ರಾಜ್ಯ

ಕಾಂಗ್ರೆಸ್‌ನಲ್ಲಿ ನಿಲ್ಲದ ಅಧ್ಯಕ್ಷ ಪಟ್ಟ ಫೈಟ್:‌ ಒಂದು ಹುದ್ದೆ ಪರ ಧ್ವನಿ ಎತ್ತಿದ ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಆಪ್ತ ಸಚಿವ ಸತೀಶ್‌ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಬಹಿರಂಗವಾಗಿಯೇ ಹೇಳಿಕೆ ನೀಡಿದ ಬೆನ್ನಲ್ಲೇ ಈಗ ಗೃಹ ಸಚಿವ ಪರಮೇಶ್ವರ್‌ ಕೂಡ ಒಂದು ಹುದ್ದೆಯ ಪರ ಧ್ವನಿ ಎತ್ತಿದ್ದಾರೆ.

ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಕಾಂಗ್ರೆಸ್‌ನ ಒಳಜಗಳ ಶಮನ ಮಾಡಲು ರಾಜ್ಯದ ನಾಯಕರಿಗೆ ವಾರ್ನ್‌ ಮಾಡಿದ್ದರು. ಆದರೆ ಸುರ್ಜೇವಾಲಾ ಅವರ ವಾರ್ನ್‌ಗೆ ಯಾವುದೇ ಸಚಿವರು ತಲೆಕೆಡಿಸಿಕೊಂಡಿಲ್ಲ. ಹೀಗಾಗಿ ಕಾಂಗ್ರೆಸ್‌ನಲ್ಲಿ ಅಧಿಕಾರ ದಾಹ ದಿನದಿಂದ ದಿನಕ್ಕೆ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ.

ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್‌ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಬಳಿ ಎರಡು ದೊಡ್ಡ ಖಾತೆಯಿದೆ. ರಾಜ್ಯದಲ್ಲಿ ಪಕ್ಷ ಕಟ್ಟುವ ಹೊಣೆಯೂ ಅವರ ಮೇಲಿದೆ. ಹಾಗಾಗಿ ಒಂದು ಹುದ್ದೆ ಬಿಟ್ಟರೆ ಒಳ್ಳೆಯದು ಎಂದು ಹೇಳುವ ಮೂಲಕ ಒಂದು ಹುದ್ದೆಯ ಪರ ಬ್ಯಾಟ್‌ ಬೀಸಿದ್ದಾರೆ.

ಅಂದು ನನಗೂ ಮಂತ್ರಿ ಅಥವಾ ಅಧ್ಯಕ್ಷ ಸ್ಥಾನದ ಪೈಕಿ ಒಂದು ಹುದ್ದೆಗೆ ಅವಕಾಶ ನೀಡಿದ್ದರು. ನಾನು ಅಧ್ಯಕ್ಷ ಸ್ಥಾನ ಆಯ್ಕೆ ಮಾಡಿದ್ದೆ. ಡಿಕೆ ಶಿವಕುಮಾರ್‌ ಈಗ ಡಿಸಿಎಂ ಹಾಗೂ ಅಧ್ಯಕ್ಷರಾಗಿದ್ದಾರೆ. ಪಕ್ಷ ಸಂಘಟಿಸುವ ದೊಡ್ಡ ಜವಬ್ದಾರಿಯೂ ಸಹ ಇದೆ. ಹೈಕಮಾಂಡ್‌ನವರು ಏನು ತೀರ್ಮಾನ ಮಾಡುತ್ತಾರೋ ನೋಡೋಣ ಎಂದರು.

ಎರಡು ಹುದ್ದೆಯಲ್ಲಿರುವ ಕಾರಣ ಸಹಜವಾಗಿ ಅಧ್ಯಕ್ಷ ಸ್ಥಾನ ಬದಲಾಯಿಸಿ ಎಂದು ಬೇರೆಯವರು ಎಂದು ಹೇಳುತ್ತಾರೆ. ನನಗೂ ಈಗೆ ಹೇಳಿದ್ದರು. ನಾವು ಒಂದು ಸಮುದಾಯ ಸೇರಿ ಸಭೆ ಮಾಡುತ್ತೇವೆ ಎನ್ನುವುದನ್ನು ಹೈಕಮಾಂಡ್‌ ಗಮನಿಸಿದೆ. ಹಾಗೆಯೇ ಪಕ್ಷ ಸಂಘಟನೆ ಆಗುತ್ತಿದೆಯೋ ಅಥವಾ ಇಲ್ಲವೋ ಎಂಬುದನ್ನು ಹೈಕಮಾಂಡ್‌ ನಾಯಕರು ಗಮನಿಸುತ್ತಾರೆ ಎಂದು ಹೇಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

1 hour ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

1 hour ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

1 hour ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

1 hour ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

1 hour ago

ರೈಲ್ವೆ ಕೆಳಸೇತುವೆ ಶಿಥಿಲ

ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ  ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…

2 hours ago