ರಾಜ್ಯ

ಕಾಂಗ್ರೆಸ್‌ ಸರ್ಕಾರದಿಂದ ದರ ಏರಿಕೆ: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ದರ ಏರಿಕೆ ಮಾಡಿ ರಾಜ್ಯ ಜನತೆಯ ರಕ್ತ ಹಿರುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ದಿನಕ್ಕೊಂದು ಸುಳ್ಳು ಹೇಳಿ, ತಿಂಗಳಿಗೊಂದು ದರ ಏರಿಕೆ ಮಾಡುವುದೇ ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರ್ಕಾರದ ಆಡಳಿತದ ವೈಖರಿಯಾಗಿದೆ. ಅಲ್ಲದೇ ಇಂದಿನಿಂದ ಕಾಂಗ್ರೆಸ್ ಕಂಪನಿ ಸರ್ಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ. ರಾಜ್ಯ ಸರ್ಕಾರ ನೆಪ ಮಾತ್ರಕ್ಕೆ ಪಂಚ ಗ್ಯಾರಂಟಿ ಜಾರಿಗೊಳಿಸಿದೆ. ಆದರೆ ಇದರ ದುರುದ್ದೇಶ ಜನರ ಲೂಟಿ ಮಾಡುವುದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಮ್ಮದ್ ಘಜ್ನಿ, ಮಹಮ್ಮದ್ ಘೋರಿ ಕೂಡ ನಾಚುವಂತೆ ಕನ್ನಡಿಗರ ಮೇಲೆ ದರ ಏರಿಕೆ ದಂಡಯಾತ್ರೆಯನ್ನು ಕಾಂಗ್ರೆಸ್‌ ಸರ್ಕಾರ ಮಾಡಿದೆ. ಅದರ ಜೊತೆಗೆ ದುರಾಡಳಿತದಿಂದ ಸಮೃದ್ಧ ಕರ್ನಾಟಕವನ್ನು ಬರ್ಬಾದ್ ಮಾಡಿರುವ ಕಾಂಗ್ರೆಸ್ ಕಂಪನಿ ಸರ್ಕಾರ ದರಬೀಜಾಸುರ ರೂಪ ತಳೆದು ಜನರ ರಕ್ತ ಹೀರುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ನೀರು, ಮೆಟ್ರೋ ರೈಲು, KSRTC ಬಸ್ ಟಿಕೆಟ್, ಹಾಲು (3 ಸಲ ದರ ಏರಿಕೆ), ಮೊಸರು, ವಿದ್ಯುತ್, ಮುದ್ರಾಂಕ, ಮಾರ್ಗದರ್ಶಿ ಮೌಲ್ಯ, ಅಬ್ಕಾರಿ ಸುಂಕ, ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಗಳ ಶುಲ್ಕ, ಶವದ ಮರಣೋತ್ತರ ಪರೀಕ್ಷೆ ಶುಲ್ಕ, ವೈದ್ಯಕೀಯ ಪ್ರಮಾಣ ಪತ್ರದ ದರ, ಲ್ಯಾಬ್ ನಲ್ಲಿ ಪರೀಕ್ಷೆ ಶುಲ್ಕ, ವೃತ್ತಿಪರ ತೆರಿಗೆ, ಬಿತ್ತನೆ ಬೀಜಗಳ ದರವನ್ನು ಏರಿಕೆ ಮಾಡಿರುವ ದರಬೀಜಾಸುರ ಕಾಂಗ್ರೆಸ್ ಸರ್ಕಾರವಾಗಿದೆ ಎಂದು ಲೇವಡಿ ಮಾಡಿದ್ದಾರೆ.

ಇಷ್ಟು ಸಾಲದೆಂಬಂತೆ ಜನರ ಮೇಲೆ ಇಂದಿನಿಂದ (ಏಪ್ರಿಲ್ 1ರಿಂದ) ಕಸದ ಸೆಸ್ ಮೇಲೆ ಹೇರುತ್ತಿದೆ ದರಬೀಜಾಸುರ ಸರ್ಕಾರ, ಕಸ ಹೆಸರಿನಲ್ಲಿ ಕೋಟಿ ಕೋಟಿ ಸುಲಿಗೆ ಮಾಡುವ ಗುರಿಯನ್ನು ಹೊಂದಿದೆ ಎಂದು ಆರೋಪ ಮಾಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮುಂದಿನ ಮುಖ್ಯಮಂತ್ರಿ ದಲಿತ ನಾಯಕರೇ ಆಗಬೇಕು : ಹೈಕಮಾಂಡ್‌ಗೆ ಎಚ್‌ಸಿ ಮಹದೇವಪ್ಪ ಒತ್ತಾಯ

ಮಡಿಕೇರಿ : ಕರ್ನಾಟಕದಲ್ಲಿ ಮುಂದಿನ ಮುಖ್ಯಮಂತ್ರಿಯಾಗಿ ದಲಿತ ನಾಯಕರೇ ಆಗಬೇಕು ಎಂದು ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರು ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ.…

10 mins ago

ಮುಂದಿನ ವಾರ ಡಿಸಿಎಂ ಡಿಕೆಶಿ ಮತ್ತೆ ದೆಹಲಿಗೆ

ಬೆಂಗಳೂರು: ನಾನು ದೆಹಲಿಗೆ ಹೋಗುವುದು ಬರುವುದು ಇದ್ದೇ ಇರುತ್ತದೆ. ನಾನು ಹೋಗದೇ ಮತ್ಯಾರು ಹೋಗುತ್ತಾರೆ? ಅವರು ಯಾವಾಗ ಕರೆಯುತ್ತಾರೋ ಆಗೆಲ್ಲಾ…

1 hour ago

ಪರಪ್ಪನ ಅಗ್ರಹಾರ ಜೈಲು ಸೇರಿದ ಶಾಸಕ ಚಂದ್ರು ಲಮಾಣಿ

ಬೆಂಗಳೂರು: ಗದಗ ಜಿಲ್ಲೆ ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರನ್ನು ನ್ಯಾಯಾಂಗ ಬಂಧನಕ್ಕೆ…

1 hour ago

ಕುರ್ಚಿಗಾಗಿ ಜಾತಿ ಎಳೆದು ತಂದಿದ್ದಾರೆ ಎಂಬ ಎಚ್‌ಡಿಕೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್‌

ಬೆಂಗಳೂರು: ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ…

3 hours ago

ಹನೂರು| ಫೆ.25ರಂದು ವಾಂಗಾಳಿ ಅಮ್ಮನವರ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಚಂಗವಾಡಿ ಗ್ರಾಮದ ಭೋವಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ…

3 hours ago

ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಮತ್ತೆ ಆಸ್ಪತ್ರೆಗೆ ದಾಖಲು

ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್‌ ಪಕ್ಷದ ಮುಖ್ಯಸ್ಥ ಶರದ್‌ ಪವಾಋ ಅವರನ್ನು ಇಂದು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್‌ ಪವಾರ್‌…

3 hours ago