ರಾಜ್ಯ

ಸಚಿವ ಸಂಪುಟ ಪುನರಾಚನೆಗೆ ಒತ್ತಡ ; ಕಾಂಗ್ರೆಸ್ ಶಾಸಕರು ಇಂದು ದೆಹಲಿಗೆ.

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರಾಚನೆಗೆ ಒತ್ತಡ ಹೆಚ್ಚಾಗಿದ್ದು, 20ಕ್ಕೂ ಹೆಚ್ಚು ಶಾಸಕರು ಇಂದು (ಭಾನುವಾರ) ದೆಹಲಿಗೆ ತೆರಳುತ್ತಿದ್ದಾರೆ. ಪಕ್ಷದ ಹೈಕಮಾಂಡ್‌ಗೆ ತಮ್ಮ ಬೇಡಿಕೆಗಳನ್ನು ಮುಂದಿಡುವುದು ಇವರ ಉದ್ದೇಶವಾಗಿದೆ.

ಶಾಸಕ ಅಶೋಕ್ ಪಟ್ಟಣ್ ನೇತೃತ್ವದಲ್ಲಿ ತೆರಳುತ್ತಿರುವ ಈ ಶಾಸಕರ ತಂಡದಲ್ಲಿ ಟಿ.ಬಿ. ಜಯಚಂದ್ರ, ಎನ್.ಎಚ್. ಕೊನರಡ್ಡಿ ಸೇರಿದಂತೆ ಹಲವು ಹಿರಿಯ ಶಾಸಕರು ಇದ್ದಾರೆ. ಸರ್ಕಾರ ರಚನೆಯಾಗಿ ಮೂರು ವರ್ಷಗಳು ಕಳೆದಿದ್ದರಿಂದ, ಮುಂದಿನ ಎರಡು ವರ್ಷಗಳ ರಾಜಕೀಯ ಅಗತ್ಯಗಳನ್ನು ಗಮನಿಸಿ ಹೊಸ ಮುಖಗಳನ್ನು ಸಂಪುಟಕ್ಕೆ ಸೇರಿಸಬೇಕು ಎಂದು ಶಾಸಕರು ಆಗ್ರಹಿಸುತ್ತಿದ್ದಾರೆ.

ಕಳಪೆ ಕಾರ್ಯಕ್ಷಮತೆ ತೋರಿದ ಸಚಿವರನ್ನು ತೆಗೆದುಹಾಕುವುದು, ಕನಿಷ್ಠ 20–25 ಹೊಸ ಮುಖಗಳಿಗೆ ಅವಕಾಶ ನೀಡುವುದು ಹಾಗೂ 2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲು ಬಲವರ್ಧನೆ ಮಾಡುವುದು ಸೇರಿದಂತೆ ಇನ್ನೀತರ ಅಂಶಗಳನ್ನಿಟ್ಟುಕೊಂಡು ದೆಹಲಿ ವಿಮಾನ ಹತ್ತಿದ್ದಾರೆ.

ಈಗಾಗಲೇ ಕೆಲವು ಶಾಸಕರು ಹೈಕಮಾಂಡ್‌ಗೆ ಪತ್ರ ಬರೆದು ಸಂಪುಟ ಪುನರಾಚನೆಗೆ ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಸಮೀಕರಣಗಳ ನಡುವೆಯೂ ಈ ಬೇಡಿಕೆ ಹೊಸ ಚರ್ಚೆಗೆ ಕಾರಣವಾಗಿದೆ.

ಹೈಕಮಾಂಡ್ ಈ ಬೇಡಿಕೆಗಳನ್ನು ಹೇಗೆ ಪರಿಗಣಿಸುತ್ತದೆ ಮತ್ತು ಸಂಪುಟ ಪುನರಾಚನೆ ಯಾವಾಗ ನಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಆಂದೋಲನ ಡೆಸ್ಕ್

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

8 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

9 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

9 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

10 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

10 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

11 hours ago