಗಮನಿಸಿದೆ. ಹಾಗೆಯೇ ಪಕ್ಷ ಸಂಘಟನೆ ಆಗುತ್ತಿದೆಯೋ ಅಥವಾ ಇಲ್ಲವೋ ಎಂಬುದನ್ನು ಹೈಕಮಾಂಡ್‌ ನಾಯಕರು ಗಮನಿಸುತ್ತಾರೆ ಎಂದು ಹೇಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

4 hours ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

4 hours ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

5 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

6 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

6 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

6 hours ago