ರಾಜ್ಯ

ದುರ್ಬಲರ ಮೇಲಾಗುವ ದೌರ್ಜನ್ಯ ತಡೆಗಟ್ಟಿ : ಪೊಲೀಸರಿಗೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲ ವರ್ಗದವರು ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ರಾಜಭವನದಲ್ಲಿ ನಡೆದ ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಸರ್ಕಾರವು ಪ್ರತಿ ಜಿಲ್ಲೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ನಾನು ಇತ್ತೀಚೆಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಡಿಸಿಆರ್ ಇ ಪೊಲೀಸ್ ಠಾಣೆಗಳ ಕಾರ್ಯ ಮತ್ತು ಪ್ರಗತಿ ತೃಪ್ತಿದಾಯಕವಿಲ್ಲ ಎಂಬುದನ್ನು ಗಮನಿಸಿದ್ದೇನೆ. ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ದುರ್ಬಲವರ್ಗದವರಿಗೆ ಸುರಕ್ಷತೆ ಒದಗಿಸುವ ಸರ್ಕಾರದ ಉದ್ದೇಶ ಸಫಲವಾಗಬೇಕು. ಇತರೆ ರಾಜ್ಯಗಳಿಗೆ ಹೋಲಿಸಿದರೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ವಿರುದ್ಧ ಶಿಕ್ಷೆಯ ಪ್ರಮಾಣ ಬಹಳ ಕಡಿಮೆಯಿದೆ. ಈ ಬಗ್ಗೆ ಪೊಲೀಸರು ಗಮನಹರಿಸಬೇಕು ಎಂದರು.

ಮುಂಜಾಗ್ರತಾ ಕ್ರಮಗಳಿಂದ ಅಪರಾಧ ತಡೆಗಟ್ಟಬಹುದು
ಇಂದು ವಿಶಿಷ್ಠ ಸೇವೆ ಸಲ್ಲಿಸಿರುವ ಪೊಲೀಸರಿಗೆ ಕೊಡಮಾಡಲಾದ ಸೇವಾಪದಕದ ಹಿಂದೆ ಅವರ ಸೇವಾ ಮನೋಭಾವ, ಪ್ರಮಾಣಿಕತೆ ಹಾಗೂ ಪರಿಶ್ರಮವಿರುತ್ತದೆ. ಸಾಮಾಜಿಕ ಕಳಕಳಿಯೊಂದಿಗೆ ಸೇವೆ ಸಲ್ಲಿಸಿದಾಗ ಮಾತ್ರ ಇಂತಹ ಸಾಧನೆ ಸಾಧ್ಯವಾಗುತ್ತದೆ. ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಜನರ ಆಸ್ತಿಪಾಸ್ತಿ ಸಂರಕ್ಷಿಸುವುದು ಪೊಲೀಸರ ಜವಾಬ್ದಾರಿ. ದೇಶದಲ್ಲಿ ಶಾಂತಿ ನೆಮ್ಮದಿ ನೆಲೆಸುವಲ್ಲಿ ಪೊಲೀಸರ ಪಾತ್ರ ಅತ್ಯಂತ ಮಹತ್ವವಾದುದು. ಸಮಾಜದಲ್ಲಿ ನಡೆಯುವ ಅಪರಾಧಗಳನ್ನು ತಡೆಗಟ್ಟುವ ಜವಾಬ್ದಾರಿ ಸರ್ಕಾರ ಹಾಗೂ ಪೊಲೀಸಿನವರದ್ದಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಬಹಳಷ್ಟು ಅಪರಾಧಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು.

ಸಾಮಾನ್ಯ ಜನರಿಗೆ ನ್ಯಾಯ ಸಿಗುವಂತಾಗಬೇಕು
ಪೊಲೀಸರಿಗೆ ಸಾಮಾಜಿಕ ಬದ್ದತೆಯಿದ್ದರೆ, ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ. ಸಮಾಜದಲ್ಲಿನ ಅಸಮಾನತೆಗಳನ್ನು ತೊಡೆದು ಸಂವಿಧಾನ ನೀಡುವ ರಕ್ಷಣೆಯನ್ನು ಜಾರಿಗೊಳಿಸುವಲ್ಲಿ ಪೊಲೀಸರ ಪಾತ್ರ ಪ್ರಮುಖವಾಗಿದೆ. ಬಲಾಢ್ಯರ ಕೈಯ್ಯಲ್ಲಿ ಅಧಿಕಾರವಿದ್ದರೆ, ದುರ್ಬಲ ವರ್ಗದವರ ಜೀವನ ದುಸ್ತರವಾಗುತ್ತದೆ ಎಂದು ಡಾ.ಬಿ.ಆರ್. ಅಂಬೇಡ್ಕರ್ ಅವರು ತಿಳಿಸಿದ್ದರು. ದುರ್ಬಲವರ್ಗಗಳ ಮೇಲಾಗುವ ದೌಜರ್ನ್ಯಗಳನ್ನು ಪೊಲೀಸರು ತಡೆಗಟ್ಟಬೇಕಿದೆ. ಸಾಮಾನ್ಯ ಜನರಿಗೆ ನ್ಯಾಯ ದೊರಕಿಸಿಕೊಡಬೇಕು. ಪೊಲೀಸರ ಸಂಖ್ಯೆಯ ಬಗ್ಗೆ ಗಮನಹರಿಸದೇ, ಅವರು ತಡೆಗಟ್ಟಿರುವ ಅಪರಾಧಗಳೆಷ್ಟು ಎಂದು ಪರಿಗಣಿಸಬೇಕಾಗಿದೆ ಎಂದರು.

ಇಂದಿನ ಪ್ರಶಸ್ತಿ ವಿಜೇತರ ಸಾಧನೆ ಶ್ಲಾಘನೀಯವಾಗಿದ್ದು, ಇತರರಿಗೆ ಮಾದರಿಯಾಗಬೇಕು. ಸಮಾಜದಲ್ಲಿನ ನ್ಯೂನ್ಯತೆಗಳಿಗೆ ಪರಿಹಾರ ಕಂಡುಕೊಳ್ಳಬೇಕಿದೆ. ಪೊಲೀಸ್ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಆತ್ಮವಿಮರ್ಶೆ ಮಾಡಿಕೊಂಡು ಉತ್ತಮ ಸೇವೆ ಸಲ್ಲಿಸಬೇಕು ಎಂದರು.

ಆಂದೋಲನ ಡೆಸ್ಕ್

Recent Posts

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

2 mins ago

ಕಿಚ್ಚ ಸುದೀಪ್‌ ಮಾರ್ಕ್‌ ಟ್ರೈಲರ್‌ ಅದ್ಧೂರಿ ಬಿಡುಗಡೆ

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ಸಿನಿಮಾ ಟ್ರೈಲರ್‌ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್‌ ಕಾರ್ತಿಕೇಯ-ಸುದೀಪ್‌ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…

15 mins ago

ಉಡುಪಿಯಲ್ಲಿ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್:‌ ಶ್ರೀಕೃಷ್ಣ ಮಠದ ಗೀತೋತ್ಸವದಲ್ಲಿ ಭಾಗಿ

ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್‌ ಕಲ್ಯಾಣ್‌ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…

30 mins ago

ಮಲೆನಾಡಿನಲ್ಲಿ ಮುಂದುವರಿದ ಕಾಫಿ ಕಳವು ಪ್ರಕರಣ

ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…

46 mins ago

ಮದುವೆ ರದ್ದು: ಮೌನಮುರಿದ ಸ್ಮೃತಿ ಮಂದಾನ

ಮುಂಬೈ: ಭಾರತ ಮಹಿಳಾ ಕ್ರಿಕೆಟ್‌ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್‌ ಮುಚ್ಚಲ್‌ ಮದುವೆ ಮುಂದೂಡಿಕೆಯಾಗಿತ್ತು.…

1 hour ago

ಅರಣ್ಯ ಕಾಯುವುದಕ್ಕೆ ರೆಡಿ ಆಯ್ತು ಬೆಲ್ಜಿಯಂ ಶ್ವಾನ

ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…

2 hours ago