ರಾಜ್ಯ

ಕಾಂಗ್ರೆಸ್‌ನಲ್ಲಿ ನಿಲ್ಲದ ಅಧ್ಯಕ್ಷ ಪಟ್ಟ ಫೈಟ್:‌ ಒಂದು ಹುದ್ದೆ ಪರ ಧ್ವನಿ ಎತ್ತಿದ ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಆಪ್ತ ಸಚಿವ ಸತೀಶ್‌ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಬಹಿರಂಗವಾಗಿಯೇ ಹೇಳಿಕೆ ನೀಡಿದ ಬೆನ್ನಲ್ಲೇ ಈಗ ಗೃಹ ಸಚಿವ ಪರಮೇಶ್ವರ್‌ ಕೂಡ ಒಂದು ಹುದ್ದೆಯ ಪರ ಧ್ವನಿ ಎತ್ತಿದ್ದಾರೆ.

ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಕಾಂಗ್ರೆಸ್‌ನ ಒಳಜಗಳ ಶಮನ ಮಾಡಲು ರಾಜ್ಯದ ನಾಯಕರಿಗೆ ವಾರ್ನ್‌ ಮಾಡಿದ್ದರು. ಆದರೆ ಸುರ್ಜೇವಾಲಾ ಅವರ ವಾರ್ನ್‌ಗೆ ಯಾವುದೇ ಸಚಿವರು ತಲೆಕೆಡಿಸಿಕೊಂಡಿಲ್ಲ. ಹೀಗಾಗಿ ಕಾಂಗ್ರೆಸ್‌ನಲ್ಲಿ ಅಧಿಕಾರ ದಾಹ ದಿನದಿಂದ ದಿನಕ್ಕೆ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ.

ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್‌ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಬಳಿ ಎರಡು ದೊಡ್ಡ ಖಾತೆಯಿದೆ. ರಾಜ್ಯದಲ್ಲಿ ಪಕ್ಷ ಕಟ್ಟುವ ಹೊಣೆಯೂ ಅವರ ಮೇಲಿದೆ. ಹಾಗಾಗಿ ಒಂದು ಹುದ್ದೆ ಬಿಟ್ಟರೆ ಒಳ್ಳೆಯದು ಎಂದು ಹೇಳುವ ಮೂಲಕ ಒಂದು ಹುದ್ದೆಯ ಪರ ಬ್ಯಾಟ್‌ ಬೀಸಿದ್ದಾರೆ.

ಅಂದು ನನಗೂ ಮಂತ್ರಿ ಅಥವಾ ಅಧ್ಯಕ್ಷ ಸ್ಥಾನದ ಪೈಕಿ ಒಂದು ಹುದ್ದೆಗೆ ಅವಕಾಶ ನೀಡಿದ್ದರು. ನಾನು ಅಧ್ಯಕ್ಷ ಸ್ಥಾನ ಆಯ್ಕೆ ಮಾಡಿದ್ದೆ. ಡಿಕೆ ಶಿವಕುಮಾರ್‌ ಈಗ ಡಿಸಿಎಂ ಹಾಗೂ ಅಧ್ಯಕ್ಷರಾಗಿದ್ದಾರೆ. ಪಕ್ಷ ಸಂಘಟಿಸುವ ದೊಡ್ಡ ಜವಬ್ದಾರಿಯೂ ಸಹ ಇದೆ. ಹೈಕಮಾಂಡ್‌ನವರು ಏನು ತೀರ್ಮಾನ ಮಾಡುತ್ತಾರೋ ನೋಡೋಣ ಎಂದರು.

ಎರಡು ಹುದ್ದೆಯಲ್ಲಿರುವ ಕಾರಣ ಸಹಜವಾಗಿ ಅಧ್ಯಕ್ಷ ಸ್ಥಾನ ಬದಲಾಯಿಸಿ ಎಂದು ಬೇರೆಯವರು ಎಂದು ಹೇಳುತ್ತಾರೆ. ನನಗೂ ಈಗೆ ಹೇಳಿದ್ದರು. ನಾವು ಒಂದು ಸಮುದಾಯ ಸೇರಿ ಸಭೆ ಮಾಡುತ್ತೇವೆ ಎನ್ನುವುದನ್ನು ಹೈಕಮಾಂಡ್‌ ಗಮನಿಸಿದೆ. ಹಾಗೆಯೇ ಪಕ್ಷ ಸಂಘಟನೆ ಆಗುತ್ತಿದೆಯೋ ಅಥವಾ ಇಲ್ಲವೋ ಎಂಬುದನ್ನು ಹೈಕಮಾಂಡ್‌ ನಾಯಕರು ಗಮನಿಸುತ್ತಾರೆ ಎಂದು ಹೇಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

13 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

13 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

16 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

18 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

18 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago