ಬೆಂಗಳೂರು: ಕಾಂತಾರ-2 ಸಿನಿಮಾದ ಶೂಟಿಂಗ್ ವೇಳೆ ಅರಣ್ಯ ಭೂಮಿಯಲ್ಲಿ ನಿಯಮ ಉಲ್ಲಂಘನೆಯಾಗಿಲ್ಲ ಎಂಬುದು ಪ್ರಾಥಮಿಕ ವರದಿಯಲ್ಲಿ ತಿಳಿದು ಬಂದಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಅರಣ್ಯ ಕಾಯ್ದೆಯ ಅನ್ವಯ ಹಾಸನ ಜಿಲ್ಲೆಯ ಸಕಲೇಶಪುರದ ಯಸಳೂರು ಭಾಗದಲ್ಲಿ ಜ.3 ರಿಂದ ಜ.25 ರವರೆಗೆ ಸಿನಿಮಾ ಚಿತ್ರೀಕರಣಕ್ಕೆ ಅನುಮತಿ ನೀಡಲಾಗಿದೆ. ಬದಲಾಗಿ ಕಾಂತಾರ-2 ಸಿನಿಮಾದವರು ಅರಣ್ಯ ಭೂಮಿಯಲ್ಲಿ ಶೂಟಿಂಗ್ ನಡೆಸಿಲ್ಲ. ಕಂದಾಯ ಜಮೀನಿನಲ್ಲಿ ಶೂಟಿಂಗ್ ಮಾಡಿದ್ದಾರೆ ಎಂಬುದು ಪ್ರಾಥಮಿಕ ವರದಿಯಲ್ಲಿ ತಿಳಿದಿದೆ. ಆದರೆ ಸಂಪೂರ್ಣ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಕಾಂತಾರ-2 ಚಿತ್ರತಂಡ ಶೂಟಿಂಗ್ ವೇಳೆ ಅರಣ್ಯ ಭೂಮಿಯಲ್ಲಿ ಸ್ಪೋಟಕ ಬಳಸಿ ವನ್ಯಜೀವಿ ಮತ್ತು ಸಸ್ಯ ಸಂಕುಲಕ್ಕೆ ಹಾನಿಯುಂಟು ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಕ್ರಮ ವಹಿಸುವಂತೆ ಅಪರ ಮುಖ್ಯ ಕಾರ್ಯದರ್ಶಿ ಅರಣ್ಯ ಇಲಾಖೆ ನಿರ್ದೇಶಕರಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…
ಬಾ ಮಳೆಯೇ ಬಾ.. ನೊಂದು - ಬೆಂದು ಬಸವಳಿದ ರೈತನ ಬಾಳಿಗೆ ಹೂವಾಗಿ ಬಾ ಕಾದ ಭೂತಾಯ ಒಡಲಿಂಗೆ ಹನಿ…
ಪಡಿತರ ಮತ್ತು ಪಿಂಚಣಿಗೆ ಬಯೋಮೆಟ್ರಿಕ್ ಕಡ್ಡಾಯವಿರುವಾಗ ಚುನಾವಣೆಯಲ್ಲಿ ಇದಕ್ಕೇಕೆ ವಿನಾಯಿತಿ? ಭಾರತದಂತಹ ವಿಶಾಲ ದೇಶದಲ್ಲಿ. ಶೇ.೨೦ ರಿಂದ ೨೨ ರಷ್ಟು…
ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು…
ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರ ನಡವಳಿಕೆಯನ್ನು ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ…
ಬೇಸಿಗೆಯ ರಜೆ ಎಂದರೆ ಮಕ್ಕಳಿಗೆ ಸಂತೋಷದ ಕಾಲ. ಶಾಲೆಯ ಒತ್ತಡದಿಂದ ದೂರವಾಗಿ ಆಟ-ಪಾಠಗಳಲ್ಲಿ ತೊಡಗಿಸಿಕೊಳ್ಳುವ ಸಮಯ. ಆದರೆ ಇತ್ತೀಚಿನ ದಿನಗಳಲ್ಲಿ…