Mysore
17
scattered clouds

Social Media

ಭಾನುವಾರ, 15 ಫೆಬ್ರವರಿ 2026
Light
Dark

ಕಾಂಗ್ರೆಸ್‌ ಸರ್ಕಾರದಿಂದ ದರ ಏರಿಕೆ: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ದರ ಏರಿಕೆ ಮಾಡಿ ರಾಜ್ಯ ಜನತೆಯ ರಕ್ತ ಹಿರುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ದಿನಕ್ಕೊಂದು ಸುಳ್ಳು ಹೇಳಿ, ತಿಂಗಳಿಗೊಂದು ದರ ಏರಿಕೆ ಮಾಡುವುದೇ ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರ್ಕಾರದ ಆಡಳಿತದ ವೈಖರಿಯಾಗಿದೆ. ಅಲ್ಲದೇ ಇಂದಿನಿಂದ ಕಾಂಗ್ರೆಸ್ ಕಂಪನಿ ಸರ್ಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ. ರಾಜ್ಯ ಸರ್ಕಾರ ನೆಪ ಮಾತ್ರಕ್ಕೆ ಪಂಚ ಗ್ಯಾರಂಟಿ ಜಾರಿಗೊಳಿಸಿದೆ. ಆದರೆ ಇದರ ದುರುದ್ದೇಶ ಜನರ ಲೂಟಿ ಮಾಡುವುದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಮ್ಮದ್ ಘಜ್ನಿ, ಮಹಮ್ಮದ್ ಘೋರಿ ಕೂಡ ನಾಚುವಂತೆ ಕನ್ನಡಿಗರ ಮೇಲೆ ದರ ಏರಿಕೆ ದಂಡಯಾತ್ರೆಯನ್ನು ಕಾಂಗ್ರೆಸ್‌ ಸರ್ಕಾರ ಮಾಡಿದೆ. ಅದರ ಜೊತೆಗೆ ದುರಾಡಳಿತದಿಂದ ಸಮೃದ್ಧ ಕರ್ನಾಟಕವನ್ನು ಬರ್ಬಾದ್ ಮಾಡಿರುವ ಕಾಂಗ್ರೆಸ್ ಕಂಪನಿ ಸರ್ಕಾರ ದರಬೀಜಾಸುರ ರೂಪ ತಳೆದು ಜನರ ರಕ್ತ ಹೀರುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ನೀರು, ಮೆಟ್ರೋ ರೈಲು, KSRTC ಬಸ್ ಟಿಕೆಟ್, ಹಾಲು (3 ಸಲ ದರ ಏರಿಕೆ), ಮೊಸರು, ವಿದ್ಯುತ್, ಮುದ್ರಾಂಕ, ಮಾರ್ಗದರ್ಶಿ ಮೌಲ್ಯ, ಅಬ್ಕಾರಿ ಸುಂಕ, ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಗಳ ಶುಲ್ಕ, ಶವದ ಮರಣೋತ್ತರ ಪರೀಕ್ಷೆ ಶುಲ್ಕ, ವೈದ್ಯಕೀಯ ಪ್ರಮಾಣ ಪತ್ರದ ದರ, ಲ್ಯಾಬ್ ನಲ್ಲಿ ಪರೀಕ್ಷೆ ಶುಲ್ಕ, ವೃತ್ತಿಪರ ತೆರಿಗೆ, ಬಿತ್ತನೆ ಬೀಜಗಳ ದರವನ್ನು ಏರಿಕೆ ಮಾಡಿರುವ ದರಬೀಜಾಸುರ ಕಾಂಗ್ರೆಸ್ ಸರ್ಕಾರವಾಗಿದೆ ಎಂದು ಲೇವಡಿ ಮಾಡಿದ್ದಾರೆ.

ಇಷ್ಟು ಸಾಲದೆಂಬಂತೆ ಜನರ ಮೇಲೆ ಇಂದಿನಿಂದ (ಏಪ್ರಿಲ್ 1ರಿಂದ) ಕಸದ ಸೆಸ್ ಮೇಲೆ ಹೇರುತ್ತಿದೆ ದರಬೀಜಾಸುರ ಸರ್ಕಾರ, ಕಸ ಹೆಸರಿನಲ್ಲಿ ಕೋಟಿ ಕೋಟಿ ಸುಲಿಗೆ ಮಾಡುವ ಗುರಿಯನ್ನು ಹೊಂದಿದೆ ಎಂದು ಆರೋಪ ಮಾಡಿದ್ದಾರೆ.

Tags:
error: Content is protected !!